<p><strong>ಚಿಕ್ಕಬಳ್ಳಾಪುರ:</strong> ಕೆಲವು ಕಡೆಗಳಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಟೆಂಡರ್ ಆಗಿ ಕಾರ್ಯಾದೇಶ ನೀಡಲಾಗಿತ್ತು. ಆದರೆ ರಾಜ್ಯ ಸರ್ಕಾರ ಈಗ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಆದೇಶಿಸಿದೆ. ಇದಕ್ಕೆ ಜಿಲ್ಲೆಯ ಉಸ್ತುವಾರಿ ಸಚಿವರು, ಕಾಂಗ್ರೆಸ್ ಶಾಸಕರು ಏನು ಉತ್ತರ ಹೇಳುತ್ತಾರೆ ಎಂದು ಸಂಸದ ಡಾ.ಕೆ.ಸುಧಾಕರ್ ಪ್ರಶ್ನಿಸಿದರು.</p>.<p>ನಗರದ ಸಂಸದರ ಕಚೇರಿಯಲ್ಲಿ ಸೋಮವಾರ ಸಾರ್ವಜನಿಕ ಭೇಟಿ ಕಾರ್ಯಕ್ರಮ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.</p>.<p>ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿಯು ಮಂದಗತಿಯಲ್ಲಿ ನಡೆಯುತ್ತಿದೆ. ಜಿಲ್ಲೆಯ ಶಾಸಕರು ವಿಧಾನಸಭೆ ಅಧಿವೇಶನದಲ್ಲಿ ಧ್ವನಿ ಎತ್ತಬೇಕು. ವಿಶೇಷ ಆಸಕ್ತಿವಹಿಸಿ ಕಾಮಗಾರಿಗೆ ವೇಗ ಕೊಡಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.</p>.<p>ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಎತ್ತಿನಹೊಳೆ ಕಾಮಗಾರಿಗೆ ಕೋಟ್ಯಂತರ ಹಣ ನೀಡಿದರು. ಇದರಿಂದ ಕಾಮಗಾರಿ ವೇಗವಾಗಿ ನಡೆಯಿತು. ಆದರೆ ಈ ಸರ್ಕಾರಕ್ಕೆ ಕೊರಟಗೆರೆ ತಾಲ್ಲೂಕಿನಲ್ಲಿ ಬೈರಗೊಂಡ್ಲು ಬಪರ್ ಡ್ಯಾಂ ನಿರ್ಮಾಣಕ್ಕೆ ಭೂ ಸ್ವಾಧೀನ ಸಾಧ್ಯ ಆಗುತ್ತಿಲ್ಲ. ಅಂದಮೇಲೆ ಇವರು ಯಾವ ರೀತಿಯಲ್ಲಿ ಯೋಜನೆ ಬಗ್ಗೆ ಗಂಭೀರವಾಗಿದ್ದಾರೆ ಎನ್ನುವುದನ್ನು ಆಲೋಚಿಸಬೇಕು ಎಂದರು.</p>.<p>ಕೆ.ಸಿ.ವ್ಯಾಲಿ, ಎಚ್.ಎನ್.ವ್ಯಾಲಿಯ ನೀರನ್ನು ಮೂರು ಹಂತದಲ್ಲಿ ಶುದ್ಧೀಕರಿಸುವ ಬಗ್ಗೆ ಅಧಿವೇಶನದಲ್ಲಿ ಶಾಸಕರು ಧ್ವನಿ ಎತ್ತಬೇಕು ಎಂದು ಹೇಳಿದರು.</p>.<p>ಉದ್ದಾರ ಮಾಡುತ್ತಾರೆ ಎಂದು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನರು ಕಾಂಗ್ರೆಸ್ಗೆ ದೊಡ್ಡ ಮಟ್ಟದಲ್ಲಿ ಬೆಂಬಲ ನೀಡಿದರು. ಹೆಚ್ಚು ಶಾಸಕರನ್ನು ಗೆಲ್ಲಿಸಿದರು. ಎತ್ತಿನಹೊಳೆ ಕಾಮಗಾರಿ ಸ್ಥಗಿತಕ್ಕೆ ಆದೇಶಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಈ ಭಾಗದ ಜನರ ಬಗ್ಗೆ ಇರುವ ಕಾಳಜಿಯನ್ನು ತೋರುತ್ತಿದೆ ಎಂದು ವ್ಯಂಗ್ಯವಾಡಿದರು. </p>.<p>ಜಲ ಜೀವನ್ ಮಿಷನ್ ಕಾಮಗಾರಿಗಳು ಜಿಲ್ಲೆಯಲ್ಲಿ ಎಲ್ಲಿ ಯಾವ ರೀತಿ ನಡೆಯುತ್ತಿವೆ, ಗುಣಮಟ್ಟವೇನು ಎನ್ನುವ ಬಗ್ಗೆ ದಿಶಾ ಸಮಿತಿ ಸಭೆಯಲ್ಲಿ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಅಟಲ್ ಭೂ ಜಲ ಯೋಜನೆ ಇದೆ. ಈ ಯೋಜನೆಯ ಬಗ್ಗೆಯೂ ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಗುವುದು ಎಂದರು.</p>.<p>ಈ ಜಿಲ್ಲೆಗಳ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು. ಯೋಜನೆಗಳಿಗೆ ಎಷ್ಟು ಹಣ ತರಬೇಕು ಎನ್ನುವ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ರೈತರ ಮುಖಂಡರ ಜೊತೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.</p>.<p>ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಹಣ ತರಲು ಪ್ರಯತ್ನಿಸುವೆ. ರೈಲ್ವೆ ಯೋಜನೆಗಳು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ, ಜೆಜೆಎಂ, ಅಟಲ್ ಭೂ ಜಲ ಯೋಜನೆ ಸೇರಿದಂತೆ ಪ್ರತಿ ಇಲಾಖೆಗೂ ಕೇಂದ್ರ ಸರ್ಕಾರ ಹಣ ನೀಡುತ್ತಿದೆ. ಈ ಬಾರಿಯೂ ಹೆಚ್ಚಿನ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.</p>.<p><strong>ಅಡ್ಡಗಲ್ಲಿಗೆ ನೀರಿಲ್ಲ; ಬೋರ್ವೆಲ್ಗೆ ದುಡ್ಡಿಲ್ಲ </strong></p><p>ಗ್ರಾಮ ಪಂಚಾಯಿತಿ ಕೇಂದ್ರ ಅಡ್ಡಗಲ್ಲಿನಲ್ಲಿ ನೀರಿಲ್ಲ ಎಂದು ಜನರು ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಇಲ್ಲಿ ಒಂದು ಕೊಳವೆ ಬಾವಿ ಹಾಕಿಸಲು ಸಹ ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳನ್ನು ಕೇಳಿದರೆ ಹಣವಿಲ್ಲ ಎನ್ನುತ್ತಾರಂತೆ. ಈ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡುವೆ ಎಂದು ಡಾ.ಕೆ.ಸುಧಾಕರ್ ತಿಳಿಸಿದರು. ನಾನು ಶಾಸಕನಾಗಿದ್ದ ಅವಧಿಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಕೊಳವೆ ಬಾವಿ ಹಾಕಿಸಿದೆ. ನೀರಿನ ಸಮಸ್ಯೆ ಪರಿಹರಿಸಿದೆ. ಆದರೆ ಈಗ ಐದಾರು ಹಳ್ಳಿಗಳಲ್ಲಿ ನೀರಿಲ್ಲ. ಈ ಬಗ್ಗೆ ಮಾತನಾಡಿದರೆ ಸಚಿವರಿಗೆ ಕೋಪ ಬರುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಕೆಲವು ಕಡೆಗಳಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಟೆಂಡರ್ ಆಗಿ ಕಾರ್ಯಾದೇಶ ನೀಡಲಾಗಿತ್ತು. ಆದರೆ ರಾಜ್ಯ ಸರ್ಕಾರ ಈಗ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಆದೇಶಿಸಿದೆ. ಇದಕ್ಕೆ ಜಿಲ್ಲೆಯ ಉಸ್ತುವಾರಿ ಸಚಿವರು, ಕಾಂಗ್ರೆಸ್ ಶಾಸಕರು ಏನು ಉತ್ತರ ಹೇಳುತ್ತಾರೆ ಎಂದು ಸಂಸದ ಡಾ.ಕೆ.ಸುಧಾಕರ್ ಪ್ರಶ್ನಿಸಿದರು.</p>.<p>ನಗರದ ಸಂಸದರ ಕಚೇರಿಯಲ್ಲಿ ಸೋಮವಾರ ಸಾರ್ವಜನಿಕ ಭೇಟಿ ಕಾರ್ಯಕ್ರಮ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.</p>.<p>ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿಯು ಮಂದಗತಿಯಲ್ಲಿ ನಡೆಯುತ್ತಿದೆ. ಜಿಲ್ಲೆಯ ಶಾಸಕರು ವಿಧಾನಸಭೆ ಅಧಿವೇಶನದಲ್ಲಿ ಧ್ವನಿ ಎತ್ತಬೇಕು. ವಿಶೇಷ ಆಸಕ್ತಿವಹಿಸಿ ಕಾಮಗಾರಿಗೆ ವೇಗ ಕೊಡಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.</p>.<p>ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಎತ್ತಿನಹೊಳೆ ಕಾಮಗಾರಿಗೆ ಕೋಟ್ಯಂತರ ಹಣ ನೀಡಿದರು. ಇದರಿಂದ ಕಾಮಗಾರಿ ವೇಗವಾಗಿ ನಡೆಯಿತು. ಆದರೆ ಈ ಸರ್ಕಾರಕ್ಕೆ ಕೊರಟಗೆರೆ ತಾಲ್ಲೂಕಿನಲ್ಲಿ ಬೈರಗೊಂಡ್ಲು ಬಪರ್ ಡ್ಯಾಂ ನಿರ್ಮಾಣಕ್ಕೆ ಭೂ ಸ್ವಾಧೀನ ಸಾಧ್ಯ ಆಗುತ್ತಿಲ್ಲ. ಅಂದಮೇಲೆ ಇವರು ಯಾವ ರೀತಿಯಲ್ಲಿ ಯೋಜನೆ ಬಗ್ಗೆ ಗಂಭೀರವಾಗಿದ್ದಾರೆ ಎನ್ನುವುದನ್ನು ಆಲೋಚಿಸಬೇಕು ಎಂದರು.</p>.<p>ಕೆ.ಸಿ.ವ್ಯಾಲಿ, ಎಚ್.ಎನ್.ವ್ಯಾಲಿಯ ನೀರನ್ನು ಮೂರು ಹಂತದಲ್ಲಿ ಶುದ್ಧೀಕರಿಸುವ ಬಗ್ಗೆ ಅಧಿವೇಶನದಲ್ಲಿ ಶಾಸಕರು ಧ್ವನಿ ಎತ್ತಬೇಕು ಎಂದು ಹೇಳಿದರು.</p>.<p>ಉದ್ದಾರ ಮಾಡುತ್ತಾರೆ ಎಂದು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನರು ಕಾಂಗ್ರೆಸ್ಗೆ ದೊಡ್ಡ ಮಟ್ಟದಲ್ಲಿ ಬೆಂಬಲ ನೀಡಿದರು. ಹೆಚ್ಚು ಶಾಸಕರನ್ನು ಗೆಲ್ಲಿಸಿದರು. ಎತ್ತಿನಹೊಳೆ ಕಾಮಗಾರಿ ಸ್ಥಗಿತಕ್ಕೆ ಆದೇಶಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಈ ಭಾಗದ ಜನರ ಬಗ್ಗೆ ಇರುವ ಕಾಳಜಿಯನ್ನು ತೋರುತ್ತಿದೆ ಎಂದು ವ್ಯಂಗ್ಯವಾಡಿದರು. </p>.<p>ಜಲ ಜೀವನ್ ಮಿಷನ್ ಕಾಮಗಾರಿಗಳು ಜಿಲ್ಲೆಯಲ್ಲಿ ಎಲ್ಲಿ ಯಾವ ರೀತಿ ನಡೆಯುತ್ತಿವೆ, ಗುಣಮಟ್ಟವೇನು ಎನ್ನುವ ಬಗ್ಗೆ ದಿಶಾ ಸಮಿತಿ ಸಭೆಯಲ್ಲಿ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಅಟಲ್ ಭೂ ಜಲ ಯೋಜನೆ ಇದೆ. ಈ ಯೋಜನೆಯ ಬಗ್ಗೆಯೂ ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಗುವುದು ಎಂದರು.</p>.<p>ಈ ಜಿಲ್ಲೆಗಳ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು. ಯೋಜನೆಗಳಿಗೆ ಎಷ್ಟು ಹಣ ತರಬೇಕು ಎನ್ನುವ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ರೈತರ ಮುಖಂಡರ ಜೊತೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.</p>.<p>ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಹಣ ತರಲು ಪ್ರಯತ್ನಿಸುವೆ. ರೈಲ್ವೆ ಯೋಜನೆಗಳು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ, ಜೆಜೆಎಂ, ಅಟಲ್ ಭೂ ಜಲ ಯೋಜನೆ ಸೇರಿದಂತೆ ಪ್ರತಿ ಇಲಾಖೆಗೂ ಕೇಂದ್ರ ಸರ್ಕಾರ ಹಣ ನೀಡುತ್ತಿದೆ. ಈ ಬಾರಿಯೂ ಹೆಚ್ಚಿನ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.</p>.<p><strong>ಅಡ್ಡಗಲ್ಲಿಗೆ ನೀರಿಲ್ಲ; ಬೋರ್ವೆಲ್ಗೆ ದುಡ್ಡಿಲ್ಲ </strong></p><p>ಗ್ರಾಮ ಪಂಚಾಯಿತಿ ಕೇಂದ್ರ ಅಡ್ಡಗಲ್ಲಿನಲ್ಲಿ ನೀರಿಲ್ಲ ಎಂದು ಜನರು ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಇಲ್ಲಿ ಒಂದು ಕೊಳವೆ ಬಾವಿ ಹಾಕಿಸಲು ಸಹ ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳನ್ನು ಕೇಳಿದರೆ ಹಣವಿಲ್ಲ ಎನ್ನುತ್ತಾರಂತೆ. ಈ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡುವೆ ಎಂದು ಡಾ.ಕೆ.ಸುಧಾಕರ್ ತಿಳಿಸಿದರು. ನಾನು ಶಾಸಕನಾಗಿದ್ದ ಅವಧಿಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಕೊಳವೆ ಬಾವಿ ಹಾಕಿಸಿದೆ. ನೀರಿನ ಸಮಸ್ಯೆ ಪರಿಹರಿಸಿದೆ. ಆದರೆ ಈಗ ಐದಾರು ಹಳ್ಳಿಗಳಲ್ಲಿ ನೀರಿಲ್ಲ. ಈ ಬಗ್ಗೆ ಮಾತನಾಡಿದರೆ ಸಚಿವರಿಗೆ ಕೋಪ ಬರುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>