<p>ಶಿಡ್ಲಘಟ್ಟ: ವ್ಯಾಸರಾಯರ ಶಿಷ್ಯರಾದ ಕನಕದಾಸರು ಭಾಗವತ ದೃಷ್ಟಿಯ ಕವಿ, ಕೀರ್ತನಕಾರ. ಅವರ ಕೀರ್ತನೆಗಳು ಭಾವಗೀತೆಗಳಂತೆ ಮೂಡಿಬಂದಿವೆ ಎಂದು ಮುಖ್ಯಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ತಿಳಿಸಿದರು.</p>.<p>ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಾಮಾಜಿಕವಾಗಿ ಕೆಳವರ್ಗದಿಂದ ಬಂದು ದಾಸದೀಕ್ಷೆ ಪಡೆದು ದಾಸಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯಲೋಕಕ್ಕೆ ಹೊಸ ಆಯಾಮವನ್ನು ದೊರಕಿಸಿಕೊಟ್ಟರು. ಅವರು ಕರ್ನಾಟಕ ಸಂಗೀತ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ ಎಂದರು.</p>.<p>ವಿದ್ಯಾರ್ಥಿನಿ ಎಸ್.ಎನ್.ವಿದ್ಯಾ ಮಾತನಾಡಿ, ಕನಕದಾಸರ ಕೃತಿಗಳಲ್ಲಿ ಮೌಢ್ಯತೆ, ಕಂದಾಚಾರ, ಪೊಳ್ಳುನಂಬಿಕೆ, ವರ್ಣವ್ಯವಸ್ಥೆಯನ್ನು ಖಂಡಿಸಿರುವುದಲ್ಲದೇ ದೈವಭಕ್ತಿ, ಜೀವನದರ್ಶನ, ಸಮಾಜವಿಮರ್ಶೆ, ಲೋಕಾನುಭವಗಳು ಕಾವ್ಯಾತ್ಮಕವಾಗಿ ಹೊರಹೊಮ್ಮಿವೆ ಎಂದರು.</p>.<p>ವಿದ್ಯಾರ್ಥಿಗಳಾದ ಎಂ.ಮೇಘನಾ, ಶಿವಮಣಿ, ಶ್ರವಂತ್ ಮಾತನಾಡಿದರು. ವಿದ್ಯಾರ್ಥಿಗಳಿಂದ ಕನಕದಾಸ ರಚಿತ ಕೀರ್ತನೆಗಳ ಗಾಯನ ನಡೆಯಿತು.</p>.<p>ಎಸ್.ಡಿ.ಎಂ.ಸಿ ಅಧ್ಯಕ್ಷ ವೆಂಕಟೇಶ್, ಸದಸ್ಯ ಎಸ್.ಎಲ್.ನಾರಾಯಣಸ್ವಾಮಿ, ಸದಸ್ಯೆ ಶೋಭಾಮಂಜುನಾಥ್, ಗ್ರಾಮಪಂಚಾಯಿತಿ ಸದಸ್ಯ ಎ.ಸತೀಶ್ಕುಮಾರ್, ಎಂ.ನಾಗರಾಜು, ಗುತ್ತಿಗೆದಾರ ಶಿವಶಂಕರಪ್ಪ, ಎಂ.ದೇವರಾಜು, ನಿವೃತ್ತ ನೌಕರ ಪೂಜಾರಪ್ಪ, ಮೆಹಬೂಬ್ ಪಾಷಾ, ಆರತಿ, ಅಂಗನವಾಡಿ ಶಿಕ್ಷಕಿ ಜಯಂತಿ, ಮಂಜುಳಮ್ಮ, ಶಿಕ್ಷಕ ಎ.ಬಿ.ನಾಗರಾಜ, ಬಿ.ನಾಗರಾಜು, ಶಿಕ್ಷಕಿ ತಾಜೂನ್, ಆಶಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ವ್ಯಾಸರಾಯರ ಶಿಷ್ಯರಾದ ಕನಕದಾಸರು ಭಾಗವತ ದೃಷ್ಟಿಯ ಕವಿ, ಕೀರ್ತನಕಾರ. ಅವರ ಕೀರ್ತನೆಗಳು ಭಾವಗೀತೆಗಳಂತೆ ಮೂಡಿಬಂದಿವೆ ಎಂದು ಮುಖ್ಯಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ತಿಳಿಸಿದರು.</p>.<p>ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಾಮಾಜಿಕವಾಗಿ ಕೆಳವರ್ಗದಿಂದ ಬಂದು ದಾಸದೀಕ್ಷೆ ಪಡೆದು ದಾಸಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯಲೋಕಕ್ಕೆ ಹೊಸ ಆಯಾಮವನ್ನು ದೊರಕಿಸಿಕೊಟ್ಟರು. ಅವರು ಕರ್ನಾಟಕ ಸಂಗೀತ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ ಎಂದರು.</p>.<p>ವಿದ್ಯಾರ್ಥಿನಿ ಎಸ್.ಎನ್.ವಿದ್ಯಾ ಮಾತನಾಡಿ, ಕನಕದಾಸರ ಕೃತಿಗಳಲ್ಲಿ ಮೌಢ್ಯತೆ, ಕಂದಾಚಾರ, ಪೊಳ್ಳುನಂಬಿಕೆ, ವರ್ಣವ್ಯವಸ್ಥೆಯನ್ನು ಖಂಡಿಸಿರುವುದಲ್ಲದೇ ದೈವಭಕ್ತಿ, ಜೀವನದರ್ಶನ, ಸಮಾಜವಿಮರ್ಶೆ, ಲೋಕಾನುಭವಗಳು ಕಾವ್ಯಾತ್ಮಕವಾಗಿ ಹೊರಹೊಮ್ಮಿವೆ ಎಂದರು.</p>.<p>ವಿದ್ಯಾರ್ಥಿಗಳಾದ ಎಂ.ಮೇಘನಾ, ಶಿವಮಣಿ, ಶ್ರವಂತ್ ಮಾತನಾಡಿದರು. ವಿದ್ಯಾರ್ಥಿಗಳಿಂದ ಕನಕದಾಸ ರಚಿತ ಕೀರ್ತನೆಗಳ ಗಾಯನ ನಡೆಯಿತು.</p>.<p>ಎಸ್.ಡಿ.ಎಂ.ಸಿ ಅಧ್ಯಕ್ಷ ವೆಂಕಟೇಶ್, ಸದಸ್ಯ ಎಸ್.ಎಲ್.ನಾರಾಯಣಸ್ವಾಮಿ, ಸದಸ್ಯೆ ಶೋಭಾಮಂಜುನಾಥ್, ಗ್ರಾಮಪಂಚಾಯಿತಿ ಸದಸ್ಯ ಎ.ಸತೀಶ್ಕುಮಾರ್, ಎಂ.ನಾಗರಾಜು, ಗುತ್ತಿಗೆದಾರ ಶಿವಶಂಕರಪ್ಪ, ಎಂ.ದೇವರಾಜು, ನಿವೃತ್ತ ನೌಕರ ಪೂಜಾರಪ್ಪ, ಮೆಹಬೂಬ್ ಪಾಷಾ, ಆರತಿ, ಅಂಗನವಾಡಿ ಶಿಕ್ಷಕಿ ಜಯಂತಿ, ಮಂಜುಳಮ್ಮ, ಶಿಕ್ಷಕ ಎ.ಬಿ.ನಾಗರಾಜ, ಬಿ.ನಾಗರಾಜು, ಶಿಕ್ಷಕಿ ತಾಜೂನ್, ಆಶಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>