ಜಿಲ್ಲಾ ಮಾನಸಿಕ ವೈದ್ಯರಾದ ಡಾ. ಅಮಲ್ ಶರೀಫ್ ಮಾತನಾಡಿ, ಅತಿಯಾದ ಮೊಬೈಲ್ ಹಾಗೂ ಅಂತರ್ಜಾಲದಿಂದ ವಿದ್ಯಾರ್ಥಿಗಳು ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದ ಅವರು ದೈಹಿಕ ಮತ್ತು ಮಾನಸಿಕ ಕಾಯಿಲೆಗಳಿಗೆ ಒಳಗಾಗಿ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಸೂಕ್ತ ಮಾಹಿತಿ, ಸಲಹೆ, ಆಪ್ತ ಸಮಾಲೋಚನೆ, ಚಿಕಿತ್ಸೆ ಪಡೆದುಕೊಂಡರೆ ಅದರಿಂದ ಹೊರಬರಬಹುದು ಎಂದು ಹೇಳಿದರು.