‘ಪಕ್ಷ ಸಂಘಟನೆಗೆ ಸಿಕ್ಕ ಪ್ರತಿಫಲ’
ಕಾಡಾ ಅಧ್ಯಕ್ಷರಾಗಿ ನೇಮಕವಾಗಿದ್ದಕ್ಕೆ ‘ಪ್ರಜಾವಾಣಿ’ಯೊಂದಿಗೆ ಸಂತಸ ಹಂಚಿಕೊಂಡ ಪಿ.ಮರಿಸ್ವಾಮಿ ‘ಏಳೂವರೆ ವರ್ಷಗಳಿಂದ ಪಕ್ಷ ಸಂಘಟಿಸಿದ್ದಕ್ಕೆ ವರಿಷ್ಠರು ನೀಡಿದ ಕೆಲಸಗಳನ್ನು ಚಾಚೂ ತಪ್ಪದೆ ಪಾಲಿಸಿದ್ದಕ್ಕೆ ಸಿಕ್ಕ ಪ್ರತಿಫಲ ಇದು. ಸಿ.ಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನನಗೆ ಜಿಲ್ಲೆಯ ಮೂವರೂ ಶಾಸಕರು ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ ಮಾಜಿ ಶಾಸಕರು ಮುಖಂಡರು ಎಲ್ಲರೂ ಸಹಕಾರ ನೀಡಿದ್ದಾರೆ’ ಎಂದರು. ‘ಪಕ್ಷದ ಕೆಲಸಗಳನ್ನು ಪ್ರಾಮಾಣಿಕವಾಗಿ ನಡೆಸುತ್ತಾ ಬಂದಿದ್ದೇನೆ. ಈಗ ಕಾಡಾ ಅಧ್ಯಕ್ಷನ ಜವಾಬ್ದಾರಿ ಸಿಕ್ಕಿದೆ. ಕಾಡಾ ವ್ಯಾಪ್ತಿಯ ಎಲ್ಲ ಕಡೆಗಳಿಗೂ ಭೇಟಿ ನೀಡಿ ಆಗ ಬೇಕಿರುವ ಕೆಲಸಗಳನ್ನು ಪಟ್ಟಿ ಮಾಡಿ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಶಕ್ತಿ ಮೀರಿ ಪ್ರಯತ್ನಿಸುವೆ. ಮಾರ್ಚ್ 4ರಂದು ಅಧಿಕಾರ ಸ್ವೀಕರಿಸುವೆ’ ಎಂದರು.