ಬೆಳಗ್ಗೆ ಕಾಣಿಸಿಕೊಂಡ ಹುಚ್ಚು ನಾಯಿ, ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಜನರ ಮೇಲೆ ಮನ ಬಂದಂತೆ ಕಚ್ಚುತ್ತಾ ಸಾಗಿದೆ. ಬೆಂಗಳೂರು ವೃತ್ತದಿಂದ ಪ್ರಾರಂಭಿಸಿ ನ್ಯಾಷನಲ್ ಕಾಲೇಜಿನವರೆಗೂ 14 ಜನರನ್ನು ಗಾಯಗೊಳಿಸಿದೆ. ದ್ವಿಚಕ್ರ ವಾಹನ ಸವಾರರನ್ನು ಅಟ್ಟಾಡಿಸಿಕೊಂಡು ಹೋಗಿದೆ. ಇದರಿಂದ ವಾಹನ ಸವಾರರು ಗಾಬರಿಗೊಂಡು ಅಡ್ಡಾದಿಡ್ಡಿಯಾಗಿ ಚಲಿಸಿ ಕೆಳಗೆ ಬಿದ್ದು ಕೈ ಕಾಲುಗಳಿಗೆ ಗಾಯ ಮಾಡಿಕೊಂಡಿದ್ದಾರೆ.