<p><strong>ಚಿಂತಾಮಣಿ</strong>: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡಿದೆ. ಕ್ಷೇತ್ರದ ಶಾಸಕ ಡಾ.ಎಂ.ಸಿ.ಸುಧಾಕರ್ ಜಿಲ್ಲಾ ಉಸ್ತುವಾರಿ ಸಚಿವರು. ಹಿಂದೆ ಎರಡು ಬಾರಿ ಶಾಸಕರಾಗಿದ್ದಾಗ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮುನ್ನುಡಿ ಬರೆದು ಅಭಿವೃದ್ಧಿಗೆ ಒತ್ತು ನೀಡಿದ್ದರು. ಈ ಬಾರಿ ಕ್ಷೇತ್ರದ ಜನರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ.</p>.<p>ಕ್ಷೇತ್ರದಲ್ಲಿ ಹಿಂದೆ ಶಾಸಕರಾಗಿದ್ದ ಕಾಲದಲ್ಲಿ ರೂಪಿಸಿದ್ದ ಯೋಜನೆಗಳು ನನೆಗುದಿಗೆ ಬಿದ್ದಿವೆ. ಒಂದು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಯೋಜನೆಗೆ ಅನುದಾನ ಬಿಡುಗಡೆ ಆಗಿಲ್ಲ ಎನ್ನುತ್ತಾರೆ ಸ್ಥಳೀಯರು.</p>.<p>ಶಾಸಕರಾಗಿ ಆಯ್ಕೆಯಾದ ಕೂಡಲೇ ನನೆಗುದಿಗೆ ಬಿದ್ದಿರುವ ಅನೇಕ ಕಾಮಗಾರಿ ಮತ್ತು ನೂತನವಾಗಿ ಜಾರಿಗೊಳಿಸಲಿರುವ ಯೋಜನೆಗಳಿಗೆ ನೀಲನಕ್ಷೆ ಮತ್ತು ಅಂದಾಜು ವೆಚ್ಚದ ಪಟ್ಟಿ ತಯಾರು ಮಾಡಿಸಿದ್ದರು. ಬಹಿರಂಗವಾಗಿ ಯೋಜನೆಗಳ ವಿವರ ಪ್ರಕಟಿಸಿದ್ದರಿಂದ ಸಾರ್ವಜನಿಕರಲ್ಲಿ ಮತ್ತಷ್ಟು ನಿರೀಕ್ಷೆ ಗರಿಗೆದರಿದೆ.</p>.<p>ನಗರದ ಹೃದಯಭಾಗದಲ್ಲಿ ಕಳೆದ 10 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನದ ಅಪೂರ್ಣ ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಾಧ್ಯವಾದಷ್ಟು ಬದಲಾವಣೆಗಳೊಂದಿಗೆ ನೂತನ ವಿನ್ಯಾಸ ರೂಪಿಸಿ ₹9ಕೋಟಿ ವೆಚ್ಚದಲ್ಲಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು ನೀಲನಕ್ಷೆ ಮತ್ತು ಅಂದಾಜು ಪಟ್ಟಿ ತಯಾರಿಸಿದ್ದಾರೆ.</p>.<p>ಆದರೆ, ವರ್ಷ ಕಳೆದರೂ ಇನ್ನೂ ಕಾಮಗಾರಿ ಆರಂಭವಾಗಿಲ್ಲ. ನಗರದ ಹೊರವಲಯದ ಶಿಡ್ಲಘಟ್ಟ ರಸ್ತೆಯಲ್ಲಿರುವ ವಾಲ್ಮೀಕಿ ಭವನದ ಕಥೆಯೂ ಇದೇ ಆಗಿದೆ. ಅದಕ್ಕೂ ಸಹ ಸಚಿವರು ಒಂದು ಎಕರೆ ಹೆಚ್ಚಿನ ಜಾಗ ಮಂಜೂರು ಮಾಡಿಸಿ, ₹3ಕೋಟಿ ವೆಚ್ಚದಲ್ಲಿ ಆಧುನಿಕ ಶೈಲಿ ನೂತನ ಭವನದ ನಿರ್ಮಾಣಕ್ಕೆ ನೀಲನಕ್ಷೆ ಮತ್ತು ವೆಚ್ಚದ ಅಂದಾಜು ಪಟ್ಟಿ ತಯಾರಿಸಿದ್ದರು. ಆದರೆ, ಕಾಮಗಾರಿ ಆರಂಭವಾಗಿಲ್ಲ. </p>.<p>ಕ್ಷೇತ್ರದಲ್ಲಿ ಈ ವರ್ಷದಿಂದ ನೂತನ ಎಂಜಿನಿಯರಿಂಗ್ ಕಾಲೇಜು ಆರಂಭಿಸಲಾಗುವುದು. ಜಮೀನು ಮಂಜೂರು ಆಗಿದ್ದು ₹60-70 ಕೋಟಿ ವೆಚ್ಚದಲ್ಲಿ ಎಂಜಿನಿಯರಿಂಗ್ ಕಾಲೇಜಿನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಸಚಿವರೇ ಪ್ರಕಟಿಸಿದ್ದರು.</p>.<p>ನಗರದ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ನಿವಾರಿಸಲು ಕನಂಪಲ್ಲಿ ಕೆರೆ, ನೆಕ್ಕುಂದಿಕೆರೆ ಹಾಗೂ ಭಕ್ತರಹಳ್ಳಿ-ಅರಸೀಕೆರೆಯನ್ನು ತಲಾ ₹35ಕೋಟಿ ವೆಚ್ಚದಲ್ಲಿ ಪುನರುಜ್ಜೀವನ ಗೊಳಿಸಲಾಗುವುದು. ನೀರಿನ ಸಂಗ್ರಹ ದುಪ್ಪಟ್ಟುಗೊಳಿಸಲಾಗುವುದು. ನೀಲನಕ್ಷೆ, ವೆಚ್ಚದ ಅಂದಾಜು ಪಟ್ಟಿ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಸಚಿವರು ಭರವಸೆ ನೀಡಿದ್ದರು.</p>.<p>ಮಾಜಿ ಸಚಿವ ಎ.ಚೌಡರೆಡ್ಡಿ ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡಿದ್ದ ಕೋಚಿಮುಲ್ ಶೀಥಲ ಕೇಂದ್ರಕ್ಕೆ ಬೀಗಮುದ್ರೆ ಹಾಕಲಾಗಿದೆ. ಕಾಯಂ ನೌಕರರನ್ನು ಬೇರೆ ಕಡೆ ವರ್ಗ ಮಾಡಲಾಗಿದೆ. ದಿನಗೂಲಿ, ಗುತ್ತಿಗೆ ಆಧಾರದಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ 40 ಮಂದಿ ಕಾರ್ಮಿಕರು ಬೀದಿಪಾಲಾಗಿದ್ದಾರೆ. ₹50 ಕೋಟಿ ವೆಚ್ಚದಲ್ಲಿ ಐಸ್ ಕ್ರೀಂ ಘಟಕ ತಯಾರಿಸಲಾಗುವುದು. ಆಗ ಮತ್ತೆ ಅವರಿಗೆ ಕೆಲಸ ಕೊಡಲಾಗುವುದು ಎಂದು ಭರವಸೆ ಅವರಿಗೆ ನೀಡಲಾಗಿದೆ. ಘಟಕ ಯಾವಾಗ ಆರಂಭವಾಗುತ್ತದೋ ಎಂದು ಕಾರ್ಮಿಕರು ಕಾಯುತ್ತಿದ್ದಾರೆ.</p>.<p>ತಾಲ್ಲೂಕಿಗೆ ಕೆ.ಸಿ.ವ್ಯಾಲಿ ನೀರು ಹರಿಸುವ ಬಗ್ಗೆ ಯಾವುದೇ ಬೆಳವಣಿಗೆ ಕಂಡು ಬಂದಿಲ್ಲ. ಹಿಂದಿನ ಸರ್ಕಾರದಲ್ಲಿ ಮೊದಲ ಹಂತದ ಯೋಜನೆಯಲ್ಲಿ ತಾಲ್ಲೂಕಿಗೆ ತಾರತಮ್ಯವಾಗಿತ್ತು. ಕೇವಲ 5 ಕೆರೆಗಳಿಗೆ ಮಾತ್ರ ನೀರು ಹರಿದಿತ್ತು. ನಂತರ ಅದು ಸ್ಥಗಿತಗೊಂಡಿದೆ. ಎರಡನೇ ಹಂತದ ಯೋಜನೆಯಲ್ಲಿ 50 ಕೆರೆಗಳನ್ನು ಸೇರಿಸಲಾಗಿದೆ ಎಂದು ಸಚಿವರು ಭರವಸೆ ನೀಡಿದ್ದರು. ಮೂರು ಹಂತದಲ್ಲಿ ಶುದ್ಧೀಕರಣವನ್ನು ಮಾಡಬೇಕು ಎನ್ನುವ ಒತ್ತಾಯ ಮಾಡಲಾಗಿತ್ತು. ಕೆ.ಸಿ.ವ್ಯಾಲಿ ಯೋಜನೆಯಲ್ಲೂ ಯಾವುದೇ ಆಶಾದಾಯಕ ಬೆಳವಣಿಗೆ ಕಂಡಿಲ್ಲ.</p>.<p>ತಾಲ್ಲೂಕಿನ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಒದಗಿಸಲು ಮಸ್ತೇನಹಳ್ಳಿ ಮತ್ತು ಸಿದ್ದೇಪಲ್ಲಿ ಕ್ರಾಸ್ನಲ್ಲಿ ಹಿಂದೆ ರೂಪಿಸಿದ್ದ ಕೈಗಾರಿಕಾ ಪ್ರಾಂಗಣ ಬೆಳವಣಿಗೆಯಾಗಿಲ್ಲ ಎನ್ನುತ್ತಾರೆ ಸಾರ್ವಜನಿಕರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡಿದೆ. ಕ್ಷೇತ್ರದ ಶಾಸಕ ಡಾ.ಎಂ.ಸಿ.ಸುಧಾಕರ್ ಜಿಲ್ಲಾ ಉಸ್ತುವಾರಿ ಸಚಿವರು. ಹಿಂದೆ ಎರಡು ಬಾರಿ ಶಾಸಕರಾಗಿದ್ದಾಗ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮುನ್ನುಡಿ ಬರೆದು ಅಭಿವೃದ್ಧಿಗೆ ಒತ್ತು ನೀಡಿದ್ದರು. ಈ ಬಾರಿ ಕ್ಷೇತ್ರದ ಜನರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ.</p>.<p>ಕ್ಷೇತ್ರದಲ್ಲಿ ಹಿಂದೆ ಶಾಸಕರಾಗಿದ್ದ ಕಾಲದಲ್ಲಿ ರೂಪಿಸಿದ್ದ ಯೋಜನೆಗಳು ನನೆಗುದಿಗೆ ಬಿದ್ದಿವೆ. ಒಂದು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಯೋಜನೆಗೆ ಅನುದಾನ ಬಿಡುಗಡೆ ಆಗಿಲ್ಲ ಎನ್ನುತ್ತಾರೆ ಸ್ಥಳೀಯರು.</p>.<p>ಶಾಸಕರಾಗಿ ಆಯ್ಕೆಯಾದ ಕೂಡಲೇ ನನೆಗುದಿಗೆ ಬಿದ್ದಿರುವ ಅನೇಕ ಕಾಮಗಾರಿ ಮತ್ತು ನೂತನವಾಗಿ ಜಾರಿಗೊಳಿಸಲಿರುವ ಯೋಜನೆಗಳಿಗೆ ನೀಲನಕ್ಷೆ ಮತ್ತು ಅಂದಾಜು ವೆಚ್ಚದ ಪಟ್ಟಿ ತಯಾರು ಮಾಡಿಸಿದ್ದರು. ಬಹಿರಂಗವಾಗಿ ಯೋಜನೆಗಳ ವಿವರ ಪ್ರಕಟಿಸಿದ್ದರಿಂದ ಸಾರ್ವಜನಿಕರಲ್ಲಿ ಮತ್ತಷ್ಟು ನಿರೀಕ್ಷೆ ಗರಿಗೆದರಿದೆ.</p>.<p>ನಗರದ ಹೃದಯಭಾಗದಲ್ಲಿ ಕಳೆದ 10 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನದ ಅಪೂರ್ಣ ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಾಧ್ಯವಾದಷ್ಟು ಬದಲಾವಣೆಗಳೊಂದಿಗೆ ನೂತನ ವಿನ್ಯಾಸ ರೂಪಿಸಿ ₹9ಕೋಟಿ ವೆಚ್ಚದಲ್ಲಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು ನೀಲನಕ್ಷೆ ಮತ್ತು ಅಂದಾಜು ಪಟ್ಟಿ ತಯಾರಿಸಿದ್ದಾರೆ.</p>.<p>ಆದರೆ, ವರ್ಷ ಕಳೆದರೂ ಇನ್ನೂ ಕಾಮಗಾರಿ ಆರಂಭವಾಗಿಲ್ಲ. ನಗರದ ಹೊರವಲಯದ ಶಿಡ್ಲಘಟ್ಟ ರಸ್ತೆಯಲ್ಲಿರುವ ವಾಲ್ಮೀಕಿ ಭವನದ ಕಥೆಯೂ ಇದೇ ಆಗಿದೆ. ಅದಕ್ಕೂ ಸಹ ಸಚಿವರು ಒಂದು ಎಕರೆ ಹೆಚ್ಚಿನ ಜಾಗ ಮಂಜೂರು ಮಾಡಿಸಿ, ₹3ಕೋಟಿ ವೆಚ್ಚದಲ್ಲಿ ಆಧುನಿಕ ಶೈಲಿ ನೂತನ ಭವನದ ನಿರ್ಮಾಣಕ್ಕೆ ನೀಲನಕ್ಷೆ ಮತ್ತು ವೆಚ್ಚದ ಅಂದಾಜು ಪಟ್ಟಿ ತಯಾರಿಸಿದ್ದರು. ಆದರೆ, ಕಾಮಗಾರಿ ಆರಂಭವಾಗಿಲ್ಲ. </p>.<p>ಕ್ಷೇತ್ರದಲ್ಲಿ ಈ ವರ್ಷದಿಂದ ನೂತನ ಎಂಜಿನಿಯರಿಂಗ್ ಕಾಲೇಜು ಆರಂಭಿಸಲಾಗುವುದು. ಜಮೀನು ಮಂಜೂರು ಆಗಿದ್ದು ₹60-70 ಕೋಟಿ ವೆಚ್ಚದಲ್ಲಿ ಎಂಜಿನಿಯರಿಂಗ್ ಕಾಲೇಜಿನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಸಚಿವರೇ ಪ್ರಕಟಿಸಿದ್ದರು.</p>.<p>ನಗರದ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ನಿವಾರಿಸಲು ಕನಂಪಲ್ಲಿ ಕೆರೆ, ನೆಕ್ಕುಂದಿಕೆರೆ ಹಾಗೂ ಭಕ್ತರಹಳ್ಳಿ-ಅರಸೀಕೆರೆಯನ್ನು ತಲಾ ₹35ಕೋಟಿ ವೆಚ್ಚದಲ್ಲಿ ಪುನರುಜ್ಜೀವನ ಗೊಳಿಸಲಾಗುವುದು. ನೀರಿನ ಸಂಗ್ರಹ ದುಪ್ಪಟ್ಟುಗೊಳಿಸಲಾಗುವುದು. ನೀಲನಕ್ಷೆ, ವೆಚ್ಚದ ಅಂದಾಜು ಪಟ್ಟಿ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಸಚಿವರು ಭರವಸೆ ನೀಡಿದ್ದರು.</p>.<p>ಮಾಜಿ ಸಚಿವ ಎ.ಚೌಡರೆಡ್ಡಿ ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡಿದ್ದ ಕೋಚಿಮುಲ್ ಶೀಥಲ ಕೇಂದ್ರಕ್ಕೆ ಬೀಗಮುದ್ರೆ ಹಾಕಲಾಗಿದೆ. ಕಾಯಂ ನೌಕರರನ್ನು ಬೇರೆ ಕಡೆ ವರ್ಗ ಮಾಡಲಾಗಿದೆ. ದಿನಗೂಲಿ, ಗುತ್ತಿಗೆ ಆಧಾರದಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ 40 ಮಂದಿ ಕಾರ್ಮಿಕರು ಬೀದಿಪಾಲಾಗಿದ್ದಾರೆ. ₹50 ಕೋಟಿ ವೆಚ್ಚದಲ್ಲಿ ಐಸ್ ಕ್ರೀಂ ಘಟಕ ತಯಾರಿಸಲಾಗುವುದು. ಆಗ ಮತ್ತೆ ಅವರಿಗೆ ಕೆಲಸ ಕೊಡಲಾಗುವುದು ಎಂದು ಭರವಸೆ ಅವರಿಗೆ ನೀಡಲಾಗಿದೆ. ಘಟಕ ಯಾವಾಗ ಆರಂಭವಾಗುತ್ತದೋ ಎಂದು ಕಾರ್ಮಿಕರು ಕಾಯುತ್ತಿದ್ದಾರೆ.</p>.<p>ತಾಲ್ಲೂಕಿಗೆ ಕೆ.ಸಿ.ವ್ಯಾಲಿ ನೀರು ಹರಿಸುವ ಬಗ್ಗೆ ಯಾವುದೇ ಬೆಳವಣಿಗೆ ಕಂಡು ಬಂದಿಲ್ಲ. ಹಿಂದಿನ ಸರ್ಕಾರದಲ್ಲಿ ಮೊದಲ ಹಂತದ ಯೋಜನೆಯಲ್ಲಿ ತಾಲ್ಲೂಕಿಗೆ ತಾರತಮ್ಯವಾಗಿತ್ತು. ಕೇವಲ 5 ಕೆರೆಗಳಿಗೆ ಮಾತ್ರ ನೀರು ಹರಿದಿತ್ತು. ನಂತರ ಅದು ಸ್ಥಗಿತಗೊಂಡಿದೆ. ಎರಡನೇ ಹಂತದ ಯೋಜನೆಯಲ್ಲಿ 50 ಕೆರೆಗಳನ್ನು ಸೇರಿಸಲಾಗಿದೆ ಎಂದು ಸಚಿವರು ಭರವಸೆ ನೀಡಿದ್ದರು. ಮೂರು ಹಂತದಲ್ಲಿ ಶುದ್ಧೀಕರಣವನ್ನು ಮಾಡಬೇಕು ಎನ್ನುವ ಒತ್ತಾಯ ಮಾಡಲಾಗಿತ್ತು. ಕೆ.ಸಿ.ವ್ಯಾಲಿ ಯೋಜನೆಯಲ್ಲೂ ಯಾವುದೇ ಆಶಾದಾಯಕ ಬೆಳವಣಿಗೆ ಕಂಡಿಲ್ಲ.</p>.<p>ತಾಲ್ಲೂಕಿನ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಒದಗಿಸಲು ಮಸ್ತೇನಹಳ್ಳಿ ಮತ್ತು ಸಿದ್ದೇಪಲ್ಲಿ ಕ್ರಾಸ್ನಲ್ಲಿ ಹಿಂದೆ ರೂಪಿಸಿದ್ದ ಕೈಗಾರಿಕಾ ಪ್ರಾಂಗಣ ಬೆಳವಣಿಗೆಯಾಗಿಲ್ಲ ಎನ್ನುತ್ತಾರೆ ಸಾರ್ವಜನಿಕರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>