<p><strong>ಚಿಕ್ಕಬಳ್ಳಾಪುರ</strong>: ‘ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧಿಸುವಂತೆ ಕುಮಾರಸ್ವಾಮಿ ಅವರನ್ನು ಕೋರಲಾಗುತ್ತಿದೆ’– ಇದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಹೇಳಿದ ಮಾತು.</p>.<p>ಒಂದು ಕಡೆ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿರುವ ಮಾಜಿ ಸಚಿವ ಡಾ.ಕೆ.ಸುಧಾಕರ್ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿ ಮಾಡುತ್ತಿದ್ದಾರೆ. ಜೆಡಿಎಸ್ ಬೆಂಬಲವೂ ದೊರೆತಿದೆ ಎಂದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಚಾಕವೇಲುವಿನಲ್ಲಿ ಹೇಳಿರುವ ಅವರ ಹೇಳಿಕೆ ಚರ್ಚೆಗೂ ಗ್ರಾಸವಾಗಿದೆ. </p>.<p>ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೂ ದಳಪತಿಗಳು ಮಾತ್ರ ಇಲ್ಲಿಯವರೆಗೂ ಮೌನ ಮುರಿದಿಲ್ಲ. ಬಿಜೆಪಿ–ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವು ಬಿಜೆಪಿ ಪಾಲಾಗಲಿದೆ ಎನ್ನುವ ಮಾತು ಜೋರಾಗಿದೆ. ಮತ್ತೊಂದು ಕಡೆ ಡಾ.ಕೆ.ಸುಧಾಕರ್ ಮತ್ತು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಅವರ ಪುತ್ರ ಅಲೋಕ್ ಜೆಡಿಎಸ್ ನಾಯಕರನ್ನೂ ಭೇಟಿ ಮಾಡುತ್ತಿದ್ದಾರೆ. </p>.<p>ಇಷ್ಟೆಲ್ಲಾ ಆಗುತ್ತಿದ್ದರೂ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜೆಡಿಎಸ್ ನಾಯಕರು ಬಹಿರಂಗವಾಗಿ ಬಿಜೆಪಿ ಬೆಂಬಲಿಸುತ್ತೇವೆ ಅಥವಾ ಡಾ.ಕೆ.ಸುಧಾಕರ್, ವಿಶ್ವನಾಥ್ ತಮ್ಮನ್ನು ಸಂಪರ್ಕಿಸಿದ್ದಾರೆ ಎಂದು ಹೇಳುತ್ತಿಲ್ಲ. ಲೋಕಸಭೆ ಚುನಾವಣೆಯ ಕಾವು ಹೆಚ್ಚುತ್ತಿದ್ದರೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ದಳಪತಿಗಳಲ್ಲಿ ಉತ್ಸಾಹ ಕಾಣದಾಗಿದೆ. </p>.<p>ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಾಗೇಪಲ್ಲಿ, ಹೊಸಕೋಟೆ ಹೊರತುಪಡಿಸಿದರೆ ಉಳಿದ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜೆಡಿಎಸ್ಗೆ ತನ್ನದೇ ಆದ ಮತ ಬ್ಯಾಂಕ್ ಇದೆ. ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ನ ಆಟಗಳು ಸೋಲು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತವೆ. </p>.<p>ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜೆಡಿಎಸ್ಗೆ ಶಾಸಕರ ಬಲವಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೌರಿಬಿದನೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಆರ್.ನರಸಿಂಹಮೂರ್ತಿ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರು. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ, ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಬಿ.ಮುನೇಗೌಡ, ಯಲಹಂಕದಲ್ಲಿ ಎಂ.ಮುನೇಗೌಡ ಮೂರನೇ ಸ್ಥಾನ, ನೆಲಮಂಗಲದಲ್ಲಿ ಡಾ.ಕೆ.ಶ್ರೀನಿವಾಸಮೂರ್ತಿ, ದೇವನಹಳ್ಳಿಯಲ್ಲಿ ನಿಸರ್ಗ ನಾರಾಯಣಸ್ವಾಮಿ ಎರಡನೇ ಸ್ಥಾನ ಪಡೆದಿದ್ದರು. ಬಾಗೇಪಲ್ಲಿ ಕ್ಷೇತ್ರದಲ್ಲಿ ಸಿಪಿಎಂ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ನೀಡಿತ್ತು. ಹೊಸಕೋಟೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರಲಿಲ್ಲ. ಒಕ್ಕಲಿಗ ಸಮುದಾಯದ ಪ್ರಾಬಲ್ಯದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ಗೆ ತನ್ನದೇ ಆದ ಮತ ಬ್ಯಾಂಕ್ ಇದೆ.</p>.<p>ಜನತಾದಳದಿಂದ ಜಾಲಪ್ಪ ಗೆಲುವು: 1996ರ ಲೋಕಸಭೆ ಚುನಾವಣೆಯಲ್ಲಿ ಆರ್.ಎಲ್.ಜಾಲಪ್ಪ ಜನತಾದಳದಿಂದ ಗೆಲುವು ಸಾಧಿಸಿದರು. ನಂತರ 1998ರ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿ ಗೆಲುವು ದಾಖಲಿಸಿದರು. ಅಲ್ಲಿಂದ ಇಲ್ಲಿಯವರೆಗೆ ಜನತಾದಳ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ.</p>.<p>ಚುನಾವಣೆಯ ಕಾವು ಹೆಚ್ಚಿದಂತೆ ದಳಪತಿಗಳು ಮೌನವಾಗಿರುವುದು ಬಿಜೆಪಿ ನಾಯಕರಿಗೂ ಬಿಸಿ ತುಪ್ಪವಾಗಿದೆ. </p>.<p><strong>ಮೂರು ಚುನಾವಣೆಯಲ್ಲಿ ಸ್ಪರ್ಧೆ </strong></p><p>ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಜೆಡಿಎಸ್ ಮೂರು ಲೋಕಸಭೆ ಚುನಾವಣೆಗಳಲ್ಲಿ ಸ್ಪರ್ಧಿಸಿದೆ. 2004ರಲ್ಲಿ ಪಕ್ಷದ ಅಭ್ಯರ್ಥಿ ಶಶಿಕುಮಾರ್ 316182 ಮತಗಳನ್ನು ಪಡೆದಿದ್ದರು. 2009ರ ಚುನಾವಣೆಯಲ್ಲಿ ಸಿ.ಆರ್.ಮನೋಹರ್ 186075 ಮತಗಳನ್ನು ಮತ್ತು 2014ರ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ 346339 ಮತಗಳನ್ನು ಪಡೆದಿದ್ದರು. ಎಚ್.ಡಿ.ಕುಮಾರಸ್ವಾಮಿ ಈ ಚುನಾವಣೆಯಲ್ಲಿ ಮೂರನೇ ಸ್ಥಾನ ಪಡೆದಿದ್ದರು. 2019ರ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಯ ಕಾರಣ ಈ ಕ್ಷೇತ್ರವು ಕಾಂಗ್ರೆಸ್ ಪಾಲಾಯಿತು. ಈಗ 2023ರಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಕಾರಣ ಬಿಜೆಪಿಯ ಪಾಲಾಗುವ ಸಾಧ್ಯತೆಯೇ ಹೆಚ್ಚಿದೆ. </p>.<p><strong>ಎಚ್ಡಿಕೆ ಟೀಕಿಸಿದರೂ ಮೌನ! </strong></p><p>ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರು ಇತ್ತೀಚೆಗೆ ಎಚ್.ಡಿ.ಕುಮಾರಸ್ವಾಮಿ ಅವರ ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಿದ್ದ ಆಡಿಯೊ ಸಹ ಜಾಲತಾಣಗಳಲ್ಲಿ ಹರಿದಾಡಿತ್ತು. ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್ ಯುವ ಘಟಕದ ಉಪಾಧ್ಯಕ್ಷ ಅಖಿಲ್ ರೆಡ್ಡಿಗೆ ಶಾಸಕರ ಬೆಂಬಲಿಗರು ಬೆದರಿಕೆ ಸಹ ಹಾಕಿದ್ದರು. ಆ ಪ್ರಕರಣ ಠಾಣೆ ಮೆಟ್ಟಿಲಿಗೆ ಹೋದರೂ ಜೆಡಿಎಸ್ ನಾಯಕರು ಈ ವೇಳೆ ಹಾಜರಿರಲಿಲ್ಲ. ರಾಜ್ಯ ಜೆಡಿಎಸ್ ಘಟಕದಿಂದ ಶಾಸಕರ ಬೆಂಬಲಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರಕಟಣೆ ಹೊರಡಿಸಲಾಯಿತು. ಆದರೆ ಚಿಕ್ಕಬಳ್ಳಾಪುರದ ಜೆಡಿಎಸ್ ನಾಯಕರು ಮಾತ್ರ ಮೌನವಾಗಿದ್ದರು. ತಮ್ಮ ನಾಯಕನ ವೈಯಕ್ತಿಕ ತೇಜೋವಧೆ ಮಾಡಿದರೂ ಪ್ರತಿಕ್ರಿಯಿಸಲಿಲ್ಲ. ಇದು ಯುವ ಕಾರ್ಯಕರ್ತರಲ್ಲಿ ಬೇಸರಕ್ಕೂ ಕಾರಣವಾಗಿದೆ. ಜೆಡಿಎಸ್ ಮತ್ತು ಬಿಜೆಪಿ ನಾಯಕರು ಸಭೆಗಳ ಮೂಲಕ ಲೋಕಸಭೆ ಚುನಾವಣೆಗೆ ಉತ್ಸಾಹ ತೋರುತ್ತಿದ್ದರೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮಟ್ಟಿಗೆ ದಳಪತಿಗಳಲ್ಲಿ ಲೋಕಸಭೆ ಚುನಾವಣೆಯ ಕುರಿತು ಹುಮ್ಮಸ್ಸು ಇಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ‘ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧಿಸುವಂತೆ ಕುಮಾರಸ್ವಾಮಿ ಅವರನ್ನು ಕೋರಲಾಗುತ್ತಿದೆ’– ಇದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಹೇಳಿದ ಮಾತು.</p>.<p>ಒಂದು ಕಡೆ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿರುವ ಮಾಜಿ ಸಚಿವ ಡಾ.ಕೆ.ಸುಧಾಕರ್ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿ ಮಾಡುತ್ತಿದ್ದಾರೆ. ಜೆಡಿಎಸ್ ಬೆಂಬಲವೂ ದೊರೆತಿದೆ ಎಂದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಚಾಕವೇಲುವಿನಲ್ಲಿ ಹೇಳಿರುವ ಅವರ ಹೇಳಿಕೆ ಚರ್ಚೆಗೂ ಗ್ರಾಸವಾಗಿದೆ. </p>.<p>ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೂ ದಳಪತಿಗಳು ಮಾತ್ರ ಇಲ್ಲಿಯವರೆಗೂ ಮೌನ ಮುರಿದಿಲ್ಲ. ಬಿಜೆಪಿ–ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವು ಬಿಜೆಪಿ ಪಾಲಾಗಲಿದೆ ಎನ್ನುವ ಮಾತು ಜೋರಾಗಿದೆ. ಮತ್ತೊಂದು ಕಡೆ ಡಾ.ಕೆ.ಸುಧಾಕರ್ ಮತ್ತು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಅವರ ಪುತ್ರ ಅಲೋಕ್ ಜೆಡಿಎಸ್ ನಾಯಕರನ್ನೂ ಭೇಟಿ ಮಾಡುತ್ತಿದ್ದಾರೆ. </p>.<p>ಇಷ್ಟೆಲ್ಲಾ ಆಗುತ್ತಿದ್ದರೂ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜೆಡಿಎಸ್ ನಾಯಕರು ಬಹಿರಂಗವಾಗಿ ಬಿಜೆಪಿ ಬೆಂಬಲಿಸುತ್ತೇವೆ ಅಥವಾ ಡಾ.ಕೆ.ಸುಧಾಕರ್, ವಿಶ್ವನಾಥ್ ತಮ್ಮನ್ನು ಸಂಪರ್ಕಿಸಿದ್ದಾರೆ ಎಂದು ಹೇಳುತ್ತಿಲ್ಲ. ಲೋಕಸಭೆ ಚುನಾವಣೆಯ ಕಾವು ಹೆಚ್ಚುತ್ತಿದ್ದರೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ದಳಪತಿಗಳಲ್ಲಿ ಉತ್ಸಾಹ ಕಾಣದಾಗಿದೆ. </p>.<p>ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಾಗೇಪಲ್ಲಿ, ಹೊಸಕೋಟೆ ಹೊರತುಪಡಿಸಿದರೆ ಉಳಿದ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜೆಡಿಎಸ್ಗೆ ತನ್ನದೇ ಆದ ಮತ ಬ್ಯಾಂಕ್ ಇದೆ. ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ನ ಆಟಗಳು ಸೋಲು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತವೆ. </p>.<p>ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜೆಡಿಎಸ್ಗೆ ಶಾಸಕರ ಬಲವಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೌರಿಬಿದನೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಆರ್.ನರಸಿಂಹಮೂರ್ತಿ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರು. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ, ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಬಿ.ಮುನೇಗೌಡ, ಯಲಹಂಕದಲ್ಲಿ ಎಂ.ಮುನೇಗೌಡ ಮೂರನೇ ಸ್ಥಾನ, ನೆಲಮಂಗಲದಲ್ಲಿ ಡಾ.ಕೆ.ಶ್ರೀನಿವಾಸಮೂರ್ತಿ, ದೇವನಹಳ್ಳಿಯಲ್ಲಿ ನಿಸರ್ಗ ನಾರಾಯಣಸ್ವಾಮಿ ಎರಡನೇ ಸ್ಥಾನ ಪಡೆದಿದ್ದರು. ಬಾಗೇಪಲ್ಲಿ ಕ್ಷೇತ್ರದಲ್ಲಿ ಸಿಪಿಎಂ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ನೀಡಿತ್ತು. ಹೊಸಕೋಟೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿರಲಿಲ್ಲ. ಒಕ್ಕಲಿಗ ಸಮುದಾಯದ ಪ್ರಾಬಲ್ಯದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ಗೆ ತನ್ನದೇ ಆದ ಮತ ಬ್ಯಾಂಕ್ ಇದೆ.</p>.<p>ಜನತಾದಳದಿಂದ ಜಾಲಪ್ಪ ಗೆಲುವು: 1996ರ ಲೋಕಸಭೆ ಚುನಾವಣೆಯಲ್ಲಿ ಆರ್.ಎಲ್.ಜಾಲಪ್ಪ ಜನತಾದಳದಿಂದ ಗೆಲುವು ಸಾಧಿಸಿದರು. ನಂತರ 1998ರ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿ ಗೆಲುವು ದಾಖಲಿಸಿದರು. ಅಲ್ಲಿಂದ ಇಲ್ಲಿಯವರೆಗೆ ಜನತಾದಳ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ.</p>.<p>ಚುನಾವಣೆಯ ಕಾವು ಹೆಚ್ಚಿದಂತೆ ದಳಪತಿಗಳು ಮೌನವಾಗಿರುವುದು ಬಿಜೆಪಿ ನಾಯಕರಿಗೂ ಬಿಸಿ ತುಪ್ಪವಾಗಿದೆ. </p>.<p><strong>ಮೂರು ಚುನಾವಣೆಯಲ್ಲಿ ಸ್ಪರ್ಧೆ </strong></p><p>ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಜೆಡಿಎಸ್ ಮೂರು ಲೋಕಸಭೆ ಚುನಾವಣೆಗಳಲ್ಲಿ ಸ್ಪರ್ಧಿಸಿದೆ. 2004ರಲ್ಲಿ ಪಕ್ಷದ ಅಭ್ಯರ್ಥಿ ಶಶಿಕುಮಾರ್ 316182 ಮತಗಳನ್ನು ಪಡೆದಿದ್ದರು. 2009ರ ಚುನಾವಣೆಯಲ್ಲಿ ಸಿ.ಆರ್.ಮನೋಹರ್ 186075 ಮತಗಳನ್ನು ಮತ್ತು 2014ರ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ 346339 ಮತಗಳನ್ನು ಪಡೆದಿದ್ದರು. ಎಚ್.ಡಿ.ಕುಮಾರಸ್ವಾಮಿ ಈ ಚುನಾವಣೆಯಲ್ಲಿ ಮೂರನೇ ಸ್ಥಾನ ಪಡೆದಿದ್ದರು. 2019ರ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಯ ಕಾರಣ ಈ ಕ್ಷೇತ್ರವು ಕಾಂಗ್ರೆಸ್ ಪಾಲಾಯಿತು. ಈಗ 2023ರಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಕಾರಣ ಬಿಜೆಪಿಯ ಪಾಲಾಗುವ ಸಾಧ್ಯತೆಯೇ ಹೆಚ್ಚಿದೆ. </p>.<p><strong>ಎಚ್ಡಿಕೆ ಟೀಕಿಸಿದರೂ ಮೌನ! </strong></p><p>ಶಾಸಕ ಪ್ರದೀಪ್ ಈಶ್ವರ್ ಬೆಂಬಲಿಗರು ಇತ್ತೀಚೆಗೆ ಎಚ್.ಡಿ.ಕುಮಾರಸ್ವಾಮಿ ಅವರ ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಿದ್ದ ಆಡಿಯೊ ಸಹ ಜಾಲತಾಣಗಳಲ್ಲಿ ಹರಿದಾಡಿತ್ತು. ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್ ಯುವ ಘಟಕದ ಉಪಾಧ್ಯಕ್ಷ ಅಖಿಲ್ ರೆಡ್ಡಿಗೆ ಶಾಸಕರ ಬೆಂಬಲಿಗರು ಬೆದರಿಕೆ ಸಹ ಹಾಕಿದ್ದರು. ಆ ಪ್ರಕರಣ ಠಾಣೆ ಮೆಟ್ಟಿಲಿಗೆ ಹೋದರೂ ಜೆಡಿಎಸ್ ನಾಯಕರು ಈ ವೇಳೆ ಹಾಜರಿರಲಿಲ್ಲ. ರಾಜ್ಯ ಜೆಡಿಎಸ್ ಘಟಕದಿಂದ ಶಾಸಕರ ಬೆಂಬಲಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರಕಟಣೆ ಹೊರಡಿಸಲಾಯಿತು. ಆದರೆ ಚಿಕ್ಕಬಳ್ಳಾಪುರದ ಜೆಡಿಎಸ್ ನಾಯಕರು ಮಾತ್ರ ಮೌನವಾಗಿದ್ದರು. ತಮ್ಮ ನಾಯಕನ ವೈಯಕ್ತಿಕ ತೇಜೋವಧೆ ಮಾಡಿದರೂ ಪ್ರತಿಕ್ರಿಯಿಸಲಿಲ್ಲ. ಇದು ಯುವ ಕಾರ್ಯಕರ್ತರಲ್ಲಿ ಬೇಸರಕ್ಕೂ ಕಾರಣವಾಗಿದೆ. ಜೆಡಿಎಸ್ ಮತ್ತು ಬಿಜೆಪಿ ನಾಯಕರು ಸಭೆಗಳ ಮೂಲಕ ಲೋಕಸಭೆ ಚುನಾವಣೆಗೆ ಉತ್ಸಾಹ ತೋರುತ್ತಿದ್ದರೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮಟ್ಟಿಗೆ ದಳಪತಿಗಳಲ್ಲಿ ಲೋಕಸಭೆ ಚುನಾವಣೆಯ ಕುರಿತು ಹುಮ್ಮಸ್ಸು ಇಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>