<p><strong>ಕೊಳ್ಳೇಗಾಲ</strong> (ಚಾಮರಾಜನಗರ ಜಿಲ್ಲೆ): ತಾಲ್ಲೂಕಿನ ಭರಚುಕ್ಕಿ ಜಲಪಾತದ ತುದಿಯಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ಹದಿನೈದಕ್ಕೂ ಹೆಚ್ಚು ಯುವಕರಿಗೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಗಣೇಶ್ ಬಸ್ಕಿ ಹೊಡೆಸಿ ಎಚ್ಚರಿಕೆ ನೀಡಿದ್ದಾರೆ.</p>.<p>ಜಲಪಾತದ ನೀರು ಧುಮ್ಮಿಕ್ಕುವ ಸ್ಥಳದ ಸಮೀಪವೇ ಬಂದು ನಿಂತು ಅಪಾಯಕಾರಿ ಸ್ಥಳದಲ್ಲಿ ಕೆಳಗಿಳಿಯುತ್ತಿದ್ದಾರೆಂಬ ಮಾಹಿತಿ ದೊರೆತ ಕೂಡಲೇ ಅಧಿಕಾರಿಯು ಯುವಕರನ್ನು ಹಿಂದಕ್ಕೆ ಕರೆಸಿ ಬಸ್ಕಿ ಹೊಡೆಸಿ, ‘ಫೋಟೊ ಹುಚ್ಚಿಗಾಗಿ ಪ್ರಾಣಕ್ಕೆ ಅಪಾಯ ತಂದುಕೊಳ್ಳಬೇಡಿ’ ಎಂದು ಬುದ್ಧಿವಾದ ಹೇಳಿ ಕಳಿಸಿದರು.</p>.<p>‘ಪ್ರವೇಶ ನಿಷೇಧಿಸಿದ ಸೂಚನಾ ಫಲಕವಿದ್ದರೂ ಯುವಕರು ಸೆಲ್ಫಿ ಹುಚ್ಚಿಗಾಗಿ ನದಿ ಸೇರಿದಂತೆ ಅನೇಕ ಜಲಪಾತದ ತುದಿಗೆ ಹೋಗುತ್ತಿದ್ದಾರೆ. ಹೀಗಾಗಿ ಯುವಕರಿಗೆ ಬುದ್ಧಿ ಹೇಳಿ ಬಸ್ಕಿ ಹೊಡೆಸಿ ಎಚ್ಚರಿಕೆ ನೀಡಲಾಗಿದೆ. ಘಟನೆಗಳು ಮರುಕಳಿಸಿದರೆ ಪ್ರಕರಣ ದಾಖಲಿಸಲಾಗುವುದು’ ಎಂದು ಅಧಿಕಾರಿಯು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ</strong> (ಚಾಮರಾಜನಗರ ಜಿಲ್ಲೆ): ತಾಲ್ಲೂಕಿನ ಭರಚುಕ್ಕಿ ಜಲಪಾತದ ತುದಿಯಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ಹದಿನೈದಕ್ಕೂ ಹೆಚ್ಚು ಯುವಕರಿಗೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಗಣೇಶ್ ಬಸ್ಕಿ ಹೊಡೆಸಿ ಎಚ್ಚರಿಕೆ ನೀಡಿದ್ದಾರೆ.</p>.<p>ಜಲಪಾತದ ನೀರು ಧುಮ್ಮಿಕ್ಕುವ ಸ್ಥಳದ ಸಮೀಪವೇ ಬಂದು ನಿಂತು ಅಪಾಯಕಾರಿ ಸ್ಥಳದಲ್ಲಿ ಕೆಳಗಿಳಿಯುತ್ತಿದ್ದಾರೆಂಬ ಮಾಹಿತಿ ದೊರೆತ ಕೂಡಲೇ ಅಧಿಕಾರಿಯು ಯುವಕರನ್ನು ಹಿಂದಕ್ಕೆ ಕರೆಸಿ ಬಸ್ಕಿ ಹೊಡೆಸಿ, ‘ಫೋಟೊ ಹುಚ್ಚಿಗಾಗಿ ಪ್ರಾಣಕ್ಕೆ ಅಪಾಯ ತಂದುಕೊಳ್ಳಬೇಡಿ’ ಎಂದು ಬುದ್ಧಿವಾದ ಹೇಳಿ ಕಳಿಸಿದರು.</p>.<p>‘ಪ್ರವೇಶ ನಿಷೇಧಿಸಿದ ಸೂಚನಾ ಫಲಕವಿದ್ದರೂ ಯುವಕರು ಸೆಲ್ಫಿ ಹುಚ್ಚಿಗಾಗಿ ನದಿ ಸೇರಿದಂತೆ ಅನೇಕ ಜಲಪಾತದ ತುದಿಗೆ ಹೋಗುತ್ತಿದ್ದಾರೆ. ಹೀಗಾಗಿ ಯುವಕರಿಗೆ ಬುದ್ಧಿ ಹೇಳಿ ಬಸ್ಕಿ ಹೊಡೆಸಿ ಎಚ್ಚರಿಕೆ ನೀಡಲಾಗಿದೆ. ಘಟನೆಗಳು ಮರುಕಳಿಸಿದರೆ ಪ್ರಕರಣ ದಾಖಲಿಸಲಾಗುವುದು’ ಎಂದು ಅಧಿಕಾರಿಯು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>