<p><strong>ಯಳಂದೂರು:</strong> ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣ ಸ್ಥಳ ಪರಿಶೀಲನೆ ಸೇರಿದಂತೆ, ಅಸ್ಪತ್ರೆ, ಹಾಸ್ಟೆಲ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕೈಗೊಂಡಿರುವ ಬಗ್ಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಭಾನುವಾರ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ತಾಲ್ಲೂಕಿನ ಹೊನ್ನೂರು ಗ್ರಾಮದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿರ್ವಹಿಸುವ ವಸತಿ ನಿಲಯಕ್ಕೆ ಭೇಟಿ ನೀಡಿ ಇಲ್ಲಿನ ನೈರ್ಮಲ್ಯ, ಸ್ವಚ್ಛತೆ ಪರಿಶೀಲಿಸಿದರು. ಮಕ್ಕಳ ಜೊತೆ ಸಂವಾದ ನಡೆಸಿದರು.</p>.<p>ಶಿಲ್ಪಾನಾಗ್ ಮಾತನಾಡಿ, ‘ವಸತಿ ನಿಲಯಗಳಲ್ಲಿ ಮಕ್ಕಳಿಗೆ ಎಲ್ಲಾ ರೀತಿಯ ಸವಲತ್ತು ಒದಗಿಸಬೇಕು. ಡೆಂಗಿ ಸಾಂಕ್ರಾಮಿಕದ ವಿರುದ್ಧ.ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿಯಲ್ಲಿ ಸೊಳ್ಳೆ ನಿಯಂತ್ರಣ, ಬಿಸಿನೀರು ವ್ಯವಸ್ಥೆ, ಗುಣಮಟ್ಟದ ಆಹಾರ ವಿತರಿಸಿ ಆರೋಗ್ಯದ ಮೇಲೆ ನಿಗಾ ಇಡಬೇಕು. ಪಟ್ಟಣದಲ್ಲಿ ಕ್ರೀಡಾಂಗಣಕ್ಕೆ 2 ಎಕರೆ 8 ಗುಂಟೆ ಸ್ಥಳ ಇದೆ. ಈ ಬಗ್ಗೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದರು.</p>.<p>ವಸತಿ ನಿಲಯದ ಮಕ್ಕಳ ಜೊತೆ ಸಂವಾದ ನಡೆಸಿದ ಜಿಲ್ಲಾಧಿಕಾರಿ, ಮಕ್ಕಳ ಕನ್ನಡ ಮತ್ತು ಇಂಗ್ಲಿಷ್ ಕಾಗುಣಿತ ಮತ್ತು ಕೈಬರಹಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಚಿಣ್ಣರ ಕಲಿಕೆ, ಆಸಕ್ತಿಗಳ ಬಗ್ಗೆ ಚರ್ಚಿಸಿದರು. ಹಾಸ್ಟೆಲ್ನಲ್ಲಿ ಮಕ್ಕಳಿಗೆ ಹೊಸ ಹಾಸಿಗೆ ನೀಡಲು ಕ್ರಮ ವಹಿಸುವಂತೆ ಎಚ್ಚರಿಸಿದರು.</p>.<p>ಶಾಸಕ ಕೃಷ್ಣಮೂರ್ತಿ ಮಾತನಾಡಿ, ‘ಪಟ್ಟಣದ ಕಾಲೇಜು ಮೈದಾನದಲ್ಲಿ ಕ್ರೀಡಾಂಗಣ ನಿರ್ಮಿಸಲು ಹೆಚ್ಚಿನ ಸ್ಥಳಾವಕಾಶ ಅಗತ್ಯವಿದೆ. ಕಾಲೇಜಿಗೆ ಹೊಂದಿಕೊಂಡ ನಿವೇಶನ ಸಿಕ್ಕರೆ ವಿಸ್ತಾರವಾದ ಗುಣಮಟ್ಟದ ಕ್ರೀಡಾಂಗಣ ನಿರ್ಮಿಸಬಹುದು. ಈ ದಿಸೆಯಲ್ಲಿ ಪರಿಶೀಲಿಸಿ ವರದಿ ನೀಡುವಂತೆ’ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ. ತಹಶೀಲ್ದಾರ್ ಆರ್.ಜಯಪ್ರಕಾಶ್, ಕಂದಾಯ ನಿರೀಕ್ಷಕ ಎಂ.ಎಸ್.ಯದುಗಿರಿ ಹಾಗೂ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು:</strong> ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣ ಸ್ಥಳ ಪರಿಶೀಲನೆ ಸೇರಿದಂತೆ, ಅಸ್ಪತ್ರೆ, ಹಾಸ್ಟೆಲ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕೈಗೊಂಡಿರುವ ಬಗ್ಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಭಾನುವಾರ ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ತಾಲ್ಲೂಕಿನ ಹೊನ್ನೂರು ಗ್ರಾಮದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿರ್ವಹಿಸುವ ವಸತಿ ನಿಲಯಕ್ಕೆ ಭೇಟಿ ನೀಡಿ ಇಲ್ಲಿನ ನೈರ್ಮಲ್ಯ, ಸ್ವಚ್ಛತೆ ಪರಿಶೀಲಿಸಿದರು. ಮಕ್ಕಳ ಜೊತೆ ಸಂವಾದ ನಡೆಸಿದರು.</p>.<p>ಶಿಲ್ಪಾನಾಗ್ ಮಾತನಾಡಿ, ‘ವಸತಿ ನಿಲಯಗಳಲ್ಲಿ ಮಕ್ಕಳಿಗೆ ಎಲ್ಲಾ ರೀತಿಯ ಸವಲತ್ತು ಒದಗಿಸಬೇಕು. ಡೆಂಗಿ ಸಾಂಕ್ರಾಮಿಕದ ವಿರುದ್ಧ.ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿಯಲ್ಲಿ ಸೊಳ್ಳೆ ನಿಯಂತ್ರಣ, ಬಿಸಿನೀರು ವ್ಯವಸ್ಥೆ, ಗುಣಮಟ್ಟದ ಆಹಾರ ವಿತರಿಸಿ ಆರೋಗ್ಯದ ಮೇಲೆ ನಿಗಾ ಇಡಬೇಕು. ಪಟ್ಟಣದಲ್ಲಿ ಕ್ರೀಡಾಂಗಣಕ್ಕೆ 2 ಎಕರೆ 8 ಗುಂಟೆ ಸ್ಥಳ ಇದೆ. ಈ ಬಗ್ಗೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದರು.</p>.<p>ವಸತಿ ನಿಲಯದ ಮಕ್ಕಳ ಜೊತೆ ಸಂವಾದ ನಡೆಸಿದ ಜಿಲ್ಲಾಧಿಕಾರಿ, ಮಕ್ಕಳ ಕನ್ನಡ ಮತ್ತು ಇಂಗ್ಲಿಷ್ ಕಾಗುಣಿತ ಮತ್ತು ಕೈಬರಹಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಚಿಣ್ಣರ ಕಲಿಕೆ, ಆಸಕ್ತಿಗಳ ಬಗ್ಗೆ ಚರ್ಚಿಸಿದರು. ಹಾಸ್ಟೆಲ್ನಲ್ಲಿ ಮಕ್ಕಳಿಗೆ ಹೊಸ ಹಾಸಿಗೆ ನೀಡಲು ಕ್ರಮ ವಹಿಸುವಂತೆ ಎಚ್ಚರಿಸಿದರು.</p>.<p>ಶಾಸಕ ಕೃಷ್ಣಮೂರ್ತಿ ಮಾತನಾಡಿ, ‘ಪಟ್ಟಣದ ಕಾಲೇಜು ಮೈದಾನದಲ್ಲಿ ಕ್ರೀಡಾಂಗಣ ನಿರ್ಮಿಸಲು ಹೆಚ್ಚಿನ ಸ್ಥಳಾವಕಾಶ ಅಗತ್ಯವಿದೆ. ಕಾಲೇಜಿಗೆ ಹೊಂದಿಕೊಂಡ ನಿವೇಶನ ಸಿಕ್ಕರೆ ವಿಸ್ತಾರವಾದ ಗುಣಮಟ್ಟದ ಕ್ರೀಡಾಂಗಣ ನಿರ್ಮಿಸಬಹುದು. ಈ ದಿಸೆಯಲ್ಲಿ ಪರಿಶೀಲಿಸಿ ವರದಿ ನೀಡುವಂತೆ’ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ. ತಹಶೀಲ್ದಾರ್ ಆರ್.ಜಯಪ್ರಕಾಶ್, ಕಂದಾಯ ನಿರೀಕ್ಷಕ ಎಂ.ಎಸ್.ಯದುಗಿರಿ ಹಾಗೂ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>