<p><strong>ಬೀದರ್</strong>: ‘ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ’ ಎಂದು ಅಖಿಲ ಕರ್ನಾಟಕ ಕುಳುವ ಮಹಾಸಂಘದ ಜಿಲ್ಲಾ ಕಾರ್ಯದರ್ಶಿ ಸೂರ್ಯಕಾಂತ ಕಮಠಾಣ ತಿಳಿಸಿದರು.</p>.<p>ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತಂತೆ ಅವೈಜ್ಞಾನಿಕ, ಅತಾರ್ಕಿಕ ಹಾಗೂ ಅಸಮರ್ಥನೀಯ ದತ್ತಾಂಶಗಳನ್ನು ಆಧರಿಸಿ ಮುನ್ನಡೆಯುತ್ತಿರುವುದು ಸರಿಯಲ್ಲ. ಇದು ಸಾಮಾಜಿಕ ನ್ಯಾಯದ ಕಗ್ಗೊಲೆ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಪರಿಶಿಷ್ಟ ಜಾತಿಯ 101 ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಪ್ರಾತಿನಿಧ್ಯದ ಕುರಿತು ಸಮಗ್ರ ಹಾಗೂ ವಸ್ತುನಿಷ್ಠ ಅಂಕಿ-ಅಂಶಗಳ ಕೊರತೆ ಇದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ ಕೈಗೊಳ್ಳದೆ, ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಒತ್ತಡಕ್ಕೆ ಮಣಿದು ಏಕಾಏಕಿ ಒಳಮೀಸಲಾತಿ ವರ್ಗೀಕರಣದ ನಿರ್ಧಾರ ಕೈಗೊಳ್ಳಲು ಹೊರಟಿರುವುದು ಸರಿಯಾದ ನಡೆಯಲ್ಲ ಎಂದರು.</p>.<p>ಮೀಸಲಾತಿ ಹಂಚಿಕೆಯ ಕುರಿತು ಸಮಗ್ರ ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಪ್ರಾತಿನಿಧ್ಯವನ್ನು ಖಾತ್ರಿ ಪಡಿಸಲು ವೈಜ್ಞಾನಿಕ ದತ್ತಾಂಶಗಳನ್ನು ಕ್ರೋಢೀಕರಿಸಬೇಕು. ಅದನ್ನು ವಿಶ್ಲೇಷಿಸಿ ತಜ್ಞರಿಂದ ವರದಿ ಪಡೆದು ಮುಂದುವರೆಯುವುದು ಸೂಕ್ತ ಎಂದು ಹೇಳಿದರು.</p>.<p>101 ಜಾತಿಗಳ ಅಹವಾಲುಗಳನ್ನು ಮುಕ್ತವಾಗಿ ಆಲಿಸಿ, ಸಮುದಾಯಗಳ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಚಿಂತಕರೊಂದಿಗೆ ಸಮಾಲೋಚಿಸಿ, ಒಳಮೀಸಲಾತಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.</p>.<p>ಕುಳುವ ಮಹಾ ಸಂಘದ ಜಿಲ್ಲಾಧ್ಯಕ್ಷ ರವಿಂದ್ರ ಭಂಗೆ, ಜಿಲ್ಲಾ ಗೌರವಾಧ್ಯಕ್ಷ ಬಾಳಪ್ಪ ಸಿಂದನಕೇರಾ, ಬಾಬು ಕೋರವ, ರಘುನಾಥ ಕೋರವ, ರಾಮು ನೌಬಾದ್, ರವಿಕುಮಾರ ಕುಣಸಾರೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ’ ಎಂದು ಅಖಿಲ ಕರ್ನಾಟಕ ಕುಳುವ ಮಹಾಸಂಘದ ಜಿಲ್ಲಾ ಕಾರ್ಯದರ್ಶಿ ಸೂರ್ಯಕಾಂತ ಕಮಠಾಣ ತಿಳಿಸಿದರು.</p>.<p>ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತಂತೆ ಅವೈಜ್ಞಾನಿಕ, ಅತಾರ್ಕಿಕ ಹಾಗೂ ಅಸಮರ್ಥನೀಯ ದತ್ತಾಂಶಗಳನ್ನು ಆಧರಿಸಿ ಮುನ್ನಡೆಯುತ್ತಿರುವುದು ಸರಿಯಲ್ಲ. ಇದು ಸಾಮಾಜಿಕ ನ್ಯಾಯದ ಕಗ್ಗೊಲೆ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಪರಿಶಿಷ್ಟ ಜಾತಿಯ 101 ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಪ್ರಾತಿನಿಧ್ಯದ ಕುರಿತು ಸಮಗ್ರ ಹಾಗೂ ವಸ್ತುನಿಷ್ಠ ಅಂಕಿ-ಅಂಶಗಳ ಕೊರತೆ ಇದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ ಕೈಗೊಳ್ಳದೆ, ಕೆಲವು ಪಟ್ಟಭದ್ರ ಹಿತಾಸಕ್ತಿಗಳ ಒತ್ತಡಕ್ಕೆ ಮಣಿದು ಏಕಾಏಕಿ ಒಳಮೀಸಲಾತಿ ವರ್ಗೀಕರಣದ ನಿರ್ಧಾರ ಕೈಗೊಳ್ಳಲು ಹೊರಟಿರುವುದು ಸರಿಯಾದ ನಡೆಯಲ್ಲ ಎಂದರು.</p>.<p>ಮೀಸಲಾತಿ ಹಂಚಿಕೆಯ ಕುರಿತು ಸಮಗ್ರ ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಪ್ರಾತಿನಿಧ್ಯವನ್ನು ಖಾತ್ರಿ ಪಡಿಸಲು ವೈಜ್ಞಾನಿಕ ದತ್ತಾಂಶಗಳನ್ನು ಕ್ರೋಢೀಕರಿಸಬೇಕು. ಅದನ್ನು ವಿಶ್ಲೇಷಿಸಿ ತಜ್ಞರಿಂದ ವರದಿ ಪಡೆದು ಮುಂದುವರೆಯುವುದು ಸೂಕ್ತ ಎಂದು ಹೇಳಿದರು.</p>.<p>101 ಜಾತಿಗಳ ಅಹವಾಲುಗಳನ್ನು ಮುಕ್ತವಾಗಿ ಆಲಿಸಿ, ಸಮುದಾಯಗಳ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಚಿಂತಕರೊಂದಿಗೆ ಸಮಾಲೋಚಿಸಿ, ಒಳಮೀಸಲಾತಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.</p>.<p>ಕುಳುವ ಮಹಾ ಸಂಘದ ಜಿಲ್ಲಾಧ್ಯಕ್ಷ ರವಿಂದ್ರ ಭಂಗೆ, ಜಿಲ್ಲಾ ಗೌರವಾಧ್ಯಕ್ಷ ಬಾಳಪ್ಪ ಸಿಂದನಕೇರಾ, ಬಾಬು ಕೋರವ, ರಘುನಾಥ ಕೋರವ, ರಾಮು ನೌಬಾದ್, ರವಿಕುಮಾರ ಕುಣಸಾರೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>