<p><strong>ಚಿಕ್ಕಬಳ್ಳಾಪುರ</strong>: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿದಿದೆ. ಜುಲೈ 26ರ ಅಂತ್ಯಕ್ಕೆ ಜಿಲ್ಲೆಯಲ್ಲಿ ವಾಡಿಕೆ ಮಳೆ 69.3 ಮಿ.ಮೀ ಸುರಿಯಬೇಕಾಗಿತ್ತು. ಆದರೆ 47.2ರಷ್ಟು ಮಾತ್ರ ಮಳೆ ಸುರಿದಿದೆ. ಹೀಗೆ ಮಳೆಯ ಪ್ರಮಾಣ ಕಡಿಮೆ ಆಗಿರುವುದು ಜಿಲ್ಲೆಯಲ್ಲಿ ಮುಂಗಾರು ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. </p>.<p>ಇಲ್ಲಿಯವರೆಗೆ ಜಿಲ್ಲೆಯಲ್ಲಿ ಕೃಷಿ ಇಲಾಖೆಯ ನಿಗದಿತ ಗುರಿಯಲ್ಲಿ ಶೇ 57.80ರಷ್ಟು ಮಾತ್ರ ಬಿತ್ತನೆಯಾಗಿದೆ. ಸಾಮಾನ್ಯವಾಗಿ ಈ ವೇಳೆಗಾಗಲೇ ಗುರಿ ಸಾಧನೆಯಲ್ಲಿ ಉತ್ತಮ ಮಟ್ಟದಲ್ಲಿ ಇರಬೇಕಾಗಿತ್ತು. ಆದರೆ ಜಿಲ್ಲೆಯಲ್ಲಿ ಬಿತ್ತನೆ ಕುಂಟುತ್ತ ಸಾಗಿದೆ.</p>.<p>ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಅವಧಿಯಲ್ಲಿ 1,28,495 ಹೆಕ್ಟೇರ್ನಲ್ಲಿ ಬಿತ್ತನೆಯ ಗುರಿಯನ್ನು ಕೃಷಿ ಇಲಾಖೆ ಹೊಂದಿದೆ. ಆದರೆ ಇಲ್ಲಿಯವರೆಗೆ 74,276 ಹೆಕ್ಟೇರ್ನಲ್ಲಿ ಮಾತ್ರ ಬಿತ್ತನೆಯಾಗಿದೆ. ಕಳೆದ ಮೂರು ವರ್ಷಗಳ ಕೃಷಿ ಇಲಾಖೆಯ ಬಿತ್ತನೆಯ ಗುರಿಗೆ ಹೋಲಿಸಿದರೆ ಈ ವರ್ಷ ದೊಡ್ಡ ಪ್ರಮಾಣದಲ್ಲಿಯೇ ಬಿತ್ತನೆಯ ಗುರಿ ಕಡಿಮೆ ಆಗಿದೆ.</p>.<p>ರಾಗಿ, ಶೇಂಗಾ ಅಧಿಕ: ರಾಗಿ, ಮುಸುಕಿನ ಜೋಳ ಮತ್ತು ಶೇಂಗಾ ಮುಂಗಾರು ಅವಧಿಯಲ್ಲಿ ಜಿಲ್ಲೆಯ ಪ್ರಮುಖ ಬಿತ್ತನೆಯ ಬೆಳೆಗಳಾಗಿವೆ. </p>.<p>1,01,665 ಹೆಕ್ಟೇರ್ನಲ್ಲಿ ಏಕದಳ ಧಾನ್ಯಗಳ ಬಿತ್ತನೆ ಗುರಿ ಇದ್ದು 56,778 ಬಿತ್ತನೆಯಾಗುವ ಮೂಲಕ ಶೇ 55.85ರಷ್ಟು ಗುರಿ ಸಾಧನೆಯಾಗಿದೆ. 6,057 ಹೆಕ್ಟೇರ್ನಲ್ಲಿ ದ್ವಿದಳ ಧಾನ್ಯಗಳ ಬಿತ್ತನೆ ಗುರಿ ಇದ್ದು 3,457 ಹೆಕ್ಟೇರ್ ಬಿತ್ತನೆಯಾಗುವ ಮೂಲಕ ಶೇ 57.07ರಷ್ಟು ಗುರಿ ಸಾಧನೆಯಾಗಿದೆ.</p>.<p>20,433 ಹೆಕ್ಟೇರ್ನಲ್ಲಿ ಎಣ್ಣೆಕಾಳುಗಳು ಬಿತ್ತನೆ ಗುರಿ ಹೊಂದಲಾಗಿತ್ತು. ಈಗ ಜಿಲ್ಲೆಯಲ್ಲಿ 14,041 ಹೆಕ್ಟೇರ್ ಬಿತ್ತನೆಯೊಂದಿಗೆ ಶೇ 68.72ರಷ್ಟು ಗುರಿ ಸಾಧನೆಯಾಗಿದೆ. ವಾಣಿಜ್ಯ ಬೆಳೆಗಳಾದ ಕಬ್ಬು ಮತ್ತು ಹತ್ತಿಯನ್ನು 340 ಹೆಕ್ಟೇರ್ನಲ್ಲಿ ಬೆಳೆಯುವ ಗುರಿ ಹೊಂದಲಾಗಿದ್ದು ಒಂದು ಎಕರೆಯೂ ಬಿತ್ತನೆಯಾಗಿಲ್ಲ.</p>.<p>ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ರಾಗಿ, ಶೇಂಗಾ ಮತ್ತು ಹೈಬ್ರಿಡ್ ಮುಸುಕಿನ ಜೋಳದ ಬಿತ್ತನೆ ಗುರಿಯ ಪ್ರಮಾಣವೂ ಕಡಿಮೆ ಆಗಿದೆ. ಗೌರಿಬಿದನೂರು ಹೊರತುಪಡಿಸಿದರೆ ಉಳಿದ ಎಲ್ಲಾ ತಾಲ್ಲೂಕುಗಳಲ್ಲಿಯೂ ಕಳೆದ ವರ್ಷಕ್ಕಿಂತ ಈ ಬಾರಿ ಬಿತ್ತನೆಯ ಗುರಿ ಕಡಿಮೆ ಇದೆ. </p>.<p>ಕಳೆದ ವರ್ಷ ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟಿತ್ತು. ಅದಕ್ಕೂ ಹಿಂದಿನ ಎರಡು ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಉತ್ತಮ ಮಳೆ ಆಗಿತ್ತು. 2021 ಮತ್ತು 2022ರಲ್ಲಿ ಜಿಲ್ಲೆಯಲ್ಲಿ ಉತ್ತಮವಾಗಿ ಬಿತ್ತನೆ ಆಗಿತ್ತು. ಆದರೆ ಕಳೆದ ವರ್ಷ ಮಳೆ ಇಲ್ಲದ ಕಾರಣ ಬಿತ್ತನೆಯೂ ಕುಂಠಿತವಾಗಿತ್ತು. ಬಿತ್ತನೆಯಾದ ಪ್ರದೇಶದಲ್ಲಿಯೂ ಬೆಳೆ ಬಂದಿರಲಿಲ್ಲ. </p>.<p>ಈ ಬಾರಿ ಬಿತ್ತನೆಗೆ ರಸಗೊಬ್ಬರ, ಬಿತ್ತನೆ ಬೀಜಗಳನ್ನು ಸಿದ್ಧಗೊಳಿಸಿಕೊಳ್ಳಲಾಗಿದೆ. ಆದರೆ ಸೂಕ್ತವಾಗಿ ಮಳೆ ಜಿಲ್ಲೆಯಲ್ಲಿ ಸುರಿಯುತ್ತಿಲ್ಲ. ಆಗಸ್ಟ್ ತಿಂಗಳಲ್ಲಿ ಉತ್ತಮವಾಗಿ ಮಳೆ ಸುರಿದರೆ ಬಿತ್ತನೆ ಚುರುಕಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿದಿದೆ. ಜುಲೈ 26ರ ಅಂತ್ಯಕ್ಕೆ ಜಿಲ್ಲೆಯಲ್ಲಿ ವಾಡಿಕೆ ಮಳೆ 69.3 ಮಿ.ಮೀ ಸುರಿಯಬೇಕಾಗಿತ್ತು. ಆದರೆ 47.2ರಷ್ಟು ಮಾತ್ರ ಮಳೆ ಸುರಿದಿದೆ. ಹೀಗೆ ಮಳೆಯ ಪ್ರಮಾಣ ಕಡಿಮೆ ಆಗಿರುವುದು ಜಿಲ್ಲೆಯಲ್ಲಿ ಮುಂಗಾರು ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. </p>.<p>ಇಲ್ಲಿಯವರೆಗೆ ಜಿಲ್ಲೆಯಲ್ಲಿ ಕೃಷಿ ಇಲಾಖೆಯ ನಿಗದಿತ ಗುರಿಯಲ್ಲಿ ಶೇ 57.80ರಷ್ಟು ಮಾತ್ರ ಬಿತ್ತನೆಯಾಗಿದೆ. ಸಾಮಾನ್ಯವಾಗಿ ಈ ವೇಳೆಗಾಗಲೇ ಗುರಿ ಸಾಧನೆಯಲ್ಲಿ ಉತ್ತಮ ಮಟ್ಟದಲ್ಲಿ ಇರಬೇಕಾಗಿತ್ತು. ಆದರೆ ಜಿಲ್ಲೆಯಲ್ಲಿ ಬಿತ್ತನೆ ಕುಂಟುತ್ತ ಸಾಗಿದೆ.</p>.<p>ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಅವಧಿಯಲ್ಲಿ 1,28,495 ಹೆಕ್ಟೇರ್ನಲ್ಲಿ ಬಿತ್ತನೆಯ ಗುರಿಯನ್ನು ಕೃಷಿ ಇಲಾಖೆ ಹೊಂದಿದೆ. ಆದರೆ ಇಲ್ಲಿಯವರೆಗೆ 74,276 ಹೆಕ್ಟೇರ್ನಲ್ಲಿ ಮಾತ್ರ ಬಿತ್ತನೆಯಾಗಿದೆ. ಕಳೆದ ಮೂರು ವರ್ಷಗಳ ಕೃಷಿ ಇಲಾಖೆಯ ಬಿತ್ತನೆಯ ಗುರಿಗೆ ಹೋಲಿಸಿದರೆ ಈ ವರ್ಷ ದೊಡ್ಡ ಪ್ರಮಾಣದಲ್ಲಿಯೇ ಬಿತ್ತನೆಯ ಗುರಿ ಕಡಿಮೆ ಆಗಿದೆ.</p>.<p>ರಾಗಿ, ಶೇಂಗಾ ಅಧಿಕ: ರಾಗಿ, ಮುಸುಕಿನ ಜೋಳ ಮತ್ತು ಶೇಂಗಾ ಮುಂಗಾರು ಅವಧಿಯಲ್ಲಿ ಜಿಲ್ಲೆಯ ಪ್ರಮುಖ ಬಿತ್ತನೆಯ ಬೆಳೆಗಳಾಗಿವೆ. </p>.<p>1,01,665 ಹೆಕ್ಟೇರ್ನಲ್ಲಿ ಏಕದಳ ಧಾನ್ಯಗಳ ಬಿತ್ತನೆ ಗುರಿ ಇದ್ದು 56,778 ಬಿತ್ತನೆಯಾಗುವ ಮೂಲಕ ಶೇ 55.85ರಷ್ಟು ಗುರಿ ಸಾಧನೆಯಾಗಿದೆ. 6,057 ಹೆಕ್ಟೇರ್ನಲ್ಲಿ ದ್ವಿದಳ ಧಾನ್ಯಗಳ ಬಿತ್ತನೆ ಗುರಿ ಇದ್ದು 3,457 ಹೆಕ್ಟೇರ್ ಬಿತ್ತನೆಯಾಗುವ ಮೂಲಕ ಶೇ 57.07ರಷ್ಟು ಗುರಿ ಸಾಧನೆಯಾಗಿದೆ.</p>.<p>20,433 ಹೆಕ್ಟೇರ್ನಲ್ಲಿ ಎಣ್ಣೆಕಾಳುಗಳು ಬಿತ್ತನೆ ಗುರಿ ಹೊಂದಲಾಗಿತ್ತು. ಈಗ ಜಿಲ್ಲೆಯಲ್ಲಿ 14,041 ಹೆಕ್ಟೇರ್ ಬಿತ್ತನೆಯೊಂದಿಗೆ ಶೇ 68.72ರಷ್ಟು ಗುರಿ ಸಾಧನೆಯಾಗಿದೆ. ವಾಣಿಜ್ಯ ಬೆಳೆಗಳಾದ ಕಬ್ಬು ಮತ್ತು ಹತ್ತಿಯನ್ನು 340 ಹೆಕ್ಟೇರ್ನಲ್ಲಿ ಬೆಳೆಯುವ ಗುರಿ ಹೊಂದಲಾಗಿದ್ದು ಒಂದು ಎಕರೆಯೂ ಬಿತ್ತನೆಯಾಗಿಲ್ಲ.</p>.<p>ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ರಾಗಿ, ಶೇಂಗಾ ಮತ್ತು ಹೈಬ್ರಿಡ್ ಮುಸುಕಿನ ಜೋಳದ ಬಿತ್ತನೆ ಗುರಿಯ ಪ್ರಮಾಣವೂ ಕಡಿಮೆ ಆಗಿದೆ. ಗೌರಿಬಿದನೂರು ಹೊರತುಪಡಿಸಿದರೆ ಉಳಿದ ಎಲ್ಲಾ ತಾಲ್ಲೂಕುಗಳಲ್ಲಿಯೂ ಕಳೆದ ವರ್ಷಕ್ಕಿಂತ ಈ ಬಾರಿ ಬಿತ್ತನೆಯ ಗುರಿ ಕಡಿಮೆ ಇದೆ. </p>.<p>ಕಳೆದ ವರ್ಷ ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟಿತ್ತು. ಅದಕ್ಕೂ ಹಿಂದಿನ ಎರಡು ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಉತ್ತಮ ಮಳೆ ಆಗಿತ್ತು. 2021 ಮತ್ತು 2022ರಲ್ಲಿ ಜಿಲ್ಲೆಯಲ್ಲಿ ಉತ್ತಮವಾಗಿ ಬಿತ್ತನೆ ಆಗಿತ್ತು. ಆದರೆ ಕಳೆದ ವರ್ಷ ಮಳೆ ಇಲ್ಲದ ಕಾರಣ ಬಿತ್ತನೆಯೂ ಕುಂಠಿತವಾಗಿತ್ತು. ಬಿತ್ತನೆಯಾದ ಪ್ರದೇಶದಲ್ಲಿಯೂ ಬೆಳೆ ಬಂದಿರಲಿಲ್ಲ. </p>.<p>ಈ ಬಾರಿ ಬಿತ್ತನೆಗೆ ರಸಗೊಬ್ಬರ, ಬಿತ್ತನೆ ಬೀಜಗಳನ್ನು ಸಿದ್ಧಗೊಳಿಸಿಕೊಳ್ಳಲಾಗಿದೆ. ಆದರೆ ಸೂಕ್ತವಾಗಿ ಮಳೆ ಜಿಲ್ಲೆಯಲ್ಲಿ ಸುರಿಯುತ್ತಿಲ್ಲ. ಆಗಸ್ಟ್ ತಿಂಗಳಲ್ಲಿ ಉತ್ತಮವಾಗಿ ಮಳೆ ಸುರಿದರೆ ಬಿತ್ತನೆ ಚುರುಕಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>