ಕೆಪಿಸಿಸಿ ವಕ್ತಾರ ವೆಂಕಟೇಶ್ ಅವರು ಶುಕ್ರವಾರ ನಗರದ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಮರಿತಿಬ್ಬೇಗೌಡರ ಪರ ಮತಯಾಚನೆ ಮಾಡಿದರು. ‘ಕಳೆದ ಚುನಾವಣೆಯಲ್ಲಿ ಮರಿತಿಬ್ಬೇಗೌಡರಿಗೆ ಅತ್ಯಧಿಕ ಮತಗಳನ್ನು ನೀಡಿ ಆಶೀರ್ವಾದ ಮಾಡಿದ್ದರು. ಅದೇ ರೀತಿ ಈ ಬಾರಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಿಕೊಡಬೇಕು. ಕ್ಷೇತ್ರದಲ್ಲಿ ಅವರ ಪರ ಉತ್ತಮ ವಾತಾವರಣ ಇದೆ. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಪರಿಹರಿಸುವ ಇಚ್ಚಾಶಕ್ತಿ ಇರುವುದು ಕಾಂಗ್ರೆಸ್ಗೆ ಮಾತ್ರ’ ಎಂದರು.