<p><strong>ಚಿಕ್ಕಬಳ್ಳಾಪುರ</strong>: ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ರಾಜೀನಾಮೆ ನೀಡಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.</p>.<p>ಮುನಿಯಪ್ಪ ರಾಜೀನಾಮೆಗೆ ಶಾಸಕ ಪ್ರದೀಪ್ ಈಶ್ವರ್ ನಡೆ ಕುರಿತ ಅಸಮಾಧಾನವೇ ಕಾರಣ ಎಂಬ ಮಾತು ಕೇಳಿ ಬರುತ್ತಿವೆ.</p>.<p>ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಮುನಿಯಪ್ಪ ಅವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಆದರೆ, ಈಗ ಶಾಸಕ ಪ್ರದೀಪ್ ಈಶ್ವರ್ ಅವರ ನಡವಳಿಕೆಯಿಂದ ಬೇಸತ್ತು ಮುನಿಯಪ್ಪ ಅವರು ಅಧಿಕಾರ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ರಾಜೀನಾಮೆ ಪತ್ರವನ್ನು ಜಿಲ್ಲಾಧಿಕಾರಿಗೆ ನೀಡಿದ್ದಾರೆ.</p>.<p>‘ಅನಾರೋಗ್ಯದ ಕಾರಣದಿಂದ ನಾನು ಈ ಕಾರ್ಯ ನಿರ್ವಹಿಸಲು ಸಾಧ್ಯವಿಲ್ಲ’ ಎಂದು ರಾಜಿನಾಮೆ ಪತ್ರದಲ್ಲಿ ಮುನಿಯಪ್ಪ ಉಲ್ಲೇಖಿಸಿದ್ದಾರೆ. ಆದರೆ, ಆಪ್ತ ಮೂಲಗಳ ಪ್ರಕಾರ ಮುನಿಯಪ್ಪ ಅವರಿಗೆ ಪ್ರದೀಪ್ ಈಶ್ವರ್ ಅವರ ಧೋರಣೆ ಮತ್ತು ಪಕ್ಷದ ಮುಖಂಡರೊಂದಿಗೆ ಸಮಾಲೋಚನೆಯಲ್ಲಿ ತೋರಿಸುತ್ತಿರುವ ನಿರ್ಲಕ್ಷ್ಯವೇ ಮುಖ್ಯ ಕಾರಣ ಎನ್ನಲಾಗಿದೆ.</p>.<p>ಪಕ್ಷಕ್ಕೆ ಪ್ರಾಮಾಣಿಕವಾಗಿ ದುಡಿದ ಮುಖಂಡರನ್ನು ಪ್ರದೀಪ್ ಈಶ್ವರ್ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಅಲ್ಲದೆ, ದೂರವಾಣಿ ಕರೆಗಳಿಗೂ ಪ್ರತಿಕ್ರಿಯಿಸುವುದಿಲ್ಲ ಎಂದು ಜಿಲ್ಲೆಯ ಹಲವು ಮುಖಂಡರು ಬಹಿರಂಗವಾಗಿ ಅಸಮಾಧಾನ ಹೊರ ಹಾಕುತ್ತಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ ರಾಜೀನಾಮೆ ನೀಡಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.</p>.<p>ಮುನಿಯಪ್ಪ ರಾಜೀನಾಮೆಗೆ ಶಾಸಕ ಪ್ರದೀಪ್ ಈಶ್ವರ್ ನಡೆ ಕುರಿತ ಅಸಮಾಧಾನವೇ ಕಾರಣ ಎಂಬ ಮಾತು ಕೇಳಿ ಬರುತ್ತಿವೆ.</p>.<p>ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಮುನಿಯಪ್ಪ ಅವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಆದರೆ, ಈಗ ಶಾಸಕ ಪ್ರದೀಪ್ ಈಶ್ವರ್ ಅವರ ನಡವಳಿಕೆಯಿಂದ ಬೇಸತ್ತು ಮುನಿಯಪ್ಪ ಅವರು ಅಧಿಕಾರ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ರಾಜೀನಾಮೆ ಪತ್ರವನ್ನು ಜಿಲ್ಲಾಧಿಕಾರಿಗೆ ನೀಡಿದ್ದಾರೆ.</p>.<p>‘ಅನಾರೋಗ್ಯದ ಕಾರಣದಿಂದ ನಾನು ಈ ಕಾರ್ಯ ನಿರ್ವಹಿಸಲು ಸಾಧ್ಯವಿಲ್ಲ’ ಎಂದು ರಾಜಿನಾಮೆ ಪತ್ರದಲ್ಲಿ ಮುನಿಯಪ್ಪ ಉಲ್ಲೇಖಿಸಿದ್ದಾರೆ. ಆದರೆ, ಆಪ್ತ ಮೂಲಗಳ ಪ್ರಕಾರ ಮುನಿಯಪ್ಪ ಅವರಿಗೆ ಪ್ರದೀಪ್ ಈಶ್ವರ್ ಅವರ ಧೋರಣೆ ಮತ್ತು ಪಕ್ಷದ ಮುಖಂಡರೊಂದಿಗೆ ಸಮಾಲೋಚನೆಯಲ್ಲಿ ತೋರಿಸುತ್ತಿರುವ ನಿರ್ಲಕ್ಷ್ಯವೇ ಮುಖ್ಯ ಕಾರಣ ಎನ್ನಲಾಗಿದೆ.</p>.<p>ಪಕ್ಷಕ್ಕೆ ಪ್ರಾಮಾಣಿಕವಾಗಿ ದುಡಿದ ಮುಖಂಡರನ್ನು ಪ್ರದೀಪ್ ಈಶ್ವರ್ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಅಲ್ಲದೆ, ದೂರವಾಣಿ ಕರೆಗಳಿಗೂ ಪ್ರತಿಕ್ರಿಯಿಸುವುದಿಲ್ಲ ಎಂದು ಜಿಲ್ಲೆಯ ಹಲವು ಮುಖಂಡರು ಬಹಿರಂಗವಾಗಿ ಅಸಮಾಧಾನ ಹೊರ ಹಾಕುತ್ತಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>