ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ | ಭಾರಿ ಮಳೆ: ಗೋಡೆ ಕುಸಿದು ವ್ಯಕ್ತಿ ಸಾವು

Published : 12 ಅಕ್ಟೋಬರ್ 2024, 13:07 IST
Last Updated : 12 ಅಕ್ಟೋಬರ್ 2024, 13:07 IST
ಫಾಲೋ ಮಾಡಿ
Comments

ಚಾಮರಾಜನಗರ: ಜಿಲ್ಲೆಯಾದ್ಯಂತ ಶನಿವಾರ ಬಿರುಸಿನ ಮಳೆ ಸುರಿದಿದ್ದು ತಾಲ್ಲೂಕಿನ ಸಂತೇಮರಹಳ್ಳಿಯ ಬಾಳಿ ಗ್ರಾಮದಲ್ಲಿ ಗೋಡೆ ಕುಸಿದು ಚಂದ್ರನಾಯ್ಕ (39) ಎಂಬುವರು ಮೃತಪಟ್ಟಿದ್ದಾರೆ.

ಮನೆಯಲ್ಲಿ ಚಂದ್ರಾನಾಯ್ಕ್, ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದರು. ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿದಾಗ ಗೋಡೆಯಡಿ ಸಿಲುಕಿ ಚಂದ್ರಾನಾಯ್ಕ ಮೃತಪಟ್ಟರೆ, ಪತ್ನಿ ಹಾಗೂ ಇಬ್ಬರು ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ಗಿರಿಜಾ ಭೇಟಿನೀಡಿದ್ದು ಮೃತರ ಕುಟುಂಬಕ್ಕೆ ಸರ್ಕಾರಿದಂದ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT