<p><strong>ಬೀದರ್</strong>: ‘ಕ್ಷಯರೋಗಕ್ಕೆ ಯಾರೂ ಭಯ, ಆತಂಕ ಪಡಬೇಕಿಲ್ಲ’ ಎಂದು ಎಫ್ಪಿಎಐ ಸಂಸ್ಥೆ ಅಧ್ಯಕ್ಷ ಡಾ. ನಾಗೇಶ ಪಾಟೀಲ ತಿಳಿಸಿದರು.</p>.<p>ಎಫ್ಪಿಎಐನಿಂದ ನಗರದ ಸಿದ್ದಾರ್ಥ ಪದವಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಕ್ಷಯ ರೋಗದ ಅರಿವು/ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. </p>.<p>ಯುವಜನರೇ ನಮ್ಮ ಭಾರತದ ಶಕ್ತಿ. ಯುವಜನರು ಶಿಕ್ಷಣದ ಜೊತೆಗೆ ಆರೋಗ್ಯದ ಕುರಿತು ಮುತುವರ್ಜಿ ವಹಿಸಬೇಕು. ಕ್ಷಯರೋಗದ ಬಗ್ಗೆ ತಿಳಿವಳಿಕೆ ಅಗತ್ಯ. ಕ್ಷಯರೋಗ ಮುಕ್ತ ಭಾರತಕ್ಕಾಗಿ ಕೆಲಸ ಮಾಡುತ್ತಿದ್ದು, ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.</p>.<p>ಎಫ್ಪಿಎಐ ಸಂಸ್ಥೆ ಶಾಖಾ ವ್ಯವಸ್ಥಾಪಕ ಶ್ರೀನಿವಾಸ ಬಿರಾದಾರ ಮಾತನಾಡಿ, ಕ್ಷಯರೋಗವು ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದೆ. ಇದು ಹೆಚ್ಚಾಗಿ ಹರಡುತ್ತಿದೆ. ಆದಕಾರಣ ಕ್ಷಯರೋಗ ಮುಕ್ತ ದೇಶವನ್ನಾಗಿ ಮಾಡುವುದು ಎಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.</p>.<p>ಸಿದ್ದಾರ್ಥ ಪದವಿ ಕಾಲೇಜಿನ ಪ್ರಾಚಾರ್ಯ ಗೋಪಾಲ ಬಡಿಗೇರ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಜೀವನ ಶೈಲಿಯನ್ನು ರೂಢಿಸಿಕೊಂಡು ಆರೋಗ್ಯವಂತರಾಗಿರಬೇಕು ಎಂದು ತಿಳಿಸಿದರು.</p>.<p>ಕಾಲೇಜಿನ ಉಪ ಪ್ರಾಚಾರ್ಯ ಜಗದೇವಪ್ಪಾ ಚೆಕ್ಕಿ, ಪ್ರಾಧ್ಯಾಪಕರಾದ ಬಸವರಾಜ ಸ್ವಾಮಿ, ಗಿರೀಶ ಮೀಸೆ, ಎಫ್ಪಿಎಐ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ವಿಜಯಲಕ್ಷ್ಮಿ ಹುಡಗೆ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಕ್ಷಯರೋಗಕ್ಕೆ ಯಾರೂ ಭಯ, ಆತಂಕ ಪಡಬೇಕಿಲ್ಲ’ ಎಂದು ಎಫ್ಪಿಎಐ ಸಂಸ್ಥೆ ಅಧ್ಯಕ್ಷ ಡಾ. ನಾಗೇಶ ಪಾಟೀಲ ತಿಳಿಸಿದರು.</p>.<p>ಎಫ್ಪಿಎಐನಿಂದ ನಗರದ ಸಿದ್ದಾರ್ಥ ಪದವಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಕ್ಷಯ ರೋಗದ ಅರಿವು/ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. </p>.<p>ಯುವಜನರೇ ನಮ್ಮ ಭಾರತದ ಶಕ್ತಿ. ಯುವಜನರು ಶಿಕ್ಷಣದ ಜೊತೆಗೆ ಆರೋಗ್ಯದ ಕುರಿತು ಮುತುವರ್ಜಿ ವಹಿಸಬೇಕು. ಕ್ಷಯರೋಗದ ಬಗ್ಗೆ ತಿಳಿವಳಿಕೆ ಅಗತ್ಯ. ಕ್ಷಯರೋಗ ಮುಕ್ತ ಭಾರತಕ್ಕಾಗಿ ಕೆಲಸ ಮಾಡುತ್ತಿದ್ದು, ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.</p>.<p>ಎಫ್ಪಿಎಐ ಸಂಸ್ಥೆ ಶಾಖಾ ವ್ಯವಸ್ಥಾಪಕ ಶ್ರೀನಿವಾಸ ಬಿರಾದಾರ ಮಾತನಾಡಿ, ಕ್ಷಯರೋಗವು ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದೆ. ಇದು ಹೆಚ್ಚಾಗಿ ಹರಡುತ್ತಿದೆ. ಆದಕಾರಣ ಕ್ಷಯರೋಗ ಮುಕ್ತ ದೇಶವನ್ನಾಗಿ ಮಾಡುವುದು ಎಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.</p>.<p>ಸಿದ್ದಾರ್ಥ ಪದವಿ ಕಾಲೇಜಿನ ಪ್ರಾಚಾರ್ಯ ಗೋಪಾಲ ಬಡಿಗೇರ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಜೀವನ ಶೈಲಿಯನ್ನು ರೂಢಿಸಿಕೊಂಡು ಆರೋಗ್ಯವಂತರಾಗಿರಬೇಕು ಎಂದು ತಿಳಿಸಿದರು.</p>.<p>ಕಾಲೇಜಿನ ಉಪ ಪ್ರಾಚಾರ್ಯ ಜಗದೇವಪ್ಪಾ ಚೆಕ್ಕಿ, ಪ್ರಾಧ್ಯಾಪಕರಾದ ಬಸವರಾಜ ಸ್ವಾಮಿ, ಗಿರೀಶ ಮೀಸೆ, ಎಫ್ಪಿಎಐ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ವಿಜಯಲಕ್ಷ್ಮಿ ಹುಡಗೆ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>