ಸೋಮವಾರ, 21 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ | ಸುರಕ್ಷತೆಯೇ ಸವಾಲು; ಬೇಕು ಸಿಸಿಟಿವಿ ಕಣ್ಗಾವಲು

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು; ಸಾರ್ವಜನಿಕರಲ್ಲಿ ಆತಂಕ
Published : 21 ಅಕ್ಟೋಬರ್ 2024, 7:59 IST
Last Updated : 21 ಅಕ್ಟೋಬರ್ 2024, 7:59 IST
ಫಾಲೋ ಮಾಡಿ
Comments
ಚಾಮರಾಜನಗರದ ಭುವನೇಶ್ವರಿ ಸರ್ಕಲ್‌ಬಳಿಯ ಸಿಸಿಟಿವಿ ಕ್ಯಾಮೆರಾ
ಚಾಮರಾಜನಗರದ ಭುವನೇಶ್ವರಿ ಸರ್ಕಲ್‌ಬಳಿಯ ಸಿಸಿಟಿವಿ ಕ್ಯಾಮೆರಾ
ಸತ್ತಿ ರಸ್ತೆಯಲ್ಲಿ ಸಿಸಿಟಿವಿ ಕ್ಯಾಮೆರಾ ಇಲ್ಲದರುವುದು
ಸತ್ತಿ ರಸ್ತೆಯಲ್ಲಿ ಸಿಸಿಟಿವಿ ಕ್ಯಾಮೆರಾ ಇಲ್ಲದರುವುದು
ಸಿಸಿಟಿವಿ ಕ್ಯಾಮೆರಾ ಅಲಭ್ಯತೆ; ಹಿಟ್ ಅಂಡ್ ರನ್ ಹೆಚ್ಚಳ
ಯಳಂದೂರು ತಾಲ್ಲೂಕು ಮತ್ತು ಪಟ್ಟಣ ಪ್ರದೇಶಗಳಲ್ಲಿ ಬೀದಿ ದೀಪ ಮತ್ತು ಸಿಸಿಟಿವಿ ಕ್ಯಾಮೆರಾಗಳ ಕೊರತೆ ಕಾಡಿದೆ. ಬಹುತೇಕ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಸೋಲಾರ್ ದೀಪಗಳನ್ನು ಅಳವಡಿಸಿದ್ದು ಬೆಲೆಬಾಳುವ ಬಲ್ಬ್ ಮತ್ತು ಸಲಕರಣೆಗಳು ಕಳ್ಳರ ಪಾಲಾಗಿವೆ. ಇದರಿಂದ ಪಂಚಾಯಿತಿ ಕೇಂದ್ರಗಳು ಮತ್ತು ಪ್ರಮುಖ ಬೀದಿಗಳಲ್ಲಿ ಕತ್ತಲು ಆವರಿಸಿದ್ದು ಗ್ರಾಮೀಣರು ಪರದಾಡುವಂತಾಗಿದೆ. ಪಟ್ಟಣ ಪ್ರದೇಶಗಳ ಪ್ರಮುಖ ವೃತ್ತಗಳ ಬಳಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿಲ್ಲ. ಅಪಘಾತ ಹಾಗೂ ಹಿಟ್‌ ಅಂಡ್ ರನ್ ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವುದೇ ಪೊಲೀಸ್ ಇಲಾಖೆಗೆ ಸವಾಲಾಗಿದೆ. ಕಳವು ಪ್ರಕರಣಗಳು ನಡೆದಾಗ ಕಳ್ಳರ ಚಹರೆ ಗುರುತಿಸಲು ತ್ರಾಸ ಪಡುವಂತಾಗಿದೆ. ತಾಲ್ಲೂಕು ಕೇಂದ್ರ ಪ್ರವೇಶಿಸುವಾಗ ಮತ್ತು ಕೊನೆಗೊಳ್ಳುವಾಗ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎನ್ನುತ್ತಾರೆ ಪಟ್ಟಣ ಠಾಣೆ ಪಿಎಸ್‌ಐ ಹನುಮಂತ ಉಪ್ಪಾರ್.
‘ಸಾರ್ವಜನಿಕ ಸ್ಥಳಗಳಲ್ಲಿ ಇಲ್ಲ ಭದ್ರತೆ’
ಗುಂಡ್ಲುಪೇಟೆ ಪಟ್ಟಣದಲ್ಲಿ ಪೊಲೀಸ್ ಇಲಾಖೆಯಾಗಲಿ ತಾಲ್ಲೂಕು ಆಡಳಿತವಾಗಲಿ ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಲ್ಲ. ಆರ್‌ಟಿವಿ ಕಚೇರಿ ಬಳಿ ಇರುವ ಸಿಸಿಟಿವಿ ಕ್ಯಾಮೆರಾವೂ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಖಾಸಗಿ ವಾಣಿಜ್ಯ ಮಳಿಗೆಗಳ ಸಿಸಿಟಿವಿ ಕ್ಯಾಮೆರಾಗಳನ್ನು ಹೊರತು‍ಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತೆ ಇಲ್ಲದಂತಾಗಿದೆ. ಹಿಂದೆ ತಾಲ್ಲೂಕು ಕಚೇರಿ ಆವರಣದಲ್ಲಿಯೇ ಕಳ್ಳರು ಬೈಕ್ ಕದ್ದೊಯ್ದಿದ್ದರು. ಬಸ್ ನಿಲ್ದಾಣದಲ್ಲಿ ಸಿಸಿಟಿವಿ ಇದ್ದರೂ ರಾಷ್ಟ್ರೀಯ ಹೆದ್ದಾರಿವರೆಗಿನ ದೃಶ್ಯಗಳನ್ನು ಸೆರೆಹಿಡಿಯುವ ಸಾಮರ್ಥ್ಯ ಹೊಂದಿಲ್ಲ. ವರ್ಷದ ಹಿಂದೆ ಮಹಿಳೆಯೊಬ್ಬರು ಬಸ್ ನಿಲ್ದಾಣದಲ್ಲಿ ಮಗು ಬಿಟ್ಟುಹೋದರೂ ಅಲ್ಲಿನ ದೃಶ್ಯಾವಳಿ ಸರಿಯಾಗಿ ಕಂಡಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT