<p><strong>ಗುಂಡ್ಲುಪೇಟೆ</strong>: ಡಿ.10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಆರ್ಯ ಈಡಿಗ ಬೃಹತ್ ಜಾಗೃತ ಸಮಾವೇಶಕ್ಕೆ ತಾಲ್ಲೂಕಿನಿಂದ ಸುಮಾರು 250ಕ್ಕು ಹೆಚ್ಚು ಮಂದಿ ತೆರಳಲಿದ್ದಾರೆ ಎಂದು ರೇಣುಕಾಂಬ ಆರ್ಯ ಈಡಿಗ ಸಂಘದ ತಾಲ್ಲೂಕು ಅಧ್ಯಕ್ಷ ಗೋಪಾಲಸ್ವಾಮಿ ತಿಳಿಸಿದರು.</p>.<p>ಬೇಗೂರು ಗ್ರಾಮದ ಆರ್ಯ ಈಡಿಗ ಸಮುದಾಯ ಭವನದ ಆವರಣದಲ್ಲಿ ಸಮಾವೇಶದ ಪೋಸ್ಟರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಬೆಂಗಳೂರಿನಲ್ಲಿ ಕರ್ನಾಟಕ ಆರ್ಯ ಈಡಿಗ ಸಂಘವು ಸ್ಥಾಪನೆಯಾಗಿ 78 ವರ್ಷ ತುಂಬಿದ್ದು, 25 ಈಡಿಗ ಉಪ ಪಂಗಡಗಳನ್ನು ಒಟ್ಟುಗೂಡಿಸುವುದು ಸಮಾವೇಶದ ಮುಖ್ಯ ಉದ್ದೇಶವಾಗಿದೆ ಎಂದರು.</p>.<p>ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಈಡಿಗ ಜನಾಂಗದ ರಾಜಕೀಯ ಪ್ರಮುಖರು, ಚಲನಚಿತ್ರ ನಟರು, ಮುಖಂಡರು ಹಾಗೂ ಈಡಿಗ ಸಂಘಟನೆಗಳು ಸೇರಿ ಸರ್ಕಾರಕ್ಕೆ ಅಭಿವೃದ್ದಿ ನಿಗಮ ಸ್ಥಾಪಿಸುವಂತೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.</p>.<p>ರೇಣುಕಾಂಬ ಆರ್ಯ ಈಡಿಗ ಸಂಘದ ಉಪಾಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಚಂದ್ರು.ಪಿ, ಮುಖಂಡರಾದ ಲೋಕೇಶ್, ಕೇಬಲ್ ಶ್ರೀನಿವಾಸ್, ವೆಂಕಟೇಶ್, ಬೆಟ್ಟದಮಾದಹಳ್ಳಿ ನಂಜುಂಡಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ಡಿ.10ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಆರ್ಯ ಈಡಿಗ ಬೃಹತ್ ಜಾಗೃತ ಸಮಾವೇಶಕ್ಕೆ ತಾಲ್ಲೂಕಿನಿಂದ ಸುಮಾರು 250ಕ್ಕು ಹೆಚ್ಚು ಮಂದಿ ತೆರಳಲಿದ್ದಾರೆ ಎಂದು ರೇಣುಕಾಂಬ ಆರ್ಯ ಈಡಿಗ ಸಂಘದ ತಾಲ್ಲೂಕು ಅಧ್ಯಕ್ಷ ಗೋಪಾಲಸ್ವಾಮಿ ತಿಳಿಸಿದರು.</p>.<p>ಬೇಗೂರು ಗ್ರಾಮದ ಆರ್ಯ ಈಡಿಗ ಸಮುದಾಯ ಭವನದ ಆವರಣದಲ್ಲಿ ಸಮಾವೇಶದ ಪೋಸ್ಟರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಬೆಂಗಳೂರಿನಲ್ಲಿ ಕರ್ನಾಟಕ ಆರ್ಯ ಈಡಿಗ ಸಂಘವು ಸ್ಥಾಪನೆಯಾಗಿ 78 ವರ್ಷ ತುಂಬಿದ್ದು, 25 ಈಡಿಗ ಉಪ ಪಂಗಡಗಳನ್ನು ಒಟ್ಟುಗೂಡಿಸುವುದು ಸಮಾವೇಶದ ಮುಖ್ಯ ಉದ್ದೇಶವಾಗಿದೆ ಎಂದರು.</p>.<p>ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಈಡಿಗ ಜನಾಂಗದ ರಾಜಕೀಯ ಪ್ರಮುಖರು, ಚಲನಚಿತ್ರ ನಟರು, ಮುಖಂಡರು ಹಾಗೂ ಈಡಿಗ ಸಂಘಟನೆಗಳು ಸೇರಿ ಸರ್ಕಾರಕ್ಕೆ ಅಭಿವೃದ್ದಿ ನಿಗಮ ಸ್ಥಾಪಿಸುವಂತೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.</p>.<p>ರೇಣುಕಾಂಬ ಆರ್ಯ ಈಡಿಗ ಸಂಘದ ಉಪಾಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ಚಂದ್ರು.ಪಿ, ಮುಖಂಡರಾದ ಲೋಕೇಶ್, ಕೇಬಲ್ ಶ್ರೀನಿವಾಸ್, ವೆಂಕಟೇಶ್, ಬೆಟ್ಟದಮಾದಹಳ್ಳಿ ನಂಜುಂಡಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>