ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದರಿಂದ ದೂರದ ಬೇರೆ ಮಾರ್ಗದಲ್ಲಿ ಸಂಚರಿಸುವುದು ಅನಿವಾರ್ಯವಾಗಿದೆ. ಸಾಕಷ್ಟು ಸಲ ಲೋಕೋಪಯೋಗಿ ಇಲಾಖೆ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ. ದ್ವಿಚಕ್ರ ವಾಹನದ ಮೇಲೆ ಸಂಚರಿಸುವ ಮಹಿಳೆಯರು, ಮಕ್ಕಳು ಬಿದ್ದು ಗಾಯ ಮಾಡಿಕೊಳ್ಳುತ್ತಿದ್ದಾರೆ.
ಗುಲಾಂ ಬಡಾಯಿ, ಸಾಮಾಜಿಕ ಕಾರ್ಯಕರ್ತ
ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡುತ್ತಿರುವುದು ನೋಡಿದ್ದೇವೆ. ಆದರೆ, ಅಧಿಕಾರಿಗಳು ಕಾಮಗಾರಿ ಸ್ಥಳದಲ್ಲಿ ಇದ್ದರೂ ಕಳಪೆ ಕಾಮಗಾರಿ ಮಾಡಿರುವುದು ನಿಜಕ್ಕೂ ಬೇಸರ ತಂದಿದೆ
ನಾಗರಾಜ ಕೊರೆ, ಯುವ ಉದ್ಯಮಿ
ರಸ್ತೆ ಹದಗೆಟ್ಟಿದ್ದು ನಿಜ. ದುರಸ್ತಿ ಕಾಮಗಾರಿ ಮಾಡಲಾಗಿದೆ. ಹೆಚ್ಚಿನ ತೂಕದ ವಾಹನಗಳು ಈ ರಸ್ತೆಯಲ್ಲಿ ಸಾಗುತ್ತಿದ್ದರಿಂದ ರಸ್ತೆ ಮತ್ತೆ ಹದಗೆಟ್ಟಿದೆ. ಇಂತಹ ವಾಹನಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.