ಮಾ.1ರಿಂದ ಮಾ.15ರವರೆಗೆ ರಾಜ್ಯದ ಎಲ್ಲೆಡೆ ಸಮೀಕ್ಷೆ ಜಿಲ್ಲೆಯಲ್ಲಿ ಮೂರು ಯೋಜನೆಗಳ ಬಗ್ಗೆ ಅಭಿಪ್ರಾಯ ಸಂಗ್ರಹ
ಅನುಷ್ಠಾನ ಸಮಿತಿ
ಜಿಲ್ಲಾ ಅಧ್ಯಕ್ಷರ ರಾಜೀನಾಮೆ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಸಮೀಕ್ಷೆಗೆ ಫಲಾನುಭವಿಗಳು ಬಾಕಿ ಇದ್ದಾರೆ. ಮತ್ತೊಂದು ಕಡೆ ಸರ್ಕಾರವು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಜಿಲ್ಲಾ ಮತ್ತು ತಾಲ್ಲೂಕುವಾರು ಸಮಿತಿಗಳನ್ನು ನೇಮಿಸಿದೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮುನಿಯಪ್ಪ ಅನುಷ್ಠಾನ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಚಿಕ್ಕಬಳ್ಳಾಪುರ ಕಾಂಗ್ರೆಸ್ನಲ್ಲಿ ಚರ್ಚೆಗೂ ಕಾರಣವಾಗಿದೆ.