<p><strong>ಗುಡಿಬಂಡೆ:</strong> ಪಟ್ಟಣ ಪಂಚಾಯಿತಿ 2024-25ನೇ ಸಾಲಿನ ಬಜೆಟ್ ಸಿದ್ಧಪಡಿಸುವ ಸಲುವಾಗಿ ಇದೇ ಮೋದಲು ಬಾರಿಗೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸಭೆ ನಡೆಸಿತು.</p>.<p>ಸೋಮುವಾರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನಗೀನ್ ತಾಜ್ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಮುಖ್ಯಾಧಿಕಾರಿ ಸಭಾ ಶೀರಿನಾ ಮಾತನಾಡಿ, ಗುಡಿಬಂಡೆ ಅಭಿವೃದ್ಧಿಗಾಗಿ ಬಜೆಟ್ ಸಿದ್ಧಪಡಿಸುವ ಸಲುವಾಗಿ ಸಾರ್ವಜನಿಕರಿಂದ ಸಲಹೆ ಸೂಚನೆ ನೀಡಬೇಕೆಂದು ತಿಳಿಸಿದರು.</p>.<p>ಬೀದಿದೀಪ, ರಸ್ತೆ, ಕುಡಿಯುವ ನೀರು ಸೌಲಭ್ಯ ಒದಗಿಸಲು ಸಾರ್ವಜನಿಕರು ಒಕ್ಕೊರಲಿನಿಂದ ಆಗ್ರಹಿಸಿದರು.</p>.<p>ಸುರಸದ್ಮಗಿರಿ ಬೆಟ್ಟ, ಅಮಾನಿ ಭೈರಸಾಗರ ಕೆರೆ ವಿಕ್ಷಣೆಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು ಮೂಲಸೌಲಭ್ಯ ಒದಗಿಸಬೇಕಾಗಿದೆ. ಪಟ್ಟಣದ ಹಲವು ಉದ್ಯಾನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಬೇಕಾಗಿದೆ ಎಂದು ಮನವಿ ಮಾಡಿದರು.</p>.<p>ಸಭೆಯಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ವಿಕಾಸ, ಸದಸ್ಯರಾದ ವೀಣ, ಅನುಷಾ, ಬಷೀರ್ ಅಹಮದ್, ರಾಜೇಶ, ರಾಜು, ಜೆ.ಇ. ಚಕ್ರಪಾಣಿ, ಅರೋಗ್ಯ ನಿರೀಕ್ಷಕ ಶಿವಣ್ಣ, ಸಾರ್ವಜನಿಕರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ:</strong> ಪಟ್ಟಣ ಪಂಚಾಯಿತಿ 2024-25ನೇ ಸಾಲಿನ ಬಜೆಟ್ ಸಿದ್ಧಪಡಿಸುವ ಸಲುವಾಗಿ ಇದೇ ಮೋದಲು ಬಾರಿಗೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸಭೆ ನಡೆಸಿತು.</p>.<p>ಸೋಮುವಾರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನಗೀನ್ ತಾಜ್ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಮುಖ್ಯಾಧಿಕಾರಿ ಸಭಾ ಶೀರಿನಾ ಮಾತನಾಡಿ, ಗುಡಿಬಂಡೆ ಅಭಿವೃದ್ಧಿಗಾಗಿ ಬಜೆಟ್ ಸಿದ್ಧಪಡಿಸುವ ಸಲುವಾಗಿ ಸಾರ್ವಜನಿಕರಿಂದ ಸಲಹೆ ಸೂಚನೆ ನೀಡಬೇಕೆಂದು ತಿಳಿಸಿದರು.</p>.<p>ಬೀದಿದೀಪ, ರಸ್ತೆ, ಕುಡಿಯುವ ನೀರು ಸೌಲಭ್ಯ ಒದಗಿಸಲು ಸಾರ್ವಜನಿಕರು ಒಕ್ಕೊರಲಿನಿಂದ ಆಗ್ರಹಿಸಿದರು.</p>.<p>ಸುರಸದ್ಮಗಿರಿ ಬೆಟ್ಟ, ಅಮಾನಿ ಭೈರಸಾಗರ ಕೆರೆ ವಿಕ್ಷಣೆಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು ಮೂಲಸೌಲಭ್ಯ ಒದಗಿಸಬೇಕಾಗಿದೆ. ಪಟ್ಟಣದ ಹಲವು ಉದ್ಯಾನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಬೇಕಾಗಿದೆ ಎಂದು ಮನವಿ ಮಾಡಿದರು.</p>.<p>ಸಭೆಯಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ವಿಕಾಸ, ಸದಸ್ಯರಾದ ವೀಣ, ಅನುಷಾ, ಬಷೀರ್ ಅಹಮದ್, ರಾಜೇಶ, ರಾಜು, ಜೆ.ಇ. ಚಕ್ರಪಾಣಿ, ಅರೋಗ್ಯ ನಿರೀಕ್ಷಕ ಶಿವಣ್ಣ, ಸಾರ್ವಜನಿಕರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>