ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ: ಜಿಲ್ಲೆಗೆ ಮತ್ತೆರಡು ನಿಗಮ, ಮಂಡಳಿ ಸ್ಥಾನ

ಸೂರ್ಯನಾರಾಯಣ ವಿ/ಅವಿನ್‌ ಪ್ರಕಾಶ್‌ ವಿ.
Published : 1 ಮಾರ್ಚ್ 2024, 7:04 IST
Last Updated : 1 ಮಾರ್ಚ್ 2024, 7:04 IST
ಫಾಲೋ ಮಾಡಿ
Comments
‘ಪಕ್ಷ ಸಂಘಟನೆಗೆ ಸಿಕ್ಕ ಪ್ರತಿಫಲ’
ಕಾಡಾ ಅಧ್ಯಕ್ಷರಾಗಿ ನೇಮಕವಾಗಿದ್ದಕ್ಕೆ ‘ಪ್ರಜಾವಾಣಿ’ಯೊಂದಿಗೆ ಸಂತಸ ಹಂಚಿಕೊಂಡ ಪಿ.ಮರಿಸ್ವಾಮಿ ‘ಏಳೂವರೆ ವರ್ಷಗಳಿಂದ ಪಕ್ಷ ಸಂಘಟಿಸಿದ್ದಕ್ಕೆ ವರಿಷ್ಠರು ನೀಡಿದ ಕೆಲಸಗಳನ್ನು ಚಾಚೂ ತಪ್ಪದೆ ಪಾಲಿಸಿದ್ದಕ್ಕೆ ಸಿಕ್ಕ ಪ್ರತಿಫಲ ಇದು. ಸಿ.ಎಂ‌ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನನಗೆ ಜಿಲ್ಲೆಯ ಮೂವರೂ ಶಾಸಕರು ನಂಜನಗೂಡು ಶಾಸಕ ದರ್ಶನ್‌ ಧ್ರುವನಾರಾಯಣ ಮಾಜಿ ಶಾಸಕರು ಮುಖಂಡರು ಎಲ್ಲರೂ ಸಹಕಾರ ನೀಡಿದ್ದಾರೆ’ ಎಂದರು.  ‘ಪಕ್ಷದ ಕೆಲಸಗಳನ್ನು ಪ್ರಾಮಾಣಿಕವಾಗಿ ನಡೆಸುತ್ತಾ ಬಂದಿದ್ದೇನೆ. ಈಗ ಕಾಡಾ ಅಧ್ಯಕ್ಷನ ಜವಾಬ್ದಾರಿ ಸಿಕ್ಕಿದೆ. ಕಾಡಾ ವ್ಯಾಪ್ತಿಯ ಎಲ್ಲ ಕಡೆಗಳಿಗೂ ಭೇಟಿ ನೀಡಿ ಆಗ ಬೇಕಿರುವ ಕೆಲಸಗಳನ್ನು ಪಟ್ಟಿ ಮಾಡಿ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಶಕ್ತಿ ಮೀರಿ ಪ್ರಯತ್ನಿಸುವೆ. ಮಾರ್ಚ್‌ 4ರಂದು ಅಧಿಕಾರ ಸ್ವೀಕರಿಸುವೆ’ ಎಂದರು. 
ಎಸ್‌.ಜಯಣ್ಣ ಅತೃಪ್ತಿ?
ಈ ಮಧ್ಯೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿ (ಎಸ್‌ಸಿ) ಮತ್ತು ಅನುಸೂಚಿತ ಬುಡಕಟ್ಟುಗಳ (ಎಸ್‌ಟಿ) ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ಜಯಣ್ಣ ಅವರಿಗೆ ಸಮಾಧಾನ ತಂದಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.  ‘ಜಯಣ್ಣ ಅವರು ಗುರುವಾರ ಬೆಳಿಗ್ಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಬೆಂಗಳೂರಿಗೆ ತೆರಳಿದ್ದು  ಬೇರೆ ನಿಗಮ–ಮಂಡಳಿಗೆ ನೇಮಕ ಮಾಡುವಂತೆ ಮನವಿ ಮಾಡಲಿದ್ದಾರೆ’ ಎಂದು ಆಪ್ತರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.     ‘ಜಯಣ್ಣ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗ. ಉತ್ತಮ ನಿಗಮ–ಮಂಡಳಿಯನ್ನು ನೀಡದೆ ಅವರಿಗೆ ಅನ್ಯಾಯ ಮಾಡಲಾಗಿದೆ. ಇದು ಬೆಂಬಲಿಗರು ಅಭಿಮಾನಿಗಳಿಗೆ ನೋವು ತಂದಿದೆ. ಎಸ್‌ಸಿ ಎಸ್‌ಟಿ ಆಯೋಗದ ಅಧ್ಯಕ್ಷರಾಗಲು ಅವರಿಗೆ ಇಷ್ಟವಿಲ್ಲ’ ಎಂದು ಅವರ ಆಪ್ತರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.  ಪ್ರತಿಕ್ರಿಯೆ ಪಡೆಯಲು ಜಯಣ್ಣ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT