ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ ಗೋವಿಂದ ರೆಡ್ಡಿ ಅವರು ಶಿಲ್ಪಾ ಶರ್ಮಾ ಅವರಿಗೆ ಅಧಿಕಾರ ಹಸ್ತಾಂತರಿಸಿ ಸ್ವಾಗತಿಸಿದರು. ರಾಜ್ಯ ಸರ್ಕಾರವು ಗೋವಿಂದ ರೆಡ್ಡಿ ಅವರನ್ನು ಗದಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿದೆ. ಗೋವಿಂದ ರೆಡ್ಡಿ ಅವರು 2 ವರ್ಷ 5 ತಿಂಗಳು ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಿದ್ದಾರೆ.
2015ನೇ ಬ್ಯಾಚಿನ ಐಎಎಸ್ ಅಧಿಕಾರಿ ಆಗಿರುವ ಶಿಲ್ಪಾ ಶರ್ಮಾ ಅವರು, ಬೆಂಗಳೂರಿನ ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್ನಲ್ಲಿ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕೆಲಸ ಮಾಡಿದ್ದಾರೆ.
ಶಿಲ್ಪಾ ಅವರ ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಉಪವಿಭಾಗಾಧಿಕಾರಿ ಲವೀಶ್ ಒರ್ಡಿಯಾ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ, ಸಿಬ್ಬಂದಿ ವರ್ಗ ಹಾಜರಿದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಚನ್ನಬಸವಣ್ಣ ಎಸ್.ಎಲ್. ಅವರನ್ನು ವರ್ಗಾವಣೆಗೊಳಿಸಿದ ಎರಡು ದಿನಗಳ ನಂತರ ಗೋವಿಂದ ರೆಡ್ಡಿ ಅವರನ್ನು ವರ್ಗ ಮಾಡಲಾಗಿದೆ.