ಚಾಮರಾಜನಗರ: ಹನೂರು ತಾಲ್ಲೂಕಿನ ಪಾಲಾರ್ ವನ್ಯಜೀವಿ ವಲಯದ ಡಿಆರ್ಎಫ್ಒ ಭೋಜಪ್ಪ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಡಾ.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಹನೂರು ತಾಲ್ಲೂಕಿನ ಪಾಲಾರ್ ಗ್ರಾಮದಲ್ಲಿ ಮನೆ ನಿರ್ಮಾಣಕ್ಕೆ ಅನುಮತಿ ನೀಡಲು 18 ಮಂದಿ ಫಲಾನುಭವಿಗಳಿಂದ ತಲಾ 1 ಸಾವಿರದಂತೆ 18,000 ಹಣಕ್ಕೆ ಭೋಜಪ್ಪ ಬೇಡಿಕೆ ಇರಿಸಿದ್ದರು. ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಕೆಯಾಗಿತ್ತು. ಬಳಿಕ ಫಲಾನುಭವಿಗಳಿಂದ ಹಣ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಇನ್ಸ್ಪೆಕ್ಟರ್ ಶಶಿಕುಮಾರ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ.