‘ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತ ಸಂಘಟನೆಗಳು ಸಲ್ಲಿಸಿದ ಅರ್ಜಿಗಳನ್ನು ಕಸದಬುಟ್ಟಿಗೆ ಬಿಸಾಡಿರುವ ಅಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿ ಚಾಮರಾಜನಗರದಲ್ಲಿ ಶನಿವಾರ ಎಸ್ಪಿ ಡಾ.ಬಿ.ಟಿ.ಕವಿತಾ ಅವರಿಗೆ ರೈತರು ಮನವಿ ಸಲ್ಲಿಸಿದರು
ಕಾಂಗ್ರೆಸ್ ಸಮಾವೇಶ ಖಾಸಗಿಯಾದ್ದರಿಂದ ಅಧಿಕಾರಿಗಳು ವೇದಿಕೆಯಲ್ಲಿರಲಿಲ್ಲ. ಸ್ಥಳದಲ್ಲಿ ಸಂಗ್ರಹಿಸಿದ ಅರ್ಜಿಗಳನ್ನು ಮುಖ್ಯಮಂತ್ರಿ ಕಚೇರಿಗೆ ಕಳಿಸಲಾಗುವುದು.
–ಗೀತಾ ಹುಡೇದ ಹೆಚ್ಚುವರಿ ಜಿಲ್ಲಾಧಿಕಾರಿ
ರೈತರ ಅರ್ಜಿಗಳು ಚೆಲ್ಲಾಪಿಲ್ಲಿಯಾಗಿರುವ ಬಗ್ಗೆ ಪರಿಶೀಲಿಸಲಾಗುವುದು. ಅಧಿಕಾರಿಗಳು ಅರ್ಜಿಗಳನ್ನು ತಮ್ಮೊಂದಿಗೆ ಕೊಂಡೊಯ್ದರೆ ಅಥವಾ ಇಲ್ಲವೇ ಎಂಬ ಮಾಹಿತಿ ಸಂಗ್ರಹಿಸಲಾಗುವುದು