<p><strong>ಚಾಮರಾಜನಗರ</strong>: ಪದವಿ, ಡಿಪ್ಲೊಮಾ ಮುಗಿಸಿ 6 ತಿಂಗಳು ಕಳೆದರೂ ಉದ್ಯೋಗ ಲಭಿಸದೆ ಇರುವವರಿಗೆ ನಿರುದ್ಯೋಗ ಭತ್ಯೆ ನೀಡುವ ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಜಿಲ್ಲೆಯಲ್ಲಿ ಮಂಗಳವಾರ (ಡಿ.26) ಆರಂಭಗೊಂಡಿದೆ.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಯುವನಿಧಿ ಯೋಜನೆಯ ಭಿತ್ತಿಪತ್ರ ಬಿಡುಗಡೆ ಮಾಡುವ ಮೂಲಕ ನೋಂದಣಿಗೆ ಚಾಲನೆ ನೀಡಿದರು. </p>.<p>‘2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ 6 ತಿಂಗಳು ಆದರೂ ಉದ್ಯೋಗ ಸಿಗದೆ ಇರುವ ಪದವಿ, ಡಿಪ್ಲೊಮಾ ನಿರುದ್ಯೋಗಿಗಳು ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯಬಹುದು. ಪದವೀಧರರಿಗೆ ಮಾಸಿಕ ₹3000, ಡಿಪ್ಲೊಮಾ ತೇರ್ಗಡೆಯಾದವರಿಗೆ ₹1,500 ಭತ್ಯೆ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು. </p>.<p>ಯೋಜನೆಯಲ್ಲಿ ನೋಂದಾಯಿಸಿದ ನಂತರ ಎರಡು ವರ್ಷದವರೆಗೆ ನಿರುದ್ಯೋಗ ಭತ್ಯೆ ನೀಡಲಾಗುವುದು. ಭತ್ಯೆಯನ್ನು ಡಿಬಿಟಿ ಮುಖಾಂತರ ನೀಡಲಾಗುತ್ತದೆ. ಎರಡು ವರ್ಷದ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಯೋಜನೆಯ ಸೌಲಭ್ಯ ಸ್ಥಗಿತಗೊಳಿಸಲಾಗುತ್ತದೆ.</p>.<p>ಉನ್ನತ ವ್ಯಾಸಂಗಕ್ಕೆ ದಾಖಲಾಗಿರುವವರು, ಶಿಶುಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ, ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯುವವರು, ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿ ಬ್ಯಾಂಕ್ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಮಾಡುವವರು ಯೋಜನೆಗೆ ಅರ್ಹರಿರುವುದಿಲ್ಲ. </p>.<p>ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೆ ಇರುವವರು, ಕರ್ನಾಟಕದಲ್ಲಿ ಕನಿಷ್ಠ 6 ವರ್ಷಗಳ ವಾಸವಿರುವ ಪದವಿ, ಡಿಪ್ಲೊಮಾ ಅಧ್ಯಯನ ಮಾಡಿರುವವರು ಯೋಜನೆಗೆ ಅರ್ಹರಾಗಲಿದ್ದಾರೆ. ಯೋಜನೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಅರ್ಹ ಪದವೀಧರರು, ಡಿಪ್ಲೊಮಾ ಮಾಡಿದವರು https://sevasindhugs.karnataka.gov.inನಲ್ಲಿ, ಬಾಪೂಜಿ ಸೇವಾಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಯಾವುದೇ ಶುಲ್ಕವಿಲ್ಲದೇ ಅರ್ಜಿ ಸಲ್ಲಿಸಬಹುದು. </p>.<p>ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಡಿಪ್ಲೊಮಾ ಅಂಕಪಟ್ಟಿ ಪ್ರಮಾಣ ಪತ್ರದೊಂದಿಗೆ ನೊಂದಣಿ ಮಾಡಬೇಕು. ಮಾಹಿತಿಗಾಗಿ ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ ಅಥವಾ ದೂ.ಸಂ 08226-295080 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ. </p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಲಕ್ಷ್ಮಿ, ತಹಶೀಲ್ದಾರ್ ಬಸವರಾಜು, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆಯ ಅಧಿಕಾರಿ ಮಲ್ಲೇಶ್, ಇತರೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಪದವಿ, ಡಿಪ್ಲೊಮಾ ಮುಗಿಸಿ 6 ತಿಂಗಳು ಕಳೆದರೂ ಉದ್ಯೋಗ ಲಭಿಸದೆ ಇರುವವರಿಗೆ ನಿರುದ್ಯೋಗ ಭತ್ಯೆ ನೀಡುವ ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಜಿಲ್ಲೆಯಲ್ಲಿ ಮಂಗಳವಾರ (ಡಿ.26) ಆರಂಭಗೊಂಡಿದೆ.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಯುವನಿಧಿ ಯೋಜನೆಯ ಭಿತ್ತಿಪತ್ರ ಬಿಡುಗಡೆ ಮಾಡುವ ಮೂಲಕ ನೋಂದಣಿಗೆ ಚಾಲನೆ ನೀಡಿದರು. </p>.<p>‘2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ 6 ತಿಂಗಳು ಆದರೂ ಉದ್ಯೋಗ ಸಿಗದೆ ಇರುವ ಪದವಿ, ಡಿಪ್ಲೊಮಾ ನಿರುದ್ಯೋಗಿಗಳು ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯಬಹುದು. ಪದವೀಧರರಿಗೆ ಮಾಸಿಕ ₹3000, ಡಿಪ್ಲೊಮಾ ತೇರ್ಗಡೆಯಾದವರಿಗೆ ₹1,500 ಭತ್ಯೆ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು. </p>.<p>ಯೋಜನೆಯಲ್ಲಿ ನೋಂದಾಯಿಸಿದ ನಂತರ ಎರಡು ವರ್ಷದವರೆಗೆ ನಿರುದ್ಯೋಗ ಭತ್ಯೆ ನೀಡಲಾಗುವುದು. ಭತ್ಯೆಯನ್ನು ಡಿಬಿಟಿ ಮುಖಾಂತರ ನೀಡಲಾಗುತ್ತದೆ. ಎರಡು ವರ್ಷದ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಯೋಜನೆಯ ಸೌಲಭ್ಯ ಸ್ಥಗಿತಗೊಳಿಸಲಾಗುತ್ತದೆ.</p>.<p>ಉನ್ನತ ವ್ಯಾಸಂಗಕ್ಕೆ ದಾಖಲಾಗಿರುವವರು, ಶಿಶುಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ, ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯುವವರು, ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿ ಬ್ಯಾಂಕ್ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಮಾಡುವವರು ಯೋಜನೆಗೆ ಅರ್ಹರಿರುವುದಿಲ್ಲ. </p>.<p>ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೆ ಇರುವವರು, ಕರ್ನಾಟಕದಲ್ಲಿ ಕನಿಷ್ಠ 6 ವರ್ಷಗಳ ವಾಸವಿರುವ ಪದವಿ, ಡಿಪ್ಲೊಮಾ ಅಧ್ಯಯನ ಮಾಡಿರುವವರು ಯೋಜನೆಗೆ ಅರ್ಹರಾಗಲಿದ್ದಾರೆ. ಯೋಜನೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಅರ್ಹ ಪದವೀಧರರು, ಡಿಪ್ಲೊಮಾ ಮಾಡಿದವರು https://sevasindhugs.karnataka.gov.inನಲ್ಲಿ, ಬಾಪೂಜಿ ಸೇವಾಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಯಾವುದೇ ಶುಲ್ಕವಿಲ್ಲದೇ ಅರ್ಜಿ ಸಲ್ಲಿಸಬಹುದು. </p>.<p>ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಡಿಪ್ಲೊಮಾ ಅಂಕಪಟ್ಟಿ ಪ್ರಮಾಣ ಪತ್ರದೊಂದಿಗೆ ನೊಂದಣಿ ಮಾಡಬೇಕು. ಮಾಹಿತಿಗಾಗಿ ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ ಅಥವಾ ದೂ.ಸಂ 08226-295080 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ. </p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಲಕ್ಷ್ಮಿ, ತಹಶೀಲ್ದಾರ್ ಬಸವರಾಜು, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆಯ ಅಧಿಕಾರಿ ಮಲ್ಲೇಶ್, ಇತರೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>