<p><strong>ಗುಂಡ್ಲುಪೇಟೆ:</strong> ಮಣ್ಣಿಗೆ ವಿಷ ಸೇರಿಸದೇ, ಭವಿಷ್ಯದ ದೃಷ್ಟಿಯಿಂದ ಮಣ್ಣಿನ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು’ ಎಂದು ಸಂಪನ್ಮೂಲ ವ್ಯಕ್ತಿ ಮುತ್ತೆಪ್ಪೆ ಚಿಗಡೊಳ್ಳಿ ತಿಳಿಸಿದರು.</p>.<p>ದೊಡ್ಡತುಪ್ಪೂರು ಗ್ರಾಮದಲ್ಲಿ ಚಾಮರಾಜನಗರ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿ ನಡೆದ ವಿಶ್ವ ಮಣ್ಣು ದಿನಾಚರಣೆಯಲ್ಲಿ ಅವರು ಮಾತನಾಡಿದರು. ಮಣ್ಣಿನ ಫಲವತ್ತತೆ ಕಾಪಾಡುವ ನಿಟ್ಟಿನಲ್ಲಿ ರೈತರು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.</p>.<p>‘ಮಣ್ಣು ಮತ್ತು ನೀರು ಜೀವನದ ಮೂಲ’ ಈ ವರ್ಷದ ಘೋಷವಾಕ್ಯ. ಮಣ್ಣು ಸವಕಳಿ ಸವಕಳಿ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ರಾಸಾಯನಿಕ ಗೊಬ್ಬರಗಳನ್ನು ಕಡಿಮೆ ಮಾಡಿ, ಕೊಟ್ಟಿಗೆ ಗೊಬ್ಬರ ಮತ್ತು ಹಸಿರೆಲೆ ಗೊಬ್ಬರ ಬಳಸಿ, ಮಣ್ಣಿನ ಫಲವತ್ತತೆ ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ರಿಯಾಯಿತಿ ದರದಲ್ಲಿ ಗೊಬ್ಬರ ಖರೀದಿಸುವ ವಿಧಾನಗಳು ಮತ್ತು ಕೀಟನಾಶಕಗಳ ಸುರಕ್ಷಿತ ಬಳಕೆಯ ಬಗ್ಗೆ ರೈತರಿಗೆ ಅರಿವು ಮೂಡಿಸಲಾಯಿತು. ಬೇಸಾಯ ಶಾಸ್ತ್ರ ವಿಜ್ಞಾನಿ ಡಾ.ರಜತ್, ಕಾರ್ತಿಕ, ಅಭಿಷೇಕ್ , ರೈತರು, ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಮಣ್ಣಿಗೆ ವಿಷ ಸೇರಿಸದೇ, ಭವಿಷ್ಯದ ದೃಷ್ಟಿಯಿಂದ ಮಣ್ಣಿನ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು’ ಎಂದು ಸಂಪನ್ಮೂಲ ವ್ಯಕ್ತಿ ಮುತ್ತೆಪ್ಪೆ ಚಿಗಡೊಳ್ಳಿ ತಿಳಿಸಿದರು.</p>.<p>ದೊಡ್ಡತುಪ್ಪೂರು ಗ್ರಾಮದಲ್ಲಿ ಚಾಮರಾಜನಗರ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿ ನಡೆದ ವಿಶ್ವ ಮಣ್ಣು ದಿನಾಚರಣೆಯಲ್ಲಿ ಅವರು ಮಾತನಾಡಿದರು. ಮಣ್ಣಿನ ಫಲವತ್ತತೆ ಕಾಪಾಡುವ ನಿಟ್ಟಿನಲ್ಲಿ ರೈತರು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.</p>.<p>‘ಮಣ್ಣು ಮತ್ತು ನೀರು ಜೀವನದ ಮೂಲ’ ಈ ವರ್ಷದ ಘೋಷವಾಕ್ಯ. ಮಣ್ಣು ಸವಕಳಿ ಸವಕಳಿ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ರಾಸಾಯನಿಕ ಗೊಬ್ಬರಗಳನ್ನು ಕಡಿಮೆ ಮಾಡಿ, ಕೊಟ್ಟಿಗೆ ಗೊಬ್ಬರ ಮತ್ತು ಹಸಿರೆಲೆ ಗೊಬ್ಬರ ಬಳಸಿ, ಮಣ್ಣಿನ ಫಲವತ್ತತೆ ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ರಿಯಾಯಿತಿ ದರದಲ್ಲಿ ಗೊಬ್ಬರ ಖರೀದಿಸುವ ವಿಧಾನಗಳು ಮತ್ತು ಕೀಟನಾಶಕಗಳ ಸುರಕ್ಷಿತ ಬಳಕೆಯ ಬಗ್ಗೆ ರೈತರಿಗೆ ಅರಿವು ಮೂಡಿಸಲಾಯಿತು. ಬೇಸಾಯ ಶಾಸ್ತ್ರ ವಿಜ್ಞಾನಿ ಡಾ.ರಜತ್, ಕಾರ್ತಿಕ, ಅಭಿಷೇಕ್ , ರೈತರು, ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>