<p><strong>ಶಿಡ್ಲಘಟ್ಟ</strong>: ಬಯಲು ಸೀಮೆ ಭಾಗಕ್ಕೆ ಕೃಷ್ಣಾ ನದಿ ನೀರು ಹರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಕೃಷಿಗಾಗಿ ಈ ಭಾಗಕ್ಕೆ ಕೃಷ್ಣಾ ನದಿ ನೀರನ್ನು ಹರಿಸಬೇಕು ಎಂದು ಶಿಡ್ಲಘಟ್ಟ ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.</p>.<p>ನವದೆಹಲಿ ಅವರ ಕಚೇರಿಯಲ್ಲಿ ಭೇಟಿ ಮಾಡಿ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಬಯಲು ಸೀಮೆ ಪ್ರದೇಶಕ್ಕೆ ಕೃಷ್ಣಾ ನದಿ ನೀರು ಹರಿಸಲು ಕ್ರಮವಹಿಸುವಂತೆ ಮನವಿ ಮಾಡಿದರು.</p>.<p>ಈ ಭಾಗದಲ್ಲಿ ಅಂತರ್ಜಲ ಮಟ್ಟ 1500 ಅಡಿಯಷ್ಟು ಆಳಕ್ಕೆ ಕುಸಿದಿದೆ. ಅಷ್ಟು ಆಳಕ್ಕೆ ಕೊಳವೆಬಾವಿ ಕೊರೆಸಿದರೂ ಅದರಲ್ಲಿ ನೀರು ಸಿಗುವ ಪ್ರಮಾಣ ಕೇವಲ ಶೇ30ರಷ್ಟು ಇದೆ. ಸಿಗುವ ನೀರಿನಲ್ಲೂ ಫೋರೈಡ್ ಸೇರಿದಂತೆ ಅನೇಕ ರೀತಿಯ ಹಾನಿಕಾರಕ ಅಂಶ ಇವೆ.</p>.<p>ಈ ನೀರು ಕೃಷಿಗೂ ಹಾಗೂ ಕುಡಿಯಲು ಹಾನಿಕಾರಕವಾಗಿದೆ. ಪ್ರಯೋಗಾಲಯಗಳಲ್ಲಿ ಈ ಅಂಶ ಈಗಾಗಲೇ ಬಯಲಾಗಿದ್ದು ವಿಧಿಯಿಲ್ಲದೆ ವಿಷಪೂರಿತ ನೀರು ಬಳಸುವ ಅನಿವಾರ್ಯತೆ ಈ ಭಾಗದ ಜನರದ್ದಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಇತ್ತೀಚಿನ ವರ್ಷಗಳಲ್ಲಿ ಈ ಐದೂ ಜಿಲ್ಲೆಗಳಲ್ಲಿ ಹೂವು,ಹಣ್ಣು ಮುಂತಾದ ತೋಟಗಾರಿಕೆ ಬೆಳೆಗಳು ಹೆಚ್ಚೆಚ್ಚು ಬೆಳೆದು ರಾಷ್ಟ್ರ ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ರಫ್ತು ಮಾಡಲಾಗುತ್ತಿತ್ತು. ಆದರೆ, ಕೆಲ ವರ್ಷಗಳಿಂದಲೂ ಅಂತರ್ಜಲ ಮಟ್ಟ ಕುಸಿದ ಕಾರಣ ನೀರು ಸಾಲದಾಗಿದೆ.</p>.<p>ಇದರಿಂದ ಬೆಳೆಗಳನ್ನು ಬೆಳೆಯಲಾಗುತ್ತಿಲ್ಲ. ಬೆಳೆ ಬೆಳೆದು ಬದುಕು ಕಟ್ಟಿಕೊಂಡಿದ್ದ ಲಕ್ಷಾಂತರ ಕುಟುಂಬಗಳು ಇದರಿಂದ ಕಂಗಾಲಾಗಿದ್ದಾರೆ. ತಮ್ಮ ಸಂಪಾದನೆ ಸಾಕಷ್ಟು ಪ್ರಮಾಣದ ಹಣ ಕೊಳವೆ ಬಾವಿ ಕೊರೆಸಲು ವೆಚ್ಚ ಮಾಡುವಂತಾಗಿದ್ದು ಸಾಲಕ್ಕೆ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದರು.</p>.<p>ಸಂಸದ ಮಲ್ಲೇಶ್ಬಾಬು, ಬಯಲು ಸೀಮೆ ಭಾಗದಲ್ಲಿ ಕೃಷಿಕರು ನೀರಿಗಾಗಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವ ವಿ.ಸೋಮಣ್ಣ ಅವರಿಗೆ ಮನವರಿಕೆ ಮಾಡಿಕೊಟ್ಟು ಕೃಷ್ಣಾ ನದಿ ನೀರು ಹರಿಸಲು ಒತ್ತಾಯಿಸಿದರು.</p>.<p>ಮನವಿಯನ್ನು ಸ್ವೀಕರಿಸಿದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ, ‘ನಾನು ಸಹ ಆ ಭಾಗದಿಂದಲೇ ಬಂದವನು. ಅಲ್ಲಿ ಕೃಷಿ ಕ್ಷೇತ್ರ ಮತ್ತು ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ’ ಎಂದರು.</p>.<p>ಸಮಸ್ಯೆ ಬಗ್ಗೆ ಕೇಂದ್ರದ ಸಚಿವರು ಸೇರಿದಂತೆ ಸಂಬಂಧಿಸಿದ ಎಲ್ಲರ ಜತೆ ಮಾತುಕತೆ ನಡೆಸಿ ಕೃಷ್ಣಾ ನದಿ ನೀರು ಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು.</p>.<p>ಕೋಲಾರ ಕ್ಷೇತ್ರದ ಸಂಸದ ಮಲ್ಲೇಶ್ಬಾಬು, ಶಿಡ್ಲಘಟ್ಟ ಶಾಸಕ ಮೇಲೂರು ರವಿಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅಪ್ಪೇಗೌಡನಹಳ್ಳಿ ಕೆ.ಲಕ್ಷ್ಮಿನಾರಾಯಣರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಂಕ್ ಮುನಿಯಪ್ಪ, ತಾದೂರು ರಘು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ಬಯಲು ಸೀಮೆ ಭಾಗಕ್ಕೆ ಕೃಷ್ಣಾ ನದಿ ನೀರು ಹರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಕೃಷಿಗಾಗಿ ಈ ಭಾಗಕ್ಕೆ ಕೃಷ್ಣಾ ನದಿ ನೀರನ್ನು ಹರಿಸಬೇಕು ಎಂದು ಶಿಡ್ಲಘಟ್ಟ ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.</p>.<p>ನವದೆಹಲಿ ಅವರ ಕಚೇರಿಯಲ್ಲಿ ಭೇಟಿ ಮಾಡಿ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಬಯಲು ಸೀಮೆ ಪ್ರದೇಶಕ್ಕೆ ಕೃಷ್ಣಾ ನದಿ ನೀರು ಹರಿಸಲು ಕ್ರಮವಹಿಸುವಂತೆ ಮನವಿ ಮಾಡಿದರು.</p>.<p>ಈ ಭಾಗದಲ್ಲಿ ಅಂತರ್ಜಲ ಮಟ್ಟ 1500 ಅಡಿಯಷ್ಟು ಆಳಕ್ಕೆ ಕುಸಿದಿದೆ. ಅಷ್ಟು ಆಳಕ್ಕೆ ಕೊಳವೆಬಾವಿ ಕೊರೆಸಿದರೂ ಅದರಲ್ಲಿ ನೀರು ಸಿಗುವ ಪ್ರಮಾಣ ಕೇವಲ ಶೇ30ರಷ್ಟು ಇದೆ. ಸಿಗುವ ನೀರಿನಲ್ಲೂ ಫೋರೈಡ್ ಸೇರಿದಂತೆ ಅನೇಕ ರೀತಿಯ ಹಾನಿಕಾರಕ ಅಂಶ ಇವೆ.</p>.<p>ಈ ನೀರು ಕೃಷಿಗೂ ಹಾಗೂ ಕುಡಿಯಲು ಹಾನಿಕಾರಕವಾಗಿದೆ. ಪ್ರಯೋಗಾಲಯಗಳಲ್ಲಿ ಈ ಅಂಶ ಈಗಾಗಲೇ ಬಯಲಾಗಿದ್ದು ವಿಧಿಯಿಲ್ಲದೆ ವಿಷಪೂರಿತ ನೀರು ಬಳಸುವ ಅನಿವಾರ್ಯತೆ ಈ ಭಾಗದ ಜನರದ್ದಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಇತ್ತೀಚಿನ ವರ್ಷಗಳಲ್ಲಿ ಈ ಐದೂ ಜಿಲ್ಲೆಗಳಲ್ಲಿ ಹೂವು,ಹಣ್ಣು ಮುಂತಾದ ತೋಟಗಾರಿಕೆ ಬೆಳೆಗಳು ಹೆಚ್ಚೆಚ್ಚು ಬೆಳೆದು ರಾಷ್ಟ್ರ ಅಂತರರಾಷ್ಟ್ರೀಯ ಮಾರುಕಟ್ಟೆಗಳಿಗೆ ರಫ್ತು ಮಾಡಲಾಗುತ್ತಿತ್ತು. ಆದರೆ, ಕೆಲ ವರ್ಷಗಳಿಂದಲೂ ಅಂತರ್ಜಲ ಮಟ್ಟ ಕುಸಿದ ಕಾರಣ ನೀರು ಸಾಲದಾಗಿದೆ.</p>.<p>ಇದರಿಂದ ಬೆಳೆಗಳನ್ನು ಬೆಳೆಯಲಾಗುತ್ತಿಲ್ಲ. ಬೆಳೆ ಬೆಳೆದು ಬದುಕು ಕಟ್ಟಿಕೊಂಡಿದ್ದ ಲಕ್ಷಾಂತರ ಕುಟುಂಬಗಳು ಇದರಿಂದ ಕಂಗಾಲಾಗಿದ್ದಾರೆ. ತಮ್ಮ ಸಂಪಾದನೆ ಸಾಕಷ್ಟು ಪ್ರಮಾಣದ ಹಣ ಕೊಳವೆ ಬಾವಿ ಕೊರೆಸಲು ವೆಚ್ಚ ಮಾಡುವಂತಾಗಿದ್ದು ಸಾಲಕ್ಕೆ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದರು.</p>.<p>ಸಂಸದ ಮಲ್ಲೇಶ್ಬಾಬು, ಬಯಲು ಸೀಮೆ ಭಾಗದಲ್ಲಿ ಕೃಷಿಕರು ನೀರಿಗಾಗಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವ ವಿ.ಸೋಮಣ್ಣ ಅವರಿಗೆ ಮನವರಿಕೆ ಮಾಡಿಕೊಟ್ಟು ಕೃಷ್ಣಾ ನದಿ ನೀರು ಹರಿಸಲು ಒತ್ತಾಯಿಸಿದರು.</p>.<p>ಮನವಿಯನ್ನು ಸ್ವೀಕರಿಸಿದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ, ‘ನಾನು ಸಹ ಆ ಭಾಗದಿಂದಲೇ ಬಂದವನು. ಅಲ್ಲಿ ಕೃಷಿ ಕ್ಷೇತ್ರ ಮತ್ತು ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ’ ಎಂದರು.</p>.<p>ಸಮಸ್ಯೆ ಬಗ್ಗೆ ಕೇಂದ್ರದ ಸಚಿವರು ಸೇರಿದಂತೆ ಸಂಬಂಧಿಸಿದ ಎಲ್ಲರ ಜತೆ ಮಾತುಕತೆ ನಡೆಸಿ ಕೃಷ್ಣಾ ನದಿ ನೀರು ಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು.</p>.<p>ಕೋಲಾರ ಕ್ಷೇತ್ರದ ಸಂಸದ ಮಲ್ಲೇಶ್ಬಾಬು, ಶಿಡ್ಲಘಟ್ಟ ಶಾಸಕ ಮೇಲೂರು ರವಿಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅಪ್ಪೇಗೌಡನಹಳ್ಳಿ ಕೆ.ಲಕ್ಷ್ಮಿನಾರಾಯಣರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಂಕ್ ಮುನಿಯಪ್ಪ, ತಾದೂರು ರಘು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>