<p><strong>ಬೀದರ್:</strong> ‘ನಿರ್ದಿಷ್ಟ ಗುರಿ ಹಾಗೂ ಗುರುವಿನ ಮಾರ್ಗದರ್ಶನವಿದ್ದಲ್ಲಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ’ ಎಂದು ನೌಬಾದ್ನ ಜ್ಞಾನ ಶಿವಯೋಗಾಶ್ರಮದ ಡಾ. ರಾಜಶೇಖರ ಶಿವಾಚಾರ್ಯ ನುಡಿದರು.</p>.<p>ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ವಿವೇಕಾನಂದರಾದದ್ದು ಅವರ ಗುರು ರಾಮಕೃಷ್ಣ ಪರಮಹಂಸರ ಮಾರ್ಗದರ್ಶನದಿಂದ’ ಎಂದು ಹೇಳಿದರು.</p>.<p>‘ಯುವಕರು ದುಶ್ಚಟಗಳಿಗೆ ಬಲಿಯಾಗದೆ, ಉತ್ತಮ ಚಾರಿತ್ರ್ಯ ರೂಪಿಸಿಕೊಳ್ಳಬೇಕು. ಸಮಾಜಮುಖಿಯಾಗಿ ಬಾಳಬೇಕು’ ಎಂದರು.</p>.<p>ಪರಿಷತ್ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ದ ಜಾಡರ್ ಮಾತನಾಡಿದರು. ಡಾ. ರವೀಂದ್ರ ಎಕಲಾರಕರ್ ಅಧ್ಯಕ್ಷತೆ ವಹಿಸಿದ್ದರು.</p>.<p>ಕಾಲೇಜು ಆಡಳಿತಾಧಿಕಾರಿ ಕರ್ನಲ್ ಜಿ.ಕೆ. ಸಿಂಗ್, ಪರಿಷತ್ ನಗರ ಘಟಕದ ಕಾರ್ಯದರ್ಶಿ ವಿಕಾಸ ಚೋರಮಲ್ಲೆ, ಪ್ರವೀಣ ಇದ್ದರು. ಅರವಿಂದ ಸುಂದಾಳಕರ್ ನಿರೂಪಿಸಿದರು. ಶಿವಕಾಂತ ಉಪ್ಪೆ ಸ್ವಾಗತಿಸಿದರು. ಆದಿತ್ಯ ಶೀಲವಂತ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ನಿರ್ದಿಷ್ಟ ಗುರಿ ಹಾಗೂ ಗುರುವಿನ ಮಾರ್ಗದರ್ಶನವಿದ್ದಲ್ಲಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ’ ಎಂದು ನೌಬಾದ್ನ ಜ್ಞಾನ ಶಿವಯೋಗಾಶ್ರಮದ ಡಾ. ರಾಜಶೇಖರ ಶಿವಾಚಾರ್ಯ ನುಡಿದರು.</p>.<p>ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ವಿವೇಕಾನಂದರಾದದ್ದು ಅವರ ಗುರು ರಾಮಕೃಷ್ಣ ಪರಮಹಂಸರ ಮಾರ್ಗದರ್ಶನದಿಂದ’ ಎಂದು ಹೇಳಿದರು.</p>.<p>‘ಯುವಕರು ದುಶ್ಚಟಗಳಿಗೆ ಬಲಿಯಾಗದೆ, ಉತ್ತಮ ಚಾರಿತ್ರ್ಯ ರೂಪಿಸಿಕೊಳ್ಳಬೇಕು. ಸಮಾಜಮುಖಿಯಾಗಿ ಬಾಳಬೇಕು’ ಎಂದರು.</p>.<p>ಪರಿಷತ್ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ದ ಜಾಡರ್ ಮಾತನಾಡಿದರು. ಡಾ. ರವೀಂದ್ರ ಎಕಲಾರಕರ್ ಅಧ್ಯಕ್ಷತೆ ವಹಿಸಿದ್ದರು.</p>.<p>ಕಾಲೇಜು ಆಡಳಿತಾಧಿಕಾರಿ ಕರ್ನಲ್ ಜಿ.ಕೆ. ಸಿಂಗ್, ಪರಿಷತ್ ನಗರ ಘಟಕದ ಕಾರ್ಯದರ್ಶಿ ವಿಕಾಸ ಚೋರಮಲ್ಲೆ, ಪ್ರವೀಣ ಇದ್ದರು. ಅರವಿಂದ ಸುಂದಾಳಕರ್ ನಿರೂಪಿಸಿದರು. ಶಿವಕಾಂತ ಉಪ್ಪೆ ಸ್ವಾಗತಿಸಿದರು. ಆದಿತ್ಯ ಶೀಲವಂತ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>