<p><strong>ಚಿಂತಾಮಣಿ:</strong> ಅರ್ಧದಲ್ಲಿ ಶಾಲೆ ಬಿಟ್ಟ ವಿದ್ಯಾರ್ಥಿಗಳನ್ನು ಶಿಕ್ಷಕರು ಗುರುತಿಸಿ ಮರಳಿ ಶಾಲೆಗೆ ಕರೆತರಲು ಶ್ರಮಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಮನವಿ ಮಾಡಿದರು.</p>.<p>ತಾಲ್ಲೂಕಿನ ಟಿ.ಎನ್.ಆರ್ ಸಂಸ್ಥೆಯ ಮುನಗನಹಳ್ಳಿ ಗ್ರಾಮದ ದಿವಂಗತ ಟಿ.ಎನ್.ರಾಮಪ್ಪ ನೆನಪಿನಲ್ಲಿ ಶನಿವಾರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಕ್ಕಳಿಗೆ ಉಚಿತ ಪುಸ್ತಕ, ಲೇಖನಿ ಸಾಮಾಗ್ರಿ ವಿತರಿಸಿ ಮಾತನಾಡಿದರು.</p>.<p>ತಾಲ್ಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮತ್ತು ಕೆಲವು ಆಯ್ದ ಮಾದರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮಾಡಲಾಗಿದೆ. ಹಂತ ಹಂತವಾಗಿ ಸರ್ಕಾರಿ ಶಾಲೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.</p>.<p>ಟಿಎನ್ಆರ್ ಸಿಲ್ಕ್ಸ್ ಅಂಡ್ ಸ್ಯಾರೀಸ್ ಸಂಸ್ಥೆಯ ಶ್ರೀನಿವಾಸ್ ಮಾತನಾಡಿದರು. ಮುಖಂಡ ಟಿ.ನಾರೆಪ್ಪ, ಶ್ರೀರಾಮರೆಡ್ಡಿ, ರಮೇಶ್, ವೆಂಕಟರೆಡ್ಡಿ, ನಾರಾಯಣರೆಡ್ಡಿ, ಮುನಿನಾರಾಯಣಪ್ಪ, ಕೃಷ್ಣಾರೆಡ್ಡಿ, ಶ್ರೀನಿವಾಸ, ಕೆಂಪರೆಡ್ಡಿ, ಜಯದೇವ್, ಲಕ್ಷ್ಮಣ ರೆಡ್ಡಿ, ಮಂಜುಳ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಅರ್ಧದಲ್ಲಿ ಶಾಲೆ ಬಿಟ್ಟ ವಿದ್ಯಾರ್ಥಿಗಳನ್ನು ಶಿಕ್ಷಕರು ಗುರುತಿಸಿ ಮರಳಿ ಶಾಲೆಗೆ ಕರೆತರಲು ಶ್ರಮಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಮನವಿ ಮಾಡಿದರು.</p>.<p>ತಾಲ್ಲೂಕಿನ ಟಿ.ಎನ್.ಆರ್ ಸಂಸ್ಥೆಯ ಮುನಗನಹಳ್ಳಿ ಗ್ರಾಮದ ದಿವಂಗತ ಟಿ.ಎನ್.ರಾಮಪ್ಪ ನೆನಪಿನಲ್ಲಿ ಶನಿವಾರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಕ್ಕಳಿಗೆ ಉಚಿತ ಪುಸ್ತಕ, ಲೇಖನಿ ಸಾಮಾಗ್ರಿ ವಿತರಿಸಿ ಮಾತನಾಡಿದರು.</p>.<p>ತಾಲ್ಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮತ್ತು ಕೆಲವು ಆಯ್ದ ಮಾದರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮಾಡಲಾಗಿದೆ. ಹಂತ ಹಂತವಾಗಿ ಸರ್ಕಾರಿ ಶಾಲೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.</p>.<p>ಟಿಎನ್ಆರ್ ಸಿಲ್ಕ್ಸ್ ಅಂಡ್ ಸ್ಯಾರೀಸ್ ಸಂಸ್ಥೆಯ ಶ್ರೀನಿವಾಸ್ ಮಾತನಾಡಿದರು. ಮುಖಂಡ ಟಿ.ನಾರೆಪ್ಪ, ಶ್ರೀರಾಮರೆಡ್ಡಿ, ರಮೇಶ್, ವೆಂಕಟರೆಡ್ಡಿ, ನಾರಾಯಣರೆಡ್ಡಿ, ಮುನಿನಾರಾಯಣಪ್ಪ, ಕೃಷ್ಣಾರೆಡ್ಡಿ, ಶ್ರೀನಿವಾಸ, ಕೆಂಪರೆಡ್ಡಿ, ಜಯದೇವ್, ಲಕ್ಷ್ಮಣ ರೆಡ್ಡಿ, ಮಂಜುಳ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>