<p><strong>ಬೀದರ್</strong>: ನಗರದ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿನ ಹಿಂದೂ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿರುವ ಕ್ರಮ ತೀವ್ರ ಖಂಡನಾರ್ಹವಾದುದು ಎಂದು ಶ್ರೀರಾಮ ಸೇನೆ, ಬಜರಂಗ ದಳ ತಿಳಿಸಿವೆ.</p>.<p>‘ಜೈಶ್ರೀರಾಮ್’ ಹಾಡು ಹಚ್ಚಿರುವುದಕ್ಕೆ ಹಿಂದೂ ವಿದ್ಯಾರ್ಥಿಗಳು, ಶಿಕ್ಷಕರ ಮೇಲೆ ಹಲ್ಲೆ ನಡೆಸಿರುವುದು ಸರಿಯಲ್ಲ. ಜಿಹಾದಿಗಳ ವಿರುದ್ಧ ಕ್ರಮ ಜರುಗಿಸಬೇಕು. ವಿದ್ಯಾಮಂದಿರದಲ್ಲಿ ಈ ರೀತಿಯ ಮತೀಯ ದಾಳಿ ನಡೆಸಿರುವುದು ನಾಗರೀಕ ಸಮಾಜ ಒಪ್ಪುವುದಿಲ್ಲ. ಜಿಲ್ಲಾ ಆಡಳಿತ ಇದನ್ನು ಸೂಕ್ಷ್ಮವಾಗಿ ಪರಿಗಣಿಸಿ ಜಿಹಾದ್ ವಿದ್ಯಾರ್ಥಿಗಳ ಹಿನ್ನೆಲೆಯನ್ನು ಶೋಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶ್ರೀರಾಮ ಸೇನೆಯ ಮುಖಂಡ ಈಶ್ವರ ಸಿಂಗ್ ಠಾಕೂರ್ ಆಗ್ರಹಿಸಿದ್ದಾರೆ.</p>.<p>ಕಾಲೇಜಿನಲ್ಲಿ ಜೈಶ್ರೀರಾಮ್ ಹಾಡುಗಳನ್ನು ಹಾಕಬಾರದು ಎಂದಾದರೆ ನಮಾಜ್ ಕೂಡ ಮಾಡಬಾರದು. ಇದು ಹೀಗೆ ಮುಂದುವರೆದಲ್ಲಿ ಬಜರಂಗ ದಳದ ವತಿಯಿಂದ ಉಗ್ರ ಸ್ವರೂಪದಲ್ಲಿ ಜಿಲ್ಲೆಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಜಿಲ್ಲಾ ಸಂಯೋಜಕ ಭೀಮಣ್ಣಾ ಸೊರಳ್ಳಿ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ನಗರದ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿನ ಹಿಂದೂ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿರುವ ಕ್ರಮ ತೀವ್ರ ಖಂಡನಾರ್ಹವಾದುದು ಎಂದು ಶ್ರೀರಾಮ ಸೇನೆ, ಬಜರಂಗ ದಳ ತಿಳಿಸಿವೆ.</p>.<p>‘ಜೈಶ್ರೀರಾಮ್’ ಹಾಡು ಹಚ್ಚಿರುವುದಕ್ಕೆ ಹಿಂದೂ ವಿದ್ಯಾರ್ಥಿಗಳು, ಶಿಕ್ಷಕರ ಮೇಲೆ ಹಲ್ಲೆ ನಡೆಸಿರುವುದು ಸರಿಯಲ್ಲ. ಜಿಹಾದಿಗಳ ವಿರುದ್ಧ ಕ್ರಮ ಜರುಗಿಸಬೇಕು. ವಿದ್ಯಾಮಂದಿರದಲ್ಲಿ ಈ ರೀತಿಯ ಮತೀಯ ದಾಳಿ ನಡೆಸಿರುವುದು ನಾಗರೀಕ ಸಮಾಜ ಒಪ್ಪುವುದಿಲ್ಲ. ಜಿಲ್ಲಾ ಆಡಳಿತ ಇದನ್ನು ಸೂಕ್ಷ್ಮವಾಗಿ ಪರಿಗಣಿಸಿ ಜಿಹಾದ್ ವಿದ್ಯಾರ್ಥಿಗಳ ಹಿನ್ನೆಲೆಯನ್ನು ಶೋಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶ್ರೀರಾಮ ಸೇನೆಯ ಮುಖಂಡ ಈಶ್ವರ ಸಿಂಗ್ ಠಾಕೂರ್ ಆಗ್ರಹಿಸಿದ್ದಾರೆ.</p>.<p>ಕಾಲೇಜಿನಲ್ಲಿ ಜೈಶ್ರೀರಾಮ್ ಹಾಡುಗಳನ್ನು ಹಾಕಬಾರದು ಎಂದಾದರೆ ನಮಾಜ್ ಕೂಡ ಮಾಡಬಾರದು. ಇದು ಹೀಗೆ ಮುಂದುವರೆದಲ್ಲಿ ಬಜರಂಗ ದಳದ ವತಿಯಿಂದ ಉಗ್ರ ಸ್ವರೂಪದಲ್ಲಿ ಜಿಲ್ಲೆಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಜಿಲ್ಲಾ ಸಂಯೋಜಕ ಭೀಮಣ್ಣಾ ಸೊರಳ್ಳಿ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>