<p>ಚಿಂತಾಮಣಿ: ಚಿಂತಾಮಣಿ-ದಿಬ್ಬೂರಹಳ್ಳಿ-ಬಾಗೇಪಲ್ಲಿ ರಸ್ತೆಯ ಮಹ್ಮದ್ಪುರ ಗೇಟ್ ಸಮೀಪ ಸೋಮವಾರ ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿ ಹೊಡೆದು ದ್ವಿಚಕ್ರವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ನಗರದ ಡೆಕ್ಕನ್ ಆಸ್ಪತ್ರೆಯ ಬಳಿ ವಾಸವಾಗಿದ್ದ ಆರೋಗ್ಯ ಇಲಾಖೆ ನಿವೃತ್ತ ನಿರೀಕ್ಷಕ ವೆಂಕಟರವಣಪ್ಪ (66) ಮೃತಪಟ್ಟ ಸವಾರ. ಕೋಲಾರ ಜಿಲ್ಲೆಯ ಮುಳಬಾಗಿಲು ನಿವಾಸಿಯಾಗಿದ್ದ ವೆಂಕಟರವಣಪ್ಪ ಶಿಡ್ಲಘಟ್ಟ ತಾಲ್ಲೂಕಿನ ಗಂಜಿಗುಂಟೆಯಲ್ಲಿ ಮದುವೆಯಾಗಿದ್ದು ನಗರದಲ್ಲಿ ವಾಸವಾಗಿದ್ದರು. </p>.<p>ಸೋಮವಾರ ದ್ವಿಚಕ್ರವಾಹನದಲ್ಲಿ ನಗರದಿಂದ ಗಂಜಿಗುಂಟೆಗೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರವಾಹನ ಮಗುಚಿಬಿದ್ದಿದೆ. ಕಾರು ಚಾಲಕನ ಹಿಡಿತ ತಪ್ಪಿ ಗಿಡಗಳ ನಡುವೆ ಗುಂಡಿಯಲ್ಲಿ ಹೋಗಿ ನಿಂತಿದೆ.</p>.<p>ಕಾರಿನ ಚಾಲಕ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ನರಪಲ ಗ್ರಾಮದ ಆಂಜನೇಯಲು ಎಂದು ತಿಳಿದುಬಂದಿದೆ. ಅಪಘಾತವಾದ ಕೂಡಲೇ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಡಿವೈಎಸ್ಪಿ ಮುರಳೀಧರ್ ಮತ್ತು ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ಚಿಂತಾಮಣಿ-ದಿಬ್ಬೂರಹಳ್ಳಿ-ಬಾಗೇಪಲ್ಲಿ ರಸ್ತೆಯ ಮಹ್ಮದ್ಪುರ ಗೇಟ್ ಸಮೀಪ ಸೋಮವಾರ ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿ ಹೊಡೆದು ದ್ವಿಚಕ್ರವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ನಗರದ ಡೆಕ್ಕನ್ ಆಸ್ಪತ್ರೆಯ ಬಳಿ ವಾಸವಾಗಿದ್ದ ಆರೋಗ್ಯ ಇಲಾಖೆ ನಿವೃತ್ತ ನಿರೀಕ್ಷಕ ವೆಂಕಟರವಣಪ್ಪ (66) ಮೃತಪಟ್ಟ ಸವಾರ. ಕೋಲಾರ ಜಿಲ್ಲೆಯ ಮುಳಬಾಗಿಲು ನಿವಾಸಿಯಾಗಿದ್ದ ವೆಂಕಟರವಣಪ್ಪ ಶಿಡ್ಲಘಟ್ಟ ತಾಲ್ಲೂಕಿನ ಗಂಜಿಗುಂಟೆಯಲ್ಲಿ ಮದುವೆಯಾಗಿದ್ದು ನಗರದಲ್ಲಿ ವಾಸವಾಗಿದ್ದರು. </p>.<p>ಸೋಮವಾರ ದ್ವಿಚಕ್ರವಾಹನದಲ್ಲಿ ನಗರದಿಂದ ಗಂಜಿಗುಂಟೆಗೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರವಾಹನ ಮಗುಚಿಬಿದ್ದಿದೆ. ಕಾರು ಚಾಲಕನ ಹಿಡಿತ ತಪ್ಪಿ ಗಿಡಗಳ ನಡುವೆ ಗುಂಡಿಯಲ್ಲಿ ಹೋಗಿ ನಿಂತಿದೆ.</p>.<p>ಕಾರಿನ ಚಾಲಕ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ನರಪಲ ಗ್ರಾಮದ ಆಂಜನೇಯಲು ಎಂದು ತಿಳಿದುಬಂದಿದೆ. ಅಪಘಾತವಾದ ಕೂಡಲೇ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಡಿವೈಎಸ್ಪಿ ಮುರಳೀಧರ್ ಮತ್ತು ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>