<p><strong>ಮಹದೇಶ್ವರ ಬೆಟ್ಟ: </strong>ಯುಗಾದಿ ಜಾತ್ರೆಯ ಅಂಗವಾಗಿ ಇಲ್ಲಿನ ಮಲೆಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ಅಮಾವಾಸ್ಯೆಯ ವಿಶೇಷ ಪೂಜೆ, ಉತ್ಸವ ಜರುಗಿದವು.</p>.<p>ಇದೇ 19ರಿಂದಲೇ ಯುಗಾದಿ ಜಾತ್ರೆ ಆರಂಭವಾಗಿದ್ದು, ಬುಧವಾರ (ಮಾರ್ಚ್ 22) ಬ್ರಹ್ಮರಥೋತ್ಸವದ ಮೂಲಕ ಜಾತ್ರೆಗೆ ತೆರೆ ಬೀಳಲಿದೆ.</p>.<p>ಮಂಗಳವಾರ ಅಮಾವಾಸ್ಯೆ ಅಂಗವಾಗಿ ಬೆಳಿಗ್ಗೆ 8ರಿಂದ 9 ಗಂಟೆವರೆಗೆ, ರಾತ್ರಿ 7.30ರಿಂದ 8.30ರವರೆಗೆ ದೇವಾಲಯದಲ್ಲಿ ಮಹದೇಶ್ವರಸ್ವಾಮಿಗೆ ಅಮಾವಾಸ್ಯೆಯ ವಿಶೇಷ ಪೂಜೆ ನಡೆದವು. </p>.<p class="Subhead">ತಮಿಳುನಾಡಿನಿಂದ ಹೆಚ್ಚು ಭಕ್ತರು: ಚಂದ್ರಮಾನ ಯುಗಾದಿ ಜಾತ್ರೆಗೆ ರಾಜ್ಯ ಅಲ್ಲದೆ ನೆರೆಯ ತಮಿಳುನಾಡಿನ ಹೊಸೂರು, ಕೃಷ್ಣಗಿರಿ, ಡೆಂಕಣಿಕೋಟೆ, ಧರ್ಮಪುರಿ, ಸೇಲಂ ಹಾಗೂ ಕೊಯಮತ್ತೂರು ಭಾಗಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. </p>.<p>ಮೂರು ದಿನಗಳಿಂದ ಬೆಟ್ಟದಲ್ಲಿ ಭಕ್ತರ ಸಂಖ್ಯೆ ಹೆಚ್ಚಿದ್ದು, ಮಾದಪ್ಪನ ದರ್ಶನ ಪಡೆಯುತ್ತಿದ್ದಾರೆ. ಪಾದಯಾತ್ರೆ ಮೂಲಕ ಬೆಟ್ಟಕ್ಕೆ ಬಂದಿರುವ ಸಾವಿರಾರು ಭಕ್ತರು, ದೇವಾಲಯ ಪ್ರಾಂಗಣ, ರಂಗಮಂದಿರ, ಬಸ್ ನಿಲ್ದಾಣ, ರಾಜಗೋಪುರದ ಎಡ-ಬಲ ಬದಿಯ ಆವರಣ, ದಾಸೋಹ, ಮಹದೇಶ್ವರ ಕಲ್ಯಾಣ ಮಂಟಪ ಬಳಿ, ಸಾಲೂರು ಮಠದ ಆವರಣ<br />ಸೇರಿದಂತೆ ವಿವಿಧ ಕಡೆಗಳಲ್ಲಿ ಬಿಡಾರ ಹೂಡಿದ್ದಾರೆ.</p>.<p>ಯುಗಾದಿ ಸಮಯದಲ್ಲಿ ತಮಿಳುನಾಡಿನಿಂದ ಬರುವ ಭಕ್ತರು ಮಹಾರಥೋತ್ಸವದಲ್ಲಿ ಪಾಲ್ಗೊಂಡು ವಿಶೇಷವಾಗಿ ಆಲಂಬಾಡಿ ಬಸವೇಶ್ವರ ಹಾಗೂ ಬೆಳ್ಳಿ ಬಸವ ವಾಹನ ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. </p>.<p class="Subhead">ಯುಗಾದಿ ಹಬ್ಬದ ದಿನ ಬೆಳಿಗ್ಗೆ ಮಹದೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ನಡೆಯಲಿದ್ದು, ಬೇಡಗಂಪಣ ಅರ್ಚಕರು ತೇರನ್ನು ಸಿದ್ಧಗೊಳಿಸಿದ್ದಾರೆ.</p>.<p>ಪ್ರತಿ ವರ್ಷ ದೊಡ್ಡತೇರಿಗೆ ಸಂಪೂರ್ಣವಾಗಿ ಹಸಿ ಬಿದಿರು ಬಳಕೆ ಮಾಡಲಾಗುತ್ತದೆ. ಬಿದಿರು ಹಾಗೂ ಹುರಿಯ ಹಗ್ಗಗಳಿಂದ 72 ಮೊಳ ಎತ್ತರದಲ್ಲಿ ರಥ ಇರಲಿದೆ. 52 ಅಡಿ ತೇರಿನಲ್ಲಿ 4 ಚೌಕೃತ ಪೆಟ್ಟಿಗೆ ನಿರ್ಮಾಣವಾಗಲಿದೆ. ಬಣ್ಣ ಬಣ್ಣದ ವಸ್ತ್ರಗಳಿಂದ ಅಲಂಕರಿಸಲಾಗಿದ್ದು, ತಳಿರು ತೋರಣಗಳಿಂದ ರಥ ಕಂಗೊಳಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇಶ್ವರ ಬೆಟ್ಟ: </strong>ಯುಗಾದಿ ಜಾತ್ರೆಯ ಅಂಗವಾಗಿ ಇಲ್ಲಿನ ಮಲೆಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ಅಮಾವಾಸ್ಯೆಯ ವಿಶೇಷ ಪೂಜೆ, ಉತ್ಸವ ಜರುಗಿದವು.</p>.<p>ಇದೇ 19ರಿಂದಲೇ ಯುಗಾದಿ ಜಾತ್ರೆ ಆರಂಭವಾಗಿದ್ದು, ಬುಧವಾರ (ಮಾರ್ಚ್ 22) ಬ್ರಹ್ಮರಥೋತ್ಸವದ ಮೂಲಕ ಜಾತ್ರೆಗೆ ತೆರೆ ಬೀಳಲಿದೆ.</p>.<p>ಮಂಗಳವಾರ ಅಮಾವಾಸ್ಯೆ ಅಂಗವಾಗಿ ಬೆಳಿಗ್ಗೆ 8ರಿಂದ 9 ಗಂಟೆವರೆಗೆ, ರಾತ್ರಿ 7.30ರಿಂದ 8.30ರವರೆಗೆ ದೇವಾಲಯದಲ್ಲಿ ಮಹದೇಶ್ವರಸ್ವಾಮಿಗೆ ಅಮಾವಾಸ್ಯೆಯ ವಿಶೇಷ ಪೂಜೆ ನಡೆದವು. </p>.<p class="Subhead">ತಮಿಳುನಾಡಿನಿಂದ ಹೆಚ್ಚು ಭಕ್ತರು: ಚಂದ್ರಮಾನ ಯುಗಾದಿ ಜಾತ್ರೆಗೆ ರಾಜ್ಯ ಅಲ್ಲದೆ ನೆರೆಯ ತಮಿಳುನಾಡಿನ ಹೊಸೂರು, ಕೃಷ್ಣಗಿರಿ, ಡೆಂಕಣಿಕೋಟೆ, ಧರ್ಮಪುರಿ, ಸೇಲಂ ಹಾಗೂ ಕೊಯಮತ್ತೂರು ಭಾಗಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. </p>.<p>ಮೂರು ದಿನಗಳಿಂದ ಬೆಟ್ಟದಲ್ಲಿ ಭಕ್ತರ ಸಂಖ್ಯೆ ಹೆಚ್ಚಿದ್ದು, ಮಾದಪ್ಪನ ದರ್ಶನ ಪಡೆಯುತ್ತಿದ್ದಾರೆ. ಪಾದಯಾತ್ರೆ ಮೂಲಕ ಬೆಟ್ಟಕ್ಕೆ ಬಂದಿರುವ ಸಾವಿರಾರು ಭಕ್ತರು, ದೇವಾಲಯ ಪ್ರಾಂಗಣ, ರಂಗಮಂದಿರ, ಬಸ್ ನಿಲ್ದಾಣ, ರಾಜಗೋಪುರದ ಎಡ-ಬಲ ಬದಿಯ ಆವರಣ, ದಾಸೋಹ, ಮಹದೇಶ್ವರ ಕಲ್ಯಾಣ ಮಂಟಪ ಬಳಿ, ಸಾಲೂರು ಮಠದ ಆವರಣ<br />ಸೇರಿದಂತೆ ವಿವಿಧ ಕಡೆಗಳಲ್ಲಿ ಬಿಡಾರ ಹೂಡಿದ್ದಾರೆ.</p>.<p>ಯುಗಾದಿ ಸಮಯದಲ್ಲಿ ತಮಿಳುನಾಡಿನಿಂದ ಬರುವ ಭಕ್ತರು ಮಹಾರಥೋತ್ಸವದಲ್ಲಿ ಪಾಲ್ಗೊಂಡು ವಿಶೇಷವಾಗಿ ಆಲಂಬಾಡಿ ಬಸವೇಶ್ವರ ಹಾಗೂ ಬೆಳ್ಳಿ ಬಸವ ವಾಹನ ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. </p>.<p class="Subhead">ಯುಗಾದಿ ಹಬ್ಬದ ದಿನ ಬೆಳಿಗ್ಗೆ ಮಹದೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ನಡೆಯಲಿದ್ದು, ಬೇಡಗಂಪಣ ಅರ್ಚಕರು ತೇರನ್ನು ಸಿದ್ಧಗೊಳಿಸಿದ್ದಾರೆ.</p>.<p>ಪ್ರತಿ ವರ್ಷ ದೊಡ್ಡತೇರಿಗೆ ಸಂಪೂರ್ಣವಾಗಿ ಹಸಿ ಬಿದಿರು ಬಳಕೆ ಮಾಡಲಾಗುತ್ತದೆ. ಬಿದಿರು ಹಾಗೂ ಹುರಿಯ ಹಗ್ಗಗಳಿಂದ 72 ಮೊಳ ಎತ್ತರದಲ್ಲಿ ರಥ ಇರಲಿದೆ. 52 ಅಡಿ ತೇರಿನಲ್ಲಿ 4 ಚೌಕೃತ ಪೆಟ್ಟಿಗೆ ನಿರ್ಮಾಣವಾಗಲಿದೆ. ಬಣ್ಣ ಬಣ್ಣದ ವಸ್ತ್ರಗಳಿಂದ ಅಲಂಕರಿಸಲಾಗಿದ್ದು, ತಳಿರು ತೋರಣಗಳಿಂದ ರಥ ಕಂಗೊಳಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>