ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಕೋಡಹಳ್ಳಿಯಲ್ಲಿ ಪ್ರಚಾರ ನಿರತ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಮಂಗಲ ಶಿವಕುಮಾರ್ ಹಾಗೂ ಮುಖಂಡರು
ನಮ್ಮ ಪ್ರಚಾರ ಬಿರುಸಿನಿಂದ ನಡೆಯುತ್ತಿದೆ. ಬಿಸಿಲಿಲಿದ್ದರೂ ಮತಯಾಚನೆ ನಡೆಸುತ್ತಿದ್ದೇವೆ. ಸಿಎಂ 12ಕ್ಕೆ ಬರಲಿದ್ದಾರೆ. ರಾಷ್ಟ್ರೀಯ ನಾಯಕರು ಪ್ರಚಾರ ನಡೆಸುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ
ಪಿ.ಮರಿಸ್ವಾಮಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ
ನಾವು ಪ್ರಚಾರ ಆರಂಭಿಸಿದ್ದೇವೆ. ಹಬ್ಬದ ಬಳಿಕ ಇನ್ನಷ್ಟು ಬಿರುಸು ಪಡೆಯಲಿದೆ. ಪ್ರಚಾರ ರೂಪುರೇಷೆಗಳ ಬಗ್ಗೆ ಮುಖಂಡರು ಕಾರ್ಯಕರ್ಯರೊಂದಿಗೆ ಚರ್ಚಿಸುತ್ತಿದ್ದೇವೆ
ಎನ್.ನಾಗಯ್ಯ ಬಿಎಸ್ಪಿ ಜಿಲ್ಲಾ ಅಧ್ಯಕ್ಷ
ಬಿರುಸಿನಿಂದ ಪ್ರಚಾರ ನಡೆಸುತ್ತಿದ್ದೇನೆ. ಮಹಾಶಕ್ತಿ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಮತಯಾಚನೆ ಮಾಡುತ್ತಿದ್ದೇವೆ. ಒಳ್ಳೆಯ ಸ್ಪಂದನೆ ಇದೆ. ರಾಜ್ಯ ನಾಯಕರು ಕೂಡ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ
ಪ್ರೊ. ಮಲ್ಲಿಕಾರ್ಜುನಪ್ಪ ಬಿಜೆಪಿಯ ಲೋಕಸಭಾ ಕ್ಷೇತ್ರ ಸಂಚಾಲಕ
ಬರಲಿದ್ದಾರೆಯೇ ತಾರಾ ಪ್ರಚಾರಕರು?
ಬಿಜೆಪಿ ಮತ್ತು ಕಾಂಗ್ರೆಸ್ನ ರಾಜ್ಯ ನಾಯಕರು ಜಿಲ್ಲೆಗೆ ಬಂದು ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ. ರಾಷ್ಟ್ರೀಯ ಮಟ್ಟದ ತಾರಾ ಪ್ರಚಾರಕರು ಬರಲಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಪ್ರಧಾನಿ ಮೋದಿ ಅವರು ಕ್ಷೇತ್ರಕ್ಕೆ ಬಂದರೆ ಅನುಕೂಲ ಎಂಬುದು ಬಿಜೆಪಿ ನಾಯಕರ ಲೆಕ್ಕಾಚಾರ. ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಒಟ್ಟಾಗಿ ಸೇರಿಸಿ ಒಂದು ಕಡೆಗೆ ಭೇಟಿ ನೀಡಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ ಎಂದು ಹೇಳುತ್ತಾರೆ ಮುಖಂಡರು. ‘ಬಹುತೇಕ ಅವರು ಮೈಸೂರಿಗೆ ಭೇಟಿ ನೀಡುವ ನಿರೀಕ್ಷೆ ಇದೆ. ದಿನಾಂಕ ಇನ್ನೂ ನಿಗದಿಯಾಗಿಲ್ಲ’ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ನ ರಾಷ್ಟ್ರೀಯ ನಾಯಕರು ಜಿಲ್ಲೆಗೆ ಭೇಟಿ ನೀಡುವ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂದು ಹೇಳುತ್ತಾರೆ ಮುಖಂಡರು. ರಾಹುಲ್ ಗಾಂಧಿ ಅವರು ವಯನಾಡು ಕ್ಷೇತ್ರ ಜಿಲ್ಲೆಗೆ ಹತ್ತಿರದಲ್ಲಿರುವುದರಿಂದ ಅವರು ಪ್ರಚಾರಕ್ಕೆ ಬಂದರೂ ಬರಬಹುದು ಎಂದು ಹೇಳುತ್ತಾರೆ ಅವರು.