<p><strong>ಚಿಕ್ಕಬಳ್ಳಾಪುರ:</strong> ನಗರಕ್ಕೆ ಭಾನುವಾರ ಪ್ರವೇಶಿಸಿದ ಕನ್ನಡ ಜ್ಯೋತಿ ರಥಯಾತ್ರೆ ಯನ್ನು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ತಾಲ್ಲೂಕು ಆಡಳಿತ, ಕನ್ನಡ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಸ್ವಾಗತಿಸಿದರು.</p>.<p>ಗುಡಿಬಂಡೆ ತಾಲ್ಲೂಕಿನಿಂದ ಪೆರೇಸಂದ್ರ ಪಂಚಾಯಿತಿಯ ಆರೂರು ಗ್ರಾಮಕ್ಕೆ ಬಂದ ರಥಯಾತ್ರೆಯನ್ನು ಸ್ವಾಗತಿಸಲಾಯಿತು. ಅಲ್ಲಿಂದ ಚಿಕ್ಕಬಳ್ಳಾಪುರಕ್ಕೆ ಯಾತ್ರೆ ಪ್ರವೇಶಿಸಿತು.</p>.<p>ಒಕ್ಕಲಿಗರ ಕಲ್ಯಾಣ ಮಂಟಪದಿಂದ ರಥಯಾತ್ರೆ ಆರಂಭವಾಯಿತು. ಡೊಳ್ಳುಕುಣಿತ, ಶಾಲಾ ಮಕ್ಕಳ ಬ್ಯಾಂಡ್ ವಾದನ, ಗೊಂಬೆಗಳ ಕುಣಿತ, ಪಟ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆದವು. ಕನ್ನಡ ಪರ ಸಂಘ ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು, ಸಾಹಿತಿಗಳು, ಕನ್ನಡ ಪ್ರೇಮಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ. ಕೋಡಿರಂಗಪ್ಪ ಮಾತನಾಡಿ, ಕರ್ನಾಟಕದಲ್ಲಿರುವ ನಾವೆಲ್ಲರೂ ಒಂದೇ. ಎಲ್ಲರೂ ಸಹೋದರ ಭಾವನೆ ಹೊಂದಿರಬೇಕು. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯನ್ನು ಗೌರವಿಸಬೇಕು ಎಂದರು.</p>.<p>ಕರ್ನಾಟಕದ ಬಹುತೇಕ ಜನರಿಗೆ ಕನ್ನಡ ಮಾತೃ ಭಾಷೆ ಆಗಿದೆ. ಆಂಧ್ರ ಪ್ರದೇಶ, ತಮಿಳುನಾಡು, ಕೇರಳ, ಹಾಗೂ ದಮನ್ ಹಾಗೂ ದಿಯುಗಳಲ್ಲಿಯೂ ಕನ್ನಡವನ್ನು ಮಾತೃ ಭಾಷೆಯಾಗಿ ಬಳಸುವ ಗಣನೀಯ ಕನ್ನಡಿಗರು ಇದ್ದಾರೆ ಎಂದು ಹೇಳಿದರು.</p>.<p>ಕರ್ನಾಟಕ ಸರ್ವ ಜನಾಂಗದ, ಸರ್ವೋದಯದ ವಿಶ್ವಮಾನವರ ರಾಜ್ಯ ಆಗ ಬೇಕು. ಕನ್ನಡಿಗರಿಗೆ ಉದ್ಯೋಗ, ನೆಲ, ಜಲದ ವಿಚಾರದಲ್ಲಿ ಅನ್ಯಾಯ ಆಗಬಾರದು ಎಂದರು.</p>.<p>ಸಾಹಿತಿ ಗೋಪಾಲಗೌಡ ಕಲ್ವಮಂಜಲಿ, ತಂದೆ ತಾಯಿ ಕನ್ನಡ ಮಾತನಾಡುತ್ತಾರೆ. ಆದರೆ ಮಕ್ಕಳು ಪೂರ್ಣವಾಗಿ ಇಂಗ್ಲಿಷ್ ಮಾತನಾಡುವರು. ಈಗ ಕನ್ನಡ ಓದುವ ಮತ್ತು ಬರೆಯುವ ಮಕ್ಕಳು ಇಲ್ಲ. ಕನ್ನಡಕ್ಕೆ ಬಹಳ ಸಂಕಷ್ಟದ ಸ್ಥಿತಿ ಬರುತ್ತದೆ ಎಂದರು.</p>.<p>ತಹಶೀಲ್ದಾರ್ ಅನಿಲ್ ಮಾತನಾಡಿ, ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷ ಪೂರೈಸಿದ ಸಂಭ್ರಮದ ಹಿನ್ನೆಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ಪ್ರತಿ ತಾಲ್ಲೂಕಿನಲ್ಲೂ ಒಂದೊಂದು ದಿನ ಸಂಚಾರ ನಡೆಸಿ, ಮುಂದಿನ ತಾಲ್ಲೂಕಿಗೆ ಸಾಗಲಿದೆ. ಈ ವರ್ಷದ ಕನ್ನಡ ರಾಜ್ಯೋತ್ಸವ ದಿನಕ್ಕೆ ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷ ಪೂರ್ಣ ಆಗುವುದರಿಂದ ಕನ್ನಡ ನಾಡು ನುಡಿಯ ಬಗ್ಗೆ ಇಂದಿನ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ಜೊತೆಗೆ ಸಂಭ್ರಮ ಆಚರಿಸಲು ಈ ರಥಯಾತ್ರೆಯನ್ನು ಸರ್ಕಾರ ಆಯೋಜಿಸಿದೆ ಎಂದರು. </p>.<p>ಕನ್ನಡದ ಉಳಿವಿಗಾಗಿ ಶ್ರಮಪಟ್ಟ ಸಾಹಿತಿಗಳು ಮತ್ತು ಹೋರಾಟಗಾರರನ್ನು ಸ್ಮರಿಸಬೇಕು. ಈ ಸಂದೇಶ ಎಲ್ಲ ಕನ್ನಡ ಪ್ರೇಮಿಗಳಿಗೂ ತಲುಪಿಸಬೇಕು ಎಂದು ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ಕನ್ನಡ ಭಾಷೆಯ ಉಳಿವಿಗಾಗಿ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು. ಕನ್ನಡ ಭಾಷೆಯನ್ನು ಮುಂದಿನ ಪೀಳಿಗೆಗೆ ಕಾಣಿಕೆಯನ್ನಾಗಿ ನೀಡುವ ಕಾರ್ಯವಾಗಬೇಕು ಎಂದರು.</p>.<p>ಕಸಾಪ ತಾಲ್ಲೂಕು ಅಧ್ಯಕ್ಷ ಯಲುವಳ್ಳಿ ಸೊಣ್ಣೇಗೌಡ, ಜಿಲ್ಲಾ ಮತ್ತು ತಾಲ್ಲೂಕು ಕಸಾಪ ಪದಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶೇಷಾದ್ರಿ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ನಗರಕ್ಕೆ ಭಾನುವಾರ ಪ್ರವೇಶಿಸಿದ ಕನ್ನಡ ಜ್ಯೋತಿ ರಥಯಾತ್ರೆ ಯನ್ನು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ತಾಲ್ಲೂಕು ಆಡಳಿತ, ಕನ್ನಡ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಸ್ವಾಗತಿಸಿದರು.</p>.<p>ಗುಡಿಬಂಡೆ ತಾಲ್ಲೂಕಿನಿಂದ ಪೆರೇಸಂದ್ರ ಪಂಚಾಯಿತಿಯ ಆರೂರು ಗ್ರಾಮಕ್ಕೆ ಬಂದ ರಥಯಾತ್ರೆಯನ್ನು ಸ್ವಾಗತಿಸಲಾಯಿತು. ಅಲ್ಲಿಂದ ಚಿಕ್ಕಬಳ್ಳಾಪುರಕ್ಕೆ ಯಾತ್ರೆ ಪ್ರವೇಶಿಸಿತು.</p>.<p>ಒಕ್ಕಲಿಗರ ಕಲ್ಯಾಣ ಮಂಟಪದಿಂದ ರಥಯಾತ್ರೆ ಆರಂಭವಾಯಿತು. ಡೊಳ್ಳುಕುಣಿತ, ಶಾಲಾ ಮಕ್ಕಳ ಬ್ಯಾಂಡ್ ವಾದನ, ಗೊಂಬೆಗಳ ಕುಣಿತ, ಪಟ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆದವು. ಕನ್ನಡ ಪರ ಸಂಘ ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು, ಸಾಹಿತಿಗಳು, ಕನ್ನಡ ಪ್ರೇಮಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ. ಕೋಡಿರಂಗಪ್ಪ ಮಾತನಾಡಿ, ಕರ್ನಾಟಕದಲ್ಲಿರುವ ನಾವೆಲ್ಲರೂ ಒಂದೇ. ಎಲ್ಲರೂ ಸಹೋದರ ಭಾವನೆ ಹೊಂದಿರಬೇಕು. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯನ್ನು ಗೌರವಿಸಬೇಕು ಎಂದರು.</p>.<p>ಕರ್ನಾಟಕದ ಬಹುತೇಕ ಜನರಿಗೆ ಕನ್ನಡ ಮಾತೃ ಭಾಷೆ ಆಗಿದೆ. ಆಂಧ್ರ ಪ್ರದೇಶ, ತಮಿಳುನಾಡು, ಕೇರಳ, ಹಾಗೂ ದಮನ್ ಹಾಗೂ ದಿಯುಗಳಲ್ಲಿಯೂ ಕನ್ನಡವನ್ನು ಮಾತೃ ಭಾಷೆಯಾಗಿ ಬಳಸುವ ಗಣನೀಯ ಕನ್ನಡಿಗರು ಇದ್ದಾರೆ ಎಂದು ಹೇಳಿದರು.</p>.<p>ಕರ್ನಾಟಕ ಸರ್ವ ಜನಾಂಗದ, ಸರ್ವೋದಯದ ವಿಶ್ವಮಾನವರ ರಾಜ್ಯ ಆಗ ಬೇಕು. ಕನ್ನಡಿಗರಿಗೆ ಉದ್ಯೋಗ, ನೆಲ, ಜಲದ ವಿಚಾರದಲ್ಲಿ ಅನ್ಯಾಯ ಆಗಬಾರದು ಎಂದರು.</p>.<p>ಸಾಹಿತಿ ಗೋಪಾಲಗೌಡ ಕಲ್ವಮಂಜಲಿ, ತಂದೆ ತಾಯಿ ಕನ್ನಡ ಮಾತನಾಡುತ್ತಾರೆ. ಆದರೆ ಮಕ್ಕಳು ಪೂರ್ಣವಾಗಿ ಇಂಗ್ಲಿಷ್ ಮಾತನಾಡುವರು. ಈಗ ಕನ್ನಡ ಓದುವ ಮತ್ತು ಬರೆಯುವ ಮಕ್ಕಳು ಇಲ್ಲ. ಕನ್ನಡಕ್ಕೆ ಬಹಳ ಸಂಕಷ್ಟದ ಸ್ಥಿತಿ ಬರುತ್ತದೆ ಎಂದರು.</p>.<p>ತಹಶೀಲ್ದಾರ್ ಅನಿಲ್ ಮಾತನಾಡಿ, ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷ ಪೂರೈಸಿದ ಸಂಭ್ರಮದ ಹಿನ್ನೆಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ಪ್ರತಿ ತಾಲ್ಲೂಕಿನಲ್ಲೂ ಒಂದೊಂದು ದಿನ ಸಂಚಾರ ನಡೆಸಿ, ಮುಂದಿನ ತಾಲ್ಲೂಕಿಗೆ ಸಾಗಲಿದೆ. ಈ ವರ್ಷದ ಕನ್ನಡ ರಾಜ್ಯೋತ್ಸವ ದಿನಕ್ಕೆ ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷ ಪೂರ್ಣ ಆಗುವುದರಿಂದ ಕನ್ನಡ ನಾಡು ನುಡಿಯ ಬಗ್ಗೆ ಇಂದಿನ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ಜೊತೆಗೆ ಸಂಭ್ರಮ ಆಚರಿಸಲು ಈ ರಥಯಾತ್ರೆಯನ್ನು ಸರ್ಕಾರ ಆಯೋಜಿಸಿದೆ ಎಂದರು. </p>.<p>ಕನ್ನಡದ ಉಳಿವಿಗಾಗಿ ಶ್ರಮಪಟ್ಟ ಸಾಹಿತಿಗಳು ಮತ್ತು ಹೋರಾಟಗಾರರನ್ನು ಸ್ಮರಿಸಬೇಕು. ಈ ಸಂದೇಶ ಎಲ್ಲ ಕನ್ನಡ ಪ್ರೇಮಿಗಳಿಗೂ ತಲುಪಿಸಬೇಕು ಎಂದು ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ಕನ್ನಡ ಭಾಷೆಯ ಉಳಿವಿಗಾಗಿ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು. ಕನ್ನಡ ಭಾಷೆಯನ್ನು ಮುಂದಿನ ಪೀಳಿಗೆಗೆ ಕಾಣಿಕೆಯನ್ನಾಗಿ ನೀಡುವ ಕಾರ್ಯವಾಗಬೇಕು ಎಂದರು.</p>.<p>ಕಸಾಪ ತಾಲ್ಲೂಕು ಅಧ್ಯಕ್ಷ ಯಲುವಳ್ಳಿ ಸೊಣ್ಣೇಗೌಡ, ಜಿಲ್ಲಾ ಮತ್ತು ತಾಲ್ಲೂಕು ಕಸಾಪ ಪದಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶೇಷಾದ್ರಿ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>