<p><strong>ಗುಂಡ್ಲುಪೇಟೆ:</strong> ತಾಲ್ಲೂಕಿನ ನಿಟ್ರೆ, ಬೊಮ್ಮನಹಳ್ಳಿ ಗ್ರಾಮಗಳಲ್ಲಿ ಮಂಗಳವಾರ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಸಂವಿಧಾನ ಜಾಗೃತಿ ಜಾಥಾ ನಡೆಯಿತು. </p>.<p>ನಿಟ್ರೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಮಹೇಶ್, ಉಪಾಧ್ಯಕ್ಷ ಎಸ್.ಸ್ವಾಮಿ, ಸದಸ್ಯರು ಗ್ರಾಮದ ಯಜಮಾನರು, ವಿವಿಧ ಸಂಘಟನೆಗಳ ಮುಖಂಡರು, ಶಾಲಾ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು ಜಾಥಾವನ್ನು ಬರಮಾಡಿಕೊಂಡರು.</p>.<p>ಸತ್ತಿಗೆ, ಸೂರಪಾನಿಯೊಂದಿಗೆ ಗಾರುಡಿ ಬೊಂಬೆ, ಮರಗಾಲು ಕುಣಿತ, ಕಂಸಾಳೆ, ನಾದಸ್ವರ, ಡೊಳ್ಳು ಸೇರಿದಂತೆ ಇನ್ನಿತರ ಹಲವಾರು ಕಲಾತಂಡಗಳೊಂದಿಗೆ ಗ್ರಾಮದಲ್ಲಿ ಜಾಗೃತಿ ಜಾಥಾ ಸಂಚರಿಸಿತು. ವಿದ್ಯಾರ್ಥಿಗಳು, ಮಹಿಳೆಯರು ಸಂಭ್ರಮದಿಂದ ಪಾಲ್ಗೊಂಡರು. ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. </p>.<p>ಡಾ.ಬಿ.ಆರ್.ಅಂಬೇಡ್ಕರ್, ಇನ್ನಿತರ ರಾಷ್ಟ್ರ ನಾಯಕರ ವೇಷಭೂಷಣ ಧರಿಸಿದ ಮಕ್ಕಳು ವಾಹನದಲ್ಲಿ ಕುಳಿತು ಮೆರವಣಿಗೆಯಲ್ಲಿ ಪಾಲ್ಗೊಂಡರು. ಸೈಕಲ್ ರ್ಯಾಲಿಯೂ ನಡೆಯಿತು.</p>.<p>ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಂದ ‘ಸಂವಿಧಾನ ಸಂಸತ್ತು’ ನಾಟಕ ಪ್ರದರ್ಶನ ನಡೆಯಿತು. ಸಂವಿಧಾನ ಕುರಿತು ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಬೊಮ್ಮನಹಳ್ಳಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಸ್ತಬ್ದ ಚಿತ್ರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಲಾಯಿತು. ಕಳಶ ಹಿಡಿದ ಮಹಿಳೆಯರು, ನಗಾರಿ, ಇನ್ನಿತರ ಕಲಾತಂಡಗಳು ಅದ್ದೂರಿಯಾಗಿ ಜಾಥಾವನ್ನು ಬರಮಾಡಿಕೊಂಡರು.</p>.<p>ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಮಹದೇವಯ್ಯ ಸಂವಿಧಾನ ಆಶಯಗಳು ಹಾಗೂ ಪ್ರಾಮುಖ್ಯ ಕುರಿತು ಉಪನ್ಯಾಸ ನೀಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದರಾಜಶೆಟ್ಟಿ, ಉಪಾಧ್ಯಕ್ಷೆ ರತ್ನಮ್ಮ, ನೋಡೆಲ್ ಅಧಿಕಾರಿ ಡಾ. ಕೃಷ್ಣ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಪಂಚಾಯತ್ ಅಭಿವೃದ್ದಿ ಅಧಿಕಾರಿ ರವಿಚಂದ್ರ, ಇನ್ನಿತರ ಇಲಾಖೆಗಳ ಅಧಿಕಾರಿ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ತಾಲ್ಲೂಕಿನ ನಿಟ್ರೆ, ಬೊಮ್ಮನಹಳ್ಳಿ ಗ್ರಾಮಗಳಲ್ಲಿ ಮಂಗಳವಾರ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಸಂವಿಧಾನ ಜಾಗೃತಿ ಜಾಥಾ ನಡೆಯಿತು. </p>.<p>ನಿಟ್ರೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಮಹೇಶ್, ಉಪಾಧ್ಯಕ್ಷ ಎಸ್.ಸ್ವಾಮಿ, ಸದಸ್ಯರು ಗ್ರಾಮದ ಯಜಮಾನರು, ವಿವಿಧ ಸಂಘಟನೆಗಳ ಮುಖಂಡರು, ಶಾಲಾ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು ಜಾಥಾವನ್ನು ಬರಮಾಡಿಕೊಂಡರು.</p>.<p>ಸತ್ತಿಗೆ, ಸೂರಪಾನಿಯೊಂದಿಗೆ ಗಾರುಡಿ ಬೊಂಬೆ, ಮರಗಾಲು ಕುಣಿತ, ಕಂಸಾಳೆ, ನಾದಸ್ವರ, ಡೊಳ್ಳು ಸೇರಿದಂತೆ ಇನ್ನಿತರ ಹಲವಾರು ಕಲಾತಂಡಗಳೊಂದಿಗೆ ಗ್ರಾಮದಲ್ಲಿ ಜಾಗೃತಿ ಜಾಥಾ ಸಂಚರಿಸಿತು. ವಿದ್ಯಾರ್ಥಿಗಳು, ಮಹಿಳೆಯರು ಸಂಭ್ರಮದಿಂದ ಪಾಲ್ಗೊಂಡರು. ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. </p>.<p>ಡಾ.ಬಿ.ಆರ್.ಅಂಬೇಡ್ಕರ್, ಇನ್ನಿತರ ರಾಷ್ಟ್ರ ನಾಯಕರ ವೇಷಭೂಷಣ ಧರಿಸಿದ ಮಕ್ಕಳು ವಾಹನದಲ್ಲಿ ಕುಳಿತು ಮೆರವಣಿಗೆಯಲ್ಲಿ ಪಾಲ್ಗೊಂಡರು. ಸೈಕಲ್ ರ್ಯಾಲಿಯೂ ನಡೆಯಿತು.</p>.<p>ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಂದ ‘ಸಂವಿಧಾನ ಸಂಸತ್ತು’ ನಾಟಕ ಪ್ರದರ್ಶನ ನಡೆಯಿತು. ಸಂವಿಧಾನ ಕುರಿತು ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಬೊಮ್ಮನಹಳ್ಳಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಸ್ತಬ್ದ ಚಿತ್ರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಲಾಯಿತು. ಕಳಶ ಹಿಡಿದ ಮಹಿಳೆಯರು, ನಗಾರಿ, ಇನ್ನಿತರ ಕಲಾತಂಡಗಳು ಅದ್ದೂರಿಯಾಗಿ ಜಾಥಾವನ್ನು ಬರಮಾಡಿಕೊಂಡರು.</p>.<p>ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಮಹದೇವಯ್ಯ ಸಂವಿಧಾನ ಆಶಯಗಳು ಹಾಗೂ ಪ್ರಾಮುಖ್ಯ ಕುರಿತು ಉಪನ್ಯಾಸ ನೀಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದರಾಜಶೆಟ್ಟಿ, ಉಪಾಧ್ಯಕ್ಷೆ ರತ್ನಮ್ಮ, ನೋಡೆಲ್ ಅಧಿಕಾರಿ ಡಾ. ಕೃಷ್ಣ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಪಂಚಾಯತ್ ಅಭಿವೃದ್ದಿ ಅಧಿಕಾರಿ ರವಿಚಂದ್ರ, ಇನ್ನಿತರ ಇಲಾಖೆಗಳ ಅಧಿಕಾರಿ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>