<p><strong>ಗುಂಡ್ಲುಪೇಟೆ</strong>: ನಾಡಹಬ್ಬ ದಸರಾದ ಜಂಬೂ ಸವಾರಿಯಲ್ಲಿ ಭಾಗವಹಿಸಲು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂರು ಆನೆಗಳು ಆಯ್ಕೆ ಆಗಿವೆ. ಗುರುವಾರ ಆನೆಗಳು ಮೈಸೂರಿನತ್ತ ಹೊರಡಲಿವೆ. </p>.<p>ಬಂಡೀಪುರ ವಿಭಾಗ ವ್ಯಾಪ್ತಿಯ ಐನೂರು ಮಾರಿಗುಡಿ ವಲಯದ ರಾಂಪುರ ಸಾಕಾನೆ ಶಿಬಿರದ ಗಂಡಾನೆಗಳಾದ ಪಾರ್ಥಸಾರಥಿ ಹಾಗೂ ರೋಹಿತ ಮತ್ತು ಹೆಣ್ಣಾನೆ ಹಿರಣ್ಯ ಈ ಬಾರಿಯ ಜಂಬೂಸವಾರಿಯಲ್ಲಿ ಭಾಗವಹಿಸಲಿವೆ. </p>.<p>ಮದ್ದೂರು ವಲಯದ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ ಗಜಪಯಣ ಕಾರ್ಯಕ್ರಮ ಹಮ್ಮಿಕೊಡಿದ್ದು, ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರು ಆನೆಗಳನ್ನು ಬೀಳ್ಕೊಡಲಿದ್ದಾರೆ. </p>.<p>ಅಧಿಕಾರ ಸ್ವೀಕಾರ: ಈ ಮಧ್ಯೆ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನೂತನ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹುಲಿಯೋಜನೆ ನಿರ್ದೇಶಕರಾಗಿ ಪ್ರಭಾಕರನ್ ಎಸ್ ಗುರುವಾರ ಅಧಿಕಾರ ಸ್ವೀಕರಿಸಿದರು. </p>.<p>ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಪಿ.ರಮೇಶಕುಮಾರ್ ಅವರನ್ನು ಮೈಸೂರಿನ ಯೋಜನಾ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸರ್ಕಾರ ಎರಡು ದಿನಗಳ ಹಿಂದೆ ವರ್ಗಾವಣೆ ಮಾಡಿತ್ತು. </p>.<p>ಅವರ ಜಾಗಕ್ಕೆ ಕರ್ನಾಟಕ 2011ನೇ ಬ್ಯಾಚ್ನ ಐಎಫ್ಎಸ್ ಅಧಿಕಾರಿ ಪ್ರಭಾಕರನ್ ಅವರನ್ನು ನಿಯೋಜಿಸಲಾಗಿತ್ತು. ನೂತನ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಬಂಡೀಪುರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವೀನ್, ಕೆ.ಪರಮೇಶ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹೂಗುಚ್ಛ ನೀಡಿ ಅಭಿನಂದಿಸಿದರು. </p>.<p>‘ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸರ್ವತೋಮುಖ ಬೆಳವಣಿಗೆ, ಅರಣ್ಯ ವನ್ಯಜೀವಿ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಪ್ರಭಾಕರನ್ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ನಾಡಹಬ್ಬ ದಸರಾದ ಜಂಬೂ ಸವಾರಿಯಲ್ಲಿ ಭಾಗವಹಿಸಲು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂರು ಆನೆಗಳು ಆಯ್ಕೆ ಆಗಿವೆ. ಗುರುವಾರ ಆನೆಗಳು ಮೈಸೂರಿನತ್ತ ಹೊರಡಲಿವೆ. </p>.<p>ಬಂಡೀಪುರ ವಿಭಾಗ ವ್ಯಾಪ್ತಿಯ ಐನೂರು ಮಾರಿಗುಡಿ ವಲಯದ ರಾಂಪುರ ಸಾಕಾನೆ ಶಿಬಿರದ ಗಂಡಾನೆಗಳಾದ ಪಾರ್ಥಸಾರಥಿ ಹಾಗೂ ರೋಹಿತ ಮತ್ತು ಹೆಣ್ಣಾನೆ ಹಿರಣ್ಯ ಈ ಬಾರಿಯ ಜಂಬೂಸವಾರಿಯಲ್ಲಿ ಭಾಗವಹಿಸಲಿವೆ. </p>.<p>ಮದ್ದೂರು ವಲಯದ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ ಗಜಪಯಣ ಕಾರ್ಯಕ್ರಮ ಹಮ್ಮಿಕೊಡಿದ್ದು, ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರು ಆನೆಗಳನ್ನು ಬೀಳ್ಕೊಡಲಿದ್ದಾರೆ. </p>.<p>ಅಧಿಕಾರ ಸ್ವೀಕಾರ: ಈ ಮಧ್ಯೆ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನೂತನ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹುಲಿಯೋಜನೆ ನಿರ್ದೇಶಕರಾಗಿ ಪ್ರಭಾಕರನ್ ಎಸ್ ಗುರುವಾರ ಅಧಿಕಾರ ಸ್ವೀಕರಿಸಿದರು. </p>.<p>ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಪಿ.ರಮೇಶಕುಮಾರ್ ಅವರನ್ನು ಮೈಸೂರಿನ ಯೋಜನಾ ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸರ್ಕಾರ ಎರಡು ದಿನಗಳ ಹಿಂದೆ ವರ್ಗಾವಣೆ ಮಾಡಿತ್ತು. </p>.<p>ಅವರ ಜಾಗಕ್ಕೆ ಕರ್ನಾಟಕ 2011ನೇ ಬ್ಯಾಚ್ನ ಐಎಫ್ಎಸ್ ಅಧಿಕಾರಿ ಪ್ರಭಾಕರನ್ ಅವರನ್ನು ನಿಯೋಜಿಸಲಾಗಿತ್ತು. ನೂತನ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಬಂಡೀಪುರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವೀನ್, ಕೆ.ಪರಮೇಶ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹೂಗುಚ್ಛ ನೀಡಿ ಅಭಿನಂದಿಸಿದರು. </p>.<p>‘ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸರ್ವತೋಮುಖ ಬೆಳವಣಿಗೆ, ಅರಣ್ಯ ವನ್ಯಜೀವಿ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಪ್ರಭಾಕರನ್ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>