<p><strong>ಚಾಮರಾಜನಗರ</strong>: ‘ಮಡಿವಾಳ ಸಮುದಾಯವು ಶಿಕ್ಷಣಕ್ಕೆ ಒತ್ತು ನೀಡಬೇಕು. ಸರ್ಕಾರ ನೀಡುವ ಶೈಕ್ಷಣಿಕ ಸೌಲಭ್ಯಗಳನ್ನು ಪಡೆಯಬೇಕು’ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಶನಿವಾರ ಹೇಳಿದರು. </p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಡಾ.ರಾಜ್ಕುಮಾರ್ ಜಿಲ್ಲಾ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಮುದಾಯದವರು ಒಗ್ಗಟ್ಟಾಗಿ ಹೋರಾಟ ಮಾಡಿದಾಗ ಎಲ್ಲ ಫಲವೂ ಸಿಗುತ್ತದೆ. ನಿಮ್ಮೊಂದಿಗೆ ನಾವೂ ಇದ್ದೇವೆ. ಸರ್ಕಾರದಿಂದ ಬರುವ ಎಲ್ಲ ಸವಲತ್ತುಗಳನ್ನೂ ನೀಡಲಾಗುವುದು. ನಗರದಲ್ಲಿ ದೋಬಿಘಾಟ್ ನಿರ್ಮಾಣಕ್ಕೆ ಸಹಾಯ ಮಾಡಲಾಗುವುದು. ಜಿಲ್ಲಾ ಸಮುದಾಯ ಭವನಕ್ಕೂ ನೆರವು ಒದಗಿಸಲಾಗುವುದು’ ಎಂದು ಹೇಳಿದರು.</p>.<p>‘ಮಡಿವಾಳ ಮಾಚಿದೇವ ನೇರ ಹಾಗೂ ನಿಷ್ಠುರ ಶರಣರಾಗಿದ್ದರು. ಅವರ ವಚನಗಳ ಸಾರವನ್ನು ಅರ್ಥ ಮಾಡಿಕೊಂಡು ನಾವೆಲ್ಲರೂ ಮುನ್ನಡೆಯಬೇಕು’ ಎಂದರು.</p>.<p>ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ರಾಜು ಎಂ.ತಲ್ಲೂರು ಮಾತನಾಡಿ, ‘ನಿಗಮದಿಂದ ನೀಡಲಾಗುವ ಗಂಗಾ ಕಲ್ಯಾಣ, ಶೈಕ್ಷಣಿಕ ಸಾಲ ಸೇರಿದಂತೆ ವಿವಿಧ ಯೋಜನೆಗಳನ್ನು ಸದುಪಯೋಗ ಮಾಡಿಕೊಂಡು ಮಡಿವಾಳ ಸಮುದಾಯ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಧೃಢವಾಗಿ ಬೆಳೆಯಬೇಕು’ ಎಂದು ಸಲಹೆ ನೀಡಿದರು.</p>.<p>ನಗರಸಭೆ ಅಧ್ಯಕ್ಷೆ ಸಿ.ಎಂ.ಆಶಾ ಮಾತನಾಡಿ, ‘ಮಡಿವಾಳ ಮಾಚಿದೇವ ಅವರ ವಚನಗಳು ಅರ್ಥಪೂರ್ಣವಾಗಿವೆ. ಅವರ ಶಕ್ತಿ, ಪವಾಡಗಳ ಬಗ್ಗೆ ಸಾಕಷ್ಟು ಕೇಳಿದ್ದೇವೆ. ಇವರ ಆದರ್ಶಗಳನ್ನು ಪಾಲನೆ ಮಾಡಬೇಕು’ ಎಂದರು. </p>.<p>ಪ್ರೊ.ಹ.ರಾ.ಮಹೇಶ್ ಮಾತನಾಡಿ, ‘ಮಡಿವಾಳ ಮಾಚಿದೇವರು 12ನೇ ಶತಮಾನದ ವಚನ ಸಾಹಿತ್ಯಕಾರರ ಸಾಲಿನಲ್ಲಿ ತನ್ನದೇ ಆದ ವಿಭಿನ್ನ ಶೈಲಿಯಿಂದ ಗುರುತಿಸಿಕೊಂಡಿದ್ದರು. ಮಾಚಿದೇವರು ಅಂದಿನ ಸಮಾಜದಲ್ಲಿ ಅಸಮಾನತೆ, ಮೂಢನಂಬಿಕೆ, ಲಿಂಗ ತಾರತಮ್ಯದಂತಹ ಹಲವಾರು ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದರು’ ಎಂದರು.</p>.<p>ಪ್ರಕೃತಿ ಮತ್ತು ಮನುಷ್ಯನೇ ದೇವರೆಂದು ಭಾವಿಸಿದ್ದ ಮಡಿವಾಳ ಮಾಚಿದೇವ ವಚನಗಳ ರಕ್ಷಣೆಗೆ ಮುಂದಾದರು. ಮಡಿವಾಳ ಸಮುದಾಯ ಮನುಷ್ಯನ ಹೃದಯ, ಮಿದುಳು ಸ್ವಚ್ಛಗೊಳಿಸಿ ದೇಶ ಕಟ್ಟುವ ಕಾಯಕಕ್ಕೆ ಮುಂದಾಗಬೇಕು. ಮನೆಮನೆಯಲ್ಲೂ ವಚನ ಬರೆಯಲು ಪ್ರೇರೇಪಿಸಿದ 12ನೇ ಶತಮಾನದ ಮಹತ್ವ ಅರಿಯಬೇಕು’ ಎಂದರು. </p>.<p>ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಪೂವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್. ಗುರುಲಿಂಗಯ್ಯ, ಸಮುದಾಯದ ಮುಖಂಡರಾದ ದುಂಡುಮಾದಯ್ಯ, ಸಿದ್ದಯ್ಯ ಇದ್ದರು. </p>.<p>ಅದ್ಧೂರಿ ಮೆರವಣಿಗೆ: ವೇದಿಕೆ ಸಮಾರಂಭಕ್ಕೂ ಮೊದಲು ನಗರದಲ್ಲಿ ಮಡಿವಾಳ ಮಾಚಿದೇವ ಅವರ ಭಾವಚಿತ್ರದ ಅದ್ಧೂರಿ ಮೆರವಣಿಗೆ ನಡೆಯಿತು. ಚಾಮರಾಜೇಶ್ವರಸ್ವಾಮಿ ದೇವಾಲಯದಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕಲಾತಂಡಗಳೊಂದಿಗೆ ಸಾಗಿದ ವೈಭವದ ಮೆರವಣಿಗೆ ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ರಂಗ ಮಂದಿರ ತಲುಪಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ‘ಮಡಿವಾಳ ಸಮುದಾಯವು ಶಿಕ್ಷಣಕ್ಕೆ ಒತ್ತು ನೀಡಬೇಕು. ಸರ್ಕಾರ ನೀಡುವ ಶೈಕ್ಷಣಿಕ ಸೌಲಭ್ಯಗಳನ್ನು ಪಡೆಯಬೇಕು’ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಶನಿವಾರ ಹೇಳಿದರು. </p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಡಾ.ರಾಜ್ಕುಮಾರ್ ಜಿಲ್ಲಾ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಮುದಾಯದವರು ಒಗ್ಗಟ್ಟಾಗಿ ಹೋರಾಟ ಮಾಡಿದಾಗ ಎಲ್ಲ ಫಲವೂ ಸಿಗುತ್ತದೆ. ನಿಮ್ಮೊಂದಿಗೆ ನಾವೂ ಇದ್ದೇವೆ. ಸರ್ಕಾರದಿಂದ ಬರುವ ಎಲ್ಲ ಸವಲತ್ತುಗಳನ್ನೂ ನೀಡಲಾಗುವುದು. ನಗರದಲ್ಲಿ ದೋಬಿಘಾಟ್ ನಿರ್ಮಾಣಕ್ಕೆ ಸಹಾಯ ಮಾಡಲಾಗುವುದು. ಜಿಲ್ಲಾ ಸಮುದಾಯ ಭವನಕ್ಕೂ ನೆರವು ಒದಗಿಸಲಾಗುವುದು’ ಎಂದು ಹೇಳಿದರು.</p>.<p>‘ಮಡಿವಾಳ ಮಾಚಿದೇವ ನೇರ ಹಾಗೂ ನಿಷ್ಠುರ ಶರಣರಾಗಿದ್ದರು. ಅವರ ವಚನಗಳ ಸಾರವನ್ನು ಅರ್ಥ ಮಾಡಿಕೊಂಡು ನಾವೆಲ್ಲರೂ ಮುನ್ನಡೆಯಬೇಕು’ ಎಂದರು.</p>.<p>ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ರಾಜು ಎಂ.ತಲ್ಲೂರು ಮಾತನಾಡಿ, ‘ನಿಗಮದಿಂದ ನೀಡಲಾಗುವ ಗಂಗಾ ಕಲ್ಯಾಣ, ಶೈಕ್ಷಣಿಕ ಸಾಲ ಸೇರಿದಂತೆ ವಿವಿಧ ಯೋಜನೆಗಳನ್ನು ಸದುಪಯೋಗ ಮಾಡಿಕೊಂಡು ಮಡಿವಾಳ ಸಮುದಾಯ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಧೃಢವಾಗಿ ಬೆಳೆಯಬೇಕು’ ಎಂದು ಸಲಹೆ ನೀಡಿದರು.</p>.<p>ನಗರಸಭೆ ಅಧ್ಯಕ್ಷೆ ಸಿ.ಎಂ.ಆಶಾ ಮಾತನಾಡಿ, ‘ಮಡಿವಾಳ ಮಾಚಿದೇವ ಅವರ ವಚನಗಳು ಅರ್ಥಪೂರ್ಣವಾಗಿವೆ. ಅವರ ಶಕ್ತಿ, ಪವಾಡಗಳ ಬಗ್ಗೆ ಸಾಕಷ್ಟು ಕೇಳಿದ್ದೇವೆ. ಇವರ ಆದರ್ಶಗಳನ್ನು ಪಾಲನೆ ಮಾಡಬೇಕು’ ಎಂದರು. </p>.<p>ಪ್ರೊ.ಹ.ರಾ.ಮಹೇಶ್ ಮಾತನಾಡಿ, ‘ಮಡಿವಾಳ ಮಾಚಿದೇವರು 12ನೇ ಶತಮಾನದ ವಚನ ಸಾಹಿತ್ಯಕಾರರ ಸಾಲಿನಲ್ಲಿ ತನ್ನದೇ ಆದ ವಿಭಿನ್ನ ಶೈಲಿಯಿಂದ ಗುರುತಿಸಿಕೊಂಡಿದ್ದರು. ಮಾಚಿದೇವರು ಅಂದಿನ ಸಮಾಜದಲ್ಲಿ ಅಸಮಾನತೆ, ಮೂಢನಂಬಿಕೆ, ಲಿಂಗ ತಾರತಮ್ಯದಂತಹ ಹಲವಾರು ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದರು’ ಎಂದರು.</p>.<p>ಪ್ರಕೃತಿ ಮತ್ತು ಮನುಷ್ಯನೇ ದೇವರೆಂದು ಭಾವಿಸಿದ್ದ ಮಡಿವಾಳ ಮಾಚಿದೇವ ವಚನಗಳ ರಕ್ಷಣೆಗೆ ಮುಂದಾದರು. ಮಡಿವಾಳ ಸಮುದಾಯ ಮನುಷ್ಯನ ಹೃದಯ, ಮಿದುಳು ಸ್ವಚ್ಛಗೊಳಿಸಿ ದೇಶ ಕಟ್ಟುವ ಕಾಯಕಕ್ಕೆ ಮುಂದಾಗಬೇಕು. ಮನೆಮನೆಯಲ್ಲೂ ವಚನ ಬರೆಯಲು ಪ್ರೇರೇಪಿಸಿದ 12ನೇ ಶತಮಾನದ ಮಹತ್ವ ಅರಿಯಬೇಕು’ ಎಂದರು. </p>.<p>ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಪೂವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್. ಗುರುಲಿಂಗಯ್ಯ, ಸಮುದಾಯದ ಮುಖಂಡರಾದ ದುಂಡುಮಾದಯ್ಯ, ಸಿದ್ದಯ್ಯ ಇದ್ದರು. </p>.<p>ಅದ್ಧೂರಿ ಮೆರವಣಿಗೆ: ವೇದಿಕೆ ಸಮಾರಂಭಕ್ಕೂ ಮೊದಲು ನಗರದಲ್ಲಿ ಮಡಿವಾಳ ಮಾಚಿದೇವ ಅವರ ಭಾವಚಿತ್ರದ ಅದ್ಧೂರಿ ಮೆರವಣಿಗೆ ನಡೆಯಿತು. ಚಾಮರಾಜೇಶ್ವರಸ್ವಾಮಿ ದೇವಾಲಯದಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕಲಾತಂಡಗಳೊಂದಿಗೆ ಸಾಗಿದ ವೈಭವದ ಮೆರವಣಿಗೆ ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ರಂಗ ಮಂದಿರ ತಲುಪಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>