<p><strong>ಚಿಂತಾಮಣಿ</strong>: ಚಿಂತಾಮಣಿ-ಚೇಳೂರು ರಸ್ತೆಯ ಸಿದ್ದೇಪಲ್ಲಿ ಕ್ರಾಸ್ ಸಮೀಪ ಮಂಗಳವಾರ ಬೊಲೆರೊ ವಾಹನ ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ ಬೊಲೆರೋ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಖಾಸಗಿ ಬಸ್ ಚಾಲಕ ಗಾಯಗೊಂಡಿದ್ದು ಚಿಕಿತ್ಸೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ.</p>.<p>ಚೇಳೂರು ತಾಲ್ಲೂಕಿನ ಪಾತಪಾಳ್ಯ ಸಮೀಪದ ಶಿವಪುರ ಗ್ರಾಮದ ರೆಡ್ಡಪ್ಪ (35) ಸ್ಥಳದಲ್ಲೇ ಮೃತಪಟ್ಟ ವಾಹನ ಚಾಲಕ. ಖಾಸಗಿ ಬಸ್ ಚಾಲಕ ಕಿರಣ್ ಗಾಯಗೊಂಡು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>ಖಾಸಗಿ ಬಸ್ ಚಿಂತಾಮಣಿಯಿಂದ ಚೇಳೂರು ಮಾರ್ಗವಾಗಿ ಆಂಧ್ರಪ್ರದೇಶದ ಬಿ-ಕೊತ್ತಕೋಟೆಗೆ ಹೋಗುತ್ತಿತ್ತು. ಬೊಲೆರೊ ವಾಹನ ಆಂಧ್ರಪ್ರದೇಶದಿಂದ ಟೊಮೆಟೊ ಕ್ರೇಟ್ಗಳನ್ನು ತುಂಬಿಸಿಕೊಂಡು ಚಿಂತಾಮಣಿಯ ಎಪಿಎಂಸಿ ಮಾರುಕಟ್ಟೆಗೆ ಬರುತ್ತಿತ್ತು. ಸಿದ್ದೇಪಲ್ಲಿ ಸಮೀಪ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. ಬೊಲೆರೊ ಬಸ್ನಲ್ಲಿ ಸಿಕ್ಕಿ ಹಾಕಿಕೊಂಡಿತ್ತು. ಪೊಲೀಸರು ಯಂತ್ರ ತರಿಸಿ ವಾಹನಗಳನ್ನು ಬೇರ್ಪಡಿಸಿದರು.</p>.<p>ರಸ್ತೆಯಲ್ಲಿ ಎರಡು ವಾಹನ ಹಾಗೂ ಟೊಮೆಟೊ ಹರಡಿಕೊಂಡು ಸಂಚಾರ ಅಸ್ತವ್ಯಸ್ತವಾಗಿತ್ತು. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವೆಂಕಟರಮಣಪ್ಪ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಚಿಂತಾಮಣಿ-ಚೇಳೂರು ರಸ್ತೆಯ ಸಿದ್ದೇಪಲ್ಲಿ ಕ್ರಾಸ್ ಸಮೀಪ ಮಂಗಳವಾರ ಬೊಲೆರೊ ವಾಹನ ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ ಬೊಲೆರೋ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಖಾಸಗಿ ಬಸ್ ಚಾಲಕ ಗಾಯಗೊಂಡಿದ್ದು ಚಿಕಿತ್ಸೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ.</p>.<p>ಚೇಳೂರು ತಾಲ್ಲೂಕಿನ ಪಾತಪಾಳ್ಯ ಸಮೀಪದ ಶಿವಪುರ ಗ್ರಾಮದ ರೆಡ್ಡಪ್ಪ (35) ಸ್ಥಳದಲ್ಲೇ ಮೃತಪಟ್ಟ ವಾಹನ ಚಾಲಕ. ಖಾಸಗಿ ಬಸ್ ಚಾಲಕ ಕಿರಣ್ ಗಾಯಗೊಂಡು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>ಖಾಸಗಿ ಬಸ್ ಚಿಂತಾಮಣಿಯಿಂದ ಚೇಳೂರು ಮಾರ್ಗವಾಗಿ ಆಂಧ್ರಪ್ರದೇಶದ ಬಿ-ಕೊತ್ತಕೋಟೆಗೆ ಹೋಗುತ್ತಿತ್ತು. ಬೊಲೆರೊ ವಾಹನ ಆಂಧ್ರಪ್ರದೇಶದಿಂದ ಟೊಮೆಟೊ ಕ್ರೇಟ್ಗಳನ್ನು ತುಂಬಿಸಿಕೊಂಡು ಚಿಂತಾಮಣಿಯ ಎಪಿಎಂಸಿ ಮಾರುಕಟ್ಟೆಗೆ ಬರುತ್ತಿತ್ತು. ಸಿದ್ದೇಪಲ್ಲಿ ಸಮೀಪ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. ಬೊಲೆರೊ ಬಸ್ನಲ್ಲಿ ಸಿಕ್ಕಿ ಹಾಕಿಕೊಂಡಿತ್ತು. ಪೊಲೀಸರು ಯಂತ್ರ ತರಿಸಿ ವಾಹನಗಳನ್ನು ಬೇರ್ಪಡಿಸಿದರು.</p>.<p>ರಸ್ತೆಯಲ್ಲಿ ಎರಡು ವಾಹನ ಹಾಗೂ ಟೊಮೆಟೊ ಹರಡಿಕೊಂಡು ಸಂಚಾರ ಅಸ್ತವ್ಯಸ್ತವಾಗಿತ್ತು. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವೆಂಕಟರಮಣಪ್ಪ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>