<p><strong>ಗೌರಿಬಿದನೂರು</strong>: ತಾಲ್ಲೂಕಿನ ಬೇವಿನಹಳ್ಳಿ ಸಮೀಪದ ದೊಡ್ಡಮಲ್ಲೆ ಕೆರೆಯ ಕೋಡಿ ಕಾಲುವೆಗೆ ಸುಮಾರು ₹50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಚೆಕ್ಡ್ಯಾಂ ಕಾಮಗಾರಿಗೆ ಗುರುವಾರ ಶಾಸಕ ಕೆಎಚ್ ಪುಟ್ಟಸ್ವಾಮಿ ಗೌಡ ಭೂಮಿಪೂಜೆ ನಡೆಸಿದರು.</p>.<p>ಚೆಕ್ಡ್ಯಾಂ ನಿರ್ಮಾಣದಿಂದಾಗಿ ಈ ಭಾಗದ ರೈತರ ಕೊಳವೆ ಬಾವಿಗಳಲ್ಲಿ ಅಂತರ್ಜಲ ಹೆಚ್ಚಳವಾಗಿ ರೈತರಿಗೆ ಅನುಕೂಲವಾಗಲಿದೆ. ಬರಪೀಡಿತ ಪ್ರದೇಶವಾದ ಈ ಭಾಗದಲ್ಲಿ ಮಳೆಗಾಲದಲ್ಲಿ ಬೀಳುವ ಮಳೆಯ ನೀರನ್ನು ಹಿಡಿದಿಟ್ಟುಕೊಂಡು ಭೂಮಿಗೆ ಇಂಗಿಸುವ ಕೆಲಸಗಳನ್ನು ಚೆಕ್ ಡ್ಯಾಂ ಮೂಲಕ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಚೆಕ್ ಡ್ಯಾಂ ಕಾಮಗಾರಿ ನಿಗದಿತ ಅವಧಿಯಲ್ಲಿ, ಉತ್ತಮ ಗುಣಮಟ್ಟದಿಂದ ಕಾಮಗಾರಿ ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದ ಅವರು, ಕಳಪೆ ಕಾಮಗಾರಿ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಬಿವಿ.ಗೋಪಿನಾಥ್, ಕೋಚಿಮುಲ್ ನಿರ್ದೇಶಕ ಜೆ.ಕಾಂತರಾಜು, ಗ್ರಾ.ಪಂ ಅಧ್ಯಕ್ಷೆ ತೇಜಸ್ವಿನಿ, ಉಪಾಧ್ಯಕ್ಷೆ ಶೈಲಜಾ, ಶಿವಾಜಿರಾವ್, ಲಕ್ಷ್ಮಿನಾರಾಯಣ, ವೆಂಕಟೇಶ್, ಉಮಾಶಂಕರ್, ಮಹದೇವ, ನರಸಿಂಹರೆಡ್ಡಿ, ನಾಗರಾಜ್, ನವೀನ್ ಕುಮಾರ್, ಜಗನ್ನಾಥ್, ಬಸಪ್ಪ, ಗೋಪಿ, ನಾಗಪ್ಪ, ರಮೇಶ್, ಸಂಧ್ಯಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ತಾಲ್ಲೂಕಿನ ಬೇವಿನಹಳ್ಳಿ ಸಮೀಪದ ದೊಡ್ಡಮಲ್ಲೆ ಕೆರೆಯ ಕೋಡಿ ಕಾಲುವೆಗೆ ಸುಮಾರು ₹50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಚೆಕ್ಡ್ಯಾಂ ಕಾಮಗಾರಿಗೆ ಗುರುವಾರ ಶಾಸಕ ಕೆಎಚ್ ಪುಟ್ಟಸ್ವಾಮಿ ಗೌಡ ಭೂಮಿಪೂಜೆ ನಡೆಸಿದರು.</p>.<p>ಚೆಕ್ಡ್ಯಾಂ ನಿರ್ಮಾಣದಿಂದಾಗಿ ಈ ಭಾಗದ ರೈತರ ಕೊಳವೆ ಬಾವಿಗಳಲ್ಲಿ ಅಂತರ್ಜಲ ಹೆಚ್ಚಳವಾಗಿ ರೈತರಿಗೆ ಅನುಕೂಲವಾಗಲಿದೆ. ಬರಪೀಡಿತ ಪ್ರದೇಶವಾದ ಈ ಭಾಗದಲ್ಲಿ ಮಳೆಗಾಲದಲ್ಲಿ ಬೀಳುವ ಮಳೆಯ ನೀರನ್ನು ಹಿಡಿದಿಟ್ಟುಕೊಂಡು ಭೂಮಿಗೆ ಇಂಗಿಸುವ ಕೆಲಸಗಳನ್ನು ಚೆಕ್ ಡ್ಯಾಂ ಮೂಲಕ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಚೆಕ್ ಡ್ಯಾಂ ಕಾಮಗಾರಿ ನಿಗದಿತ ಅವಧಿಯಲ್ಲಿ, ಉತ್ತಮ ಗುಣಮಟ್ಟದಿಂದ ಕಾಮಗಾರಿ ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದ ಅವರು, ಕಳಪೆ ಕಾಮಗಾರಿ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಬಿವಿ.ಗೋಪಿನಾಥ್, ಕೋಚಿಮುಲ್ ನಿರ್ದೇಶಕ ಜೆ.ಕಾಂತರಾಜು, ಗ್ರಾ.ಪಂ ಅಧ್ಯಕ್ಷೆ ತೇಜಸ್ವಿನಿ, ಉಪಾಧ್ಯಕ್ಷೆ ಶೈಲಜಾ, ಶಿವಾಜಿರಾವ್, ಲಕ್ಷ್ಮಿನಾರಾಯಣ, ವೆಂಕಟೇಶ್, ಉಮಾಶಂಕರ್, ಮಹದೇವ, ನರಸಿಂಹರೆಡ್ಡಿ, ನಾಗರಾಜ್, ನವೀನ್ ಕುಮಾರ್, ಜಗನ್ನಾಥ್, ಬಸಪ್ಪ, ಗೋಪಿ, ನಾಗಪ್ಪ, ರಮೇಶ್, ಸಂಧ್ಯಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>