<p><strong>ಗುಂಡ್ಲುಪೇಟೆ:</strong> ಬೆಳಚಲವಾಡಿ ಗ್ರಾಮದಲ್ಲಿ ಶುಕ್ರವಾರ ಶಿವರಾತ್ರಿ ದಿನ ಮಹಿಳೆಯರು ಖಾಲಿ ಕೊಡ ಪ್ರದರ್ಶಿಸಿ, ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ, ಗ್ರಾಮ ಪಂಚಾಯಿತಿ ವಿರುದ್ಧ ಆಕ್ರೋಶ ಹೊರ ಹಾಕಿದರು.</p>.<p>ಮಹಿಳೆಯರು ಮಾತನಾಡಿ, ಬೆಳಚಲವಾಡಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಹೆಚ್ಚಿನ ತೊಂದರೆ ಉಂಟಾಗಿದೆ. 2-3 ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿತ್ತು. ಈಗ ಬೇಸಿಗೆಯಲ್ಲಿ 15 ದಿನಗಳಿಗೊಮ್ಮೆ ನಲ್ಲಿಗಳಲ್ಲಿ ನೀರು ಬಿಡಲಾಗುತ್ತಿದೆ. ನೀರಿಗೆ ತಾತ್ವಾರ ಉಂಟಾಗಿದ್ದು,ಜನರು ಪರದಾಡುವಂತಾಗಿದೆ. ಜೊತೆಗೆ ಖಾಸಗಿ ಬಾವಿ– ಪಂಪ್ ಸೆಟ್ಗಳನ್ನು ಅವಲಂಬಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಬೇಗೂರು ಪಂಚಾಯಿತಿ ಪಿಡಿಒ, ಅಧ್ಯಕ್ಷರು, ಸದಸ್ಯರು ಕುಡಿಯುವ ನೀರಿನ ಸಮಸ್ಯೆ ಶೀಘ್ರ ಬಗೆಹರಿಸಬೇಕು. ಇಲ್ಲದಿದ್ದರೆ ನೀರಿಗೆ ಹಾಹಾಕಾರ ಬಂದೊದಗುತ್ತದೆ. ಹಿಂದಿನಂತೆ 2 ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಬೇಕು. ಇಲ್ಲದಿದ್ದರೆ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>ಗ್ರಾಮ ನಿವಾಸಿಗಳಾದ ರತ್ನಮ್ಮ, ಸುಧಾ, ಚೈತ್ರ, ಸುಮತಿ, ಸುಮಾ, ಲೀಲಾವತಿ, ಸವಿತಾ, ಮಂಜುಳಾ, ದೇವಮ್ಮ, ಶಾಂತಿ, ಮಹಾದೇವಮ್ಮ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ:</strong> ಬೆಳಚಲವಾಡಿ ಗ್ರಾಮದಲ್ಲಿ ಶುಕ್ರವಾರ ಶಿವರಾತ್ರಿ ದಿನ ಮಹಿಳೆಯರು ಖಾಲಿ ಕೊಡ ಪ್ರದರ್ಶಿಸಿ, ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ, ಗ್ರಾಮ ಪಂಚಾಯಿತಿ ವಿರುದ್ಧ ಆಕ್ರೋಶ ಹೊರ ಹಾಕಿದರು.</p>.<p>ಮಹಿಳೆಯರು ಮಾತನಾಡಿ, ಬೆಳಚಲವಾಡಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಹೆಚ್ಚಿನ ತೊಂದರೆ ಉಂಟಾಗಿದೆ. 2-3 ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿತ್ತು. ಈಗ ಬೇಸಿಗೆಯಲ್ಲಿ 15 ದಿನಗಳಿಗೊಮ್ಮೆ ನಲ್ಲಿಗಳಲ್ಲಿ ನೀರು ಬಿಡಲಾಗುತ್ತಿದೆ. ನೀರಿಗೆ ತಾತ್ವಾರ ಉಂಟಾಗಿದ್ದು,ಜನರು ಪರದಾಡುವಂತಾಗಿದೆ. ಜೊತೆಗೆ ಖಾಸಗಿ ಬಾವಿ– ಪಂಪ್ ಸೆಟ್ಗಳನ್ನು ಅವಲಂಬಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಬೇಗೂರು ಪಂಚಾಯಿತಿ ಪಿಡಿಒ, ಅಧ್ಯಕ್ಷರು, ಸದಸ್ಯರು ಕುಡಿಯುವ ನೀರಿನ ಸಮಸ್ಯೆ ಶೀಘ್ರ ಬಗೆಹರಿಸಬೇಕು. ಇಲ್ಲದಿದ್ದರೆ ನೀರಿಗೆ ಹಾಹಾಕಾರ ಬಂದೊದಗುತ್ತದೆ. ಹಿಂದಿನಂತೆ 2 ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಬೇಕು. ಇಲ್ಲದಿದ್ದರೆ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>ಗ್ರಾಮ ನಿವಾಸಿಗಳಾದ ರತ್ನಮ್ಮ, ಸುಧಾ, ಚೈತ್ರ, ಸುಮತಿ, ಸುಮಾ, ಲೀಲಾವತಿ, ಸವಿತಾ, ಮಂಜುಳಾ, ದೇವಮ್ಮ, ಶಾಂತಿ, ಮಹಾದೇವಮ್ಮ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>