<p><strong>ಹನೂರು</strong>: ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ಗಂಗನದೊಡ್ಡಿಯ ನಟರಾಜು ಎಂಬುವವರು ಕಾಡಾನೆ ದಾಳಿಯಿಂದ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.</p>.<p>ಅಂದು ರಾತ್ರಿ ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ಸಮಯದಲ್ಲಿ ಕಾಡಾನೆಯೊಂದು ಜಮೀನಿಗೆ ನುಗ್ಗಿದ್ದು, ದಾಳಿ ನಡೆಸಿದೆ. ಬಳಿಕ ಗಾಯಗೊಂಡಿದ್ದ ಅವರನ್ನು ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಕಾಡಾನೆ ಹಾವಳಿ ತಪ್ಪಿಸಿ: ನಾಲ್ಕು ತಿಂಗಳ ಹಿಂದೆ ಇದೇ ರೀತಿ ಕಾವಲು ಕಾಯುವ ಸಂದರ್ಭದಲ್ಲಿ ಕಾಡಾನೆ ದಾಳಿ ಮಾಡಿತ್ತು. ಆಗ ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ದಾಳಿಗೆ ತುತ್ತಾಗಿದ್ದಾರೆ. ಈ ಭಾಗದಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಕಾಡಂಚಿನ ಜಮೀನಿನ ರೈತರು ಸದಾ ಆತಂಕದಲ್ಲೆ ಇರಬೇಕಾದ ಪರಿಸ್ಥಿತಿ ಎದುರಾಗಿದೆ. ಕೂಡಲೇ ಅರಣ್ಯ ಇಲಾಖೆ ಕಾಡಾನೆ ಹಾವಳಿ ತಪ್ಪಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.</p>.<p>‘ಆನೆ ದಾಳಿ ಪರಿಣಾಮ ಬಲಗಾಲು ಮುರಿದಿದ್ದು, ಸೊಂಟದ ಬಳಿ ಗಾಯವಾಗಿದೆ. ಶಸ್ತ್ರ ಚಿಕಿತ್ಸೆ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ. ವೈದ್ಯರಿಂದ ವರದಿ ಪಡೆದು ನಂತರ ಇಲಾಖೆಯಿಂದ ವೈದ್ಯಕೀಯ ವೆಚ್ಚ ಭರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ವಲಯ ಅರಣ್ಯಾಧಿಕಾರಿ ಪ್ರವೀಣ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು</strong>: ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ಗಂಗನದೊಡ್ಡಿಯ ನಟರಾಜು ಎಂಬುವವರು ಕಾಡಾನೆ ದಾಳಿಯಿಂದ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.</p>.<p>ಅಂದು ರಾತ್ರಿ ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ಸಮಯದಲ್ಲಿ ಕಾಡಾನೆಯೊಂದು ಜಮೀನಿಗೆ ನುಗ್ಗಿದ್ದು, ದಾಳಿ ನಡೆಸಿದೆ. ಬಳಿಕ ಗಾಯಗೊಂಡಿದ್ದ ಅವರನ್ನು ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಕಾಡಾನೆ ಹಾವಳಿ ತಪ್ಪಿಸಿ: ನಾಲ್ಕು ತಿಂಗಳ ಹಿಂದೆ ಇದೇ ರೀತಿ ಕಾವಲು ಕಾಯುವ ಸಂದರ್ಭದಲ್ಲಿ ಕಾಡಾನೆ ದಾಳಿ ಮಾಡಿತ್ತು. ಆಗ ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ದಾಳಿಗೆ ತುತ್ತಾಗಿದ್ದಾರೆ. ಈ ಭಾಗದಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಕಾಡಂಚಿನ ಜಮೀನಿನ ರೈತರು ಸದಾ ಆತಂಕದಲ್ಲೆ ಇರಬೇಕಾದ ಪರಿಸ್ಥಿತಿ ಎದುರಾಗಿದೆ. ಕೂಡಲೇ ಅರಣ್ಯ ಇಲಾಖೆ ಕಾಡಾನೆ ಹಾವಳಿ ತಪ್ಪಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.</p>.<p>‘ಆನೆ ದಾಳಿ ಪರಿಣಾಮ ಬಲಗಾಲು ಮುರಿದಿದ್ದು, ಸೊಂಟದ ಬಳಿ ಗಾಯವಾಗಿದೆ. ಶಸ್ತ್ರ ಚಿಕಿತ್ಸೆ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ. ವೈದ್ಯರಿಂದ ವರದಿ ಪಡೆದು ನಂತರ ಇಲಾಖೆಯಿಂದ ವೈದ್ಯಕೀಯ ವೆಚ್ಚ ಭರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ವಲಯ ಅರಣ್ಯಾಧಿಕಾರಿ ಪ್ರವೀಣ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>