<p><strong>ಯಳಂದೂರು</strong>: ತಾಲ್ಲೂಕಿನ ಬೂದಿತಿಟ್ಟು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಒಳಭಾಗದಲ್ಲಿ ಛಾವಣಿ ಗಾರೆ ಪ್ರತಿದಿನ ಉದುರುತ್ತಿದ್ದು, ಮಕ್ಕಳು ಆತಂಕದಿಂದ ಕಲಿಯುವಂತಾಗಿದೆ. ಇದರಿಂದ ಪೋಷಕರು ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುವಂತಾಗಿದೆ.</p>.<p>‘ಇಲ್ಲಿ 1 ರಿಂದ 7ನೇ ತರಗತಿಗೆ ಬೋಧನೆ ನಡೆಯುತ್ತಿದೆ. 38 ಮಕ್ಕಳು ಕಲಿಯುತ್ತಿದ್ದಾರೆ, ಮೂವರು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಆತಂಕದ ನಡುವೆ ಪಠ್ಯ ಚಟುವಟಿಕೆಯಲ್ಲಿ ತೊಡಗುವಂತಾಗಿದೆ. ಈ ಬಗ್ಗೆ ದೂರು ನೀಡಿದರೂ ಸಂಬಂಧಪಟ್ಟವರು ಕ್ರಮವಹಿಸುತ್ತಿಲ್ಲ. ಕೆಲವೊಮ್ಮೆ ಗಾರೆ ಚಕ್ಕೆ ಕೆಳಕ್ಕೆ ಬೀಳುತ್ತದೆ. ಗಾರೆಯನ್ನು ಪ್ರತಿದಿನ ಹೊರಗೆ ಇಟ್ಟು ಕಲಿಸಬೇಕಿದೆ. ಮಕ್ಕಳ ಹಿತದೃಷ್ಟಿಯಿಂದ ತಕ್ಷಣ ಛಾವಣಿ ದುರಸ್ತಿಗೊಳಿಸಬೇಕು. ಈ ಬಗ್ಗೆ ಕ್ರಮವಹಿಸದಿದ್ದರೆ ಮಕ್ಕಳನ್ನು ಶಾಲೆಯಿಂದ ಹೊರಗೆ ಕೂರಿಸಬೇಕಾಗುತ್ತದೆ’ ಎಂದು ಎಸ್ಡಿಎಂಸಿ ಅಧ್ಯಕ್ಷ ಬಸವಣ್ಣ ದೂರಿದರು.</p>.<p>‘ಶಾಲೆಯಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ಇದೆ. ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಛಾವಣಿ ದೃಢತೆ ಕಳೆದುಕೊಂಡಿದೆ. ಮುಂದಿನ ದಿನಗಳಲ್ಲಿ ಅನಾಹುತ ಸಂಭವಿಸುವುದನ್ನು ತಪ್ಪಿಸುವ ದೆಸೆಯಲ್ಲಿ ಸಂಬಂಧಪಟ್ಟವರು ಕ್ರಮವಹಿಸಲಿ’ ಎನ್ನುತ್ತಾರೆ ಹಳೇ ವಿದ್ಯಾರ್ಥಿ ರಂಗಸ್ವಾಮಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು</strong>: ತಾಲ್ಲೂಕಿನ ಬೂದಿತಿಟ್ಟು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಒಳಭಾಗದಲ್ಲಿ ಛಾವಣಿ ಗಾರೆ ಪ್ರತಿದಿನ ಉದುರುತ್ತಿದ್ದು, ಮಕ್ಕಳು ಆತಂಕದಿಂದ ಕಲಿಯುವಂತಾಗಿದೆ. ಇದರಿಂದ ಪೋಷಕರು ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುವಂತಾಗಿದೆ.</p>.<p>‘ಇಲ್ಲಿ 1 ರಿಂದ 7ನೇ ತರಗತಿಗೆ ಬೋಧನೆ ನಡೆಯುತ್ತಿದೆ. 38 ಮಕ್ಕಳು ಕಲಿಯುತ್ತಿದ್ದಾರೆ, ಮೂವರು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಆತಂಕದ ನಡುವೆ ಪಠ್ಯ ಚಟುವಟಿಕೆಯಲ್ಲಿ ತೊಡಗುವಂತಾಗಿದೆ. ಈ ಬಗ್ಗೆ ದೂರು ನೀಡಿದರೂ ಸಂಬಂಧಪಟ್ಟವರು ಕ್ರಮವಹಿಸುತ್ತಿಲ್ಲ. ಕೆಲವೊಮ್ಮೆ ಗಾರೆ ಚಕ್ಕೆ ಕೆಳಕ್ಕೆ ಬೀಳುತ್ತದೆ. ಗಾರೆಯನ್ನು ಪ್ರತಿದಿನ ಹೊರಗೆ ಇಟ್ಟು ಕಲಿಸಬೇಕಿದೆ. ಮಕ್ಕಳ ಹಿತದೃಷ್ಟಿಯಿಂದ ತಕ್ಷಣ ಛಾವಣಿ ದುರಸ್ತಿಗೊಳಿಸಬೇಕು. ಈ ಬಗ್ಗೆ ಕ್ರಮವಹಿಸದಿದ್ದರೆ ಮಕ್ಕಳನ್ನು ಶಾಲೆಯಿಂದ ಹೊರಗೆ ಕೂರಿಸಬೇಕಾಗುತ್ತದೆ’ ಎಂದು ಎಸ್ಡಿಎಂಸಿ ಅಧ್ಯಕ್ಷ ಬಸವಣ್ಣ ದೂರಿದರು.</p>.<p>‘ಶಾಲೆಯಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ಇದೆ. ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಛಾವಣಿ ದೃಢತೆ ಕಳೆದುಕೊಂಡಿದೆ. ಮುಂದಿನ ದಿನಗಳಲ್ಲಿ ಅನಾಹುತ ಸಂಭವಿಸುವುದನ್ನು ತಪ್ಪಿಸುವ ದೆಸೆಯಲ್ಲಿ ಸಂಬಂಧಪಟ್ಟವರು ಕ್ರಮವಹಿಸಲಿ’ ಎನ್ನುತ್ತಾರೆ ಹಳೇ ವಿದ್ಯಾರ್ಥಿ ರಂಗಸ್ವಾಮಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>