ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಮಗಾರಿ ಗುಣಮಟ್ಟ ಕಾಪಾಡಲು ಶಾಸಕ ಮಂಜುನಾಥ್ ಸೂಚನೆ

Published : 18 ಸೆಪ್ಟೆಂಬರ್ 2024, 15:49 IST
Last Updated : 18 ಸೆಪ್ಟೆಂಬರ್ 2024, 15:49 IST
ಫಾಲೋ ಮಾಡಿ
Comments

ಹನೂರು: ಸಮೀಪದ ಕಾಮಗೆರೆ ಗ್ರಾಮದಲ್ಲಿ ನಡೆಯುತ್ತಿರುವ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದ ಮುಂದುವರಿದ ಕಾಮಗಾರಿಯನ್ನು ಶಾಸಕ ಶಾಸಕ ಎಂ.ಆರ್ ಮಂಜುನಾಥ್ ಪರಿಶೀಲಿಸಿದರು. ಅಡುಗೆ ಮನೆ ನಿರ್ಮಾಣ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭವನದ ಮುಂದುವರೆದ ಕಾಮಗಾರಿ ಮತ್ತು ನೂತನ ಅಡುಗೆಮನೆ ಕೊಠಡಿ ಕಾಮಗಾರಿಗೆ 2012-13ಸಾಲಿನ ಪರಿಶಿಷ್ಟ ಜಾತಿ ಭವನಗಳ ಅನುದಾನದಡಿ ಅಂದಾಜು ₹ 12 ಲಕ್ಷ ಮಂಜೂರಾಗಿದೆ. ಭವನದ ಅಭಿವೃದ್ಧಿಗೆ ಸರ್ಕಾರದಿಂದ ಸಿಗುವ ಅನುದಾನವನ್ನು ಬಳಸಿಕೊಳ್ಳಿ. ಮುಂದುವರಿದ ಕಾಮಗಾರಿಗಳಲ್ಲಿ ಯಾವುದೇ ಲೋಪದೋಷಗಳು ಇಲ್ಲದಂತೆ ನೋಡಿಕೊಳ್ಳಿ ಎಂದರು. ನಿರ್ಮಿತಿ ಕೇಂದ್ರ ಜೆ.ಇ ರವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT