<p><strong>ಚಿಕ್ಕಬಳ್ಳಾಪುರ</strong>: ಪ್ರತಿ ವರ್ಷದ ಆಷಾಢ ಮಾಸದ ಕೊನೆ ಸೋಮವಾರ ಹಮ್ಮಿಕೊಳ್ಳುವ ನಂದಿಗಿರಿ ಪ್ರದಕ್ಷಿಣೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.</p>.<p>ಸೋಮವಾರ ಬೆಳಿಗ್ಗೆ ತಾಲ್ಲೂಕಿನ ನಂದಿ ಗ್ರಾಮದ ಐತಿಹಾಸಿಕ ಭೋಗನಂದೀಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರದಕ್ಷಿಣೆಯನ್ನು ಭಕ್ತರು ಆರಂಭಿಸಿದರು. ದೇವರ ನಾಮ ಸ್ಮರಣೆ, ಭಜನೆಯೊಂದಿಗೆ ನಡಿಗೆ ಆರಂಭಿಸಿದರು. ನಂದಿ ಗಿರಿ ಪ್ರದಕ್ಷಿಣಾ ಸೇವಾ ಟ್ರಸ್ಟ್ ನೇತೃತ್ವದಲ್ಲಿ ನಡೆದ 84ನೇ ವರ್ಷದ ಗಿರಿ ಪ್ರದಕ್ಷಿಣೆ ಕಾರ್ಯಕ್ರಮ ಇದಾಗಿದೆ. ಹೆಜ್ಜೆ ಹೆಜ್ಜೆಗೂ ಶಿವನಾಮ ಭಜಿಸುತ್ತ ಸುಮಾರು 15 ಕಿ.ಮೀ ದೂರದ ಪ್ರದಕ್ಷಿಣೆ ಪೂರೈಸಿದರು.</p>.<p>ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ದೇವನಹಳ್ಳಿ, ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಂದ ಭಕ್ತರು ಪ್ರದಕ್ಷಿಣೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಭಜನಾ ತಂಡಗಳು ದೇವರ ಹಾಡುಗಳನ್ನು ಹಾಡಿದರು.</p>.<p> ಪ್ರದಕ್ಷಿಣೆ ಅಂಗಟ್ಟ, ಕುಡುವತಿ, ಕಾರಹಳ್ಳಿ ಕ್ರಾಸ್, ಬೆಟ್ಟದ ಕ್ರಾಸ್, ಹೆಗ್ಗಡಿಹಳ್ಳಿ, ಕಣಿವೆ ಬಸವಣ್ಣ, ಸುಲ್ತಾನ್ ಪೇಟೆ ಮಾರ್ಗವಾಗಿ ಪುನಃ ದೇವಾಲಯದಲ್ಲಿ ಅಂತ್ಯಗೊಂಡಿತ್ತು. ಗಿರಿ ಪ್ರದಕ್ಷಿಣೆ ಮಾಡಿದರೆ ಒಳ್ಳೆಯದಾಗುತ್ತದೆ ಎನ್ನುವ ನಂಬಿ ಭಕ್ತರಲ್ಲಿ ಇದೆ. ಈ ಕಾರಣದಿಂದ ಪ್ರತಿ ವರ್ಷವೂ ಗಿರಿಪ್ರದಕ್ಷಿಣೆ ನಡೆಯುತ್ತಿದೆ.</p>.<p>ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಮತ್ತು ತಾಲ್ಲೂಕು ಘಟಕದ ಸದಸ್ಯರು, ಪಾದಯಾತ್ರಿಗಳಿಗೆ ಕಲ್ಲಂಗಡಿ ಹಣ್ಣು ವಿತರಿಸಿದರು. ದಾರಿಯಲ್ಲಿ ಪಾದಯಾತ್ರಿಗಳಿಗೆ ಭಕ್ತರು ಹಾಗೂ ವಿವಿಧ ಸಂಘ ಸಂಸ್ಥೆಗಳು ಊಟ, ಉಪಾಹಾರ ಮತ್ತು ನೀರಿನ ವ್ಯವಸ್ಥೆ ಮಾಡಿದ್ದರು.</p>.<p>‘ಗಿರಿಪ್ರದಕ್ಷಿಣೆಯಲ್ಲಿ ಇದೇ ಮೊದಲ ಬಾರಿ ಭಾಗವಹಿಸಿದ್ದೇನೆ. ಇಷ್ಟಾರ್ಥಗಳು ಈಡೇರುತ್ತವೆ ಎನ್ನುವ ನಂಬಿಕೆ ಇದೆ. ನಮ್ಮ ಜೊತೆಗೆ ಚಿಕ್ಕಬಳ್ಳಾಪುರದ ನಮ್ಮ ಸ್ನೇಹಿತೆಯರೂ ಸಹ ಪ್ರದಕ್ಷಿಣೆಯಲ್ಲಿ ಭಾಗಿಯಾಗಿದ್ದಾರೆ’ ಎಂದು ಚಿಕ್ಕಬಳ್ಳಾಪುರದ ಸುಧಾ ತಿಳಿಸಿದರು.</p>.<p>‘ಬೆಳಿಗ್ಗೆ 6ಕ್ಕೆ ಗಿರಿಪ್ರದಕ್ಷಿಣೆ ಆರಂಭವಾಯಿತು. 10.30ರ ವೇಳೆಗೆ ಪ್ರದಕ್ಷಿಣೆ ಪೂರ್ಣಗೊಂಡಿತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಪ್ರತಿ ವರ್ಷದ ಆಷಾಢ ಮಾಸದ ಕೊನೆ ಸೋಮವಾರ ಹಮ್ಮಿಕೊಳ್ಳುವ ನಂದಿಗಿರಿ ಪ್ರದಕ್ಷಿಣೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.</p>.<p>ಸೋಮವಾರ ಬೆಳಿಗ್ಗೆ ತಾಲ್ಲೂಕಿನ ನಂದಿ ಗ್ರಾಮದ ಐತಿಹಾಸಿಕ ಭೋಗನಂದೀಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರದಕ್ಷಿಣೆಯನ್ನು ಭಕ್ತರು ಆರಂಭಿಸಿದರು. ದೇವರ ನಾಮ ಸ್ಮರಣೆ, ಭಜನೆಯೊಂದಿಗೆ ನಡಿಗೆ ಆರಂಭಿಸಿದರು. ನಂದಿ ಗಿರಿ ಪ್ರದಕ್ಷಿಣಾ ಸೇವಾ ಟ್ರಸ್ಟ್ ನೇತೃತ್ವದಲ್ಲಿ ನಡೆದ 84ನೇ ವರ್ಷದ ಗಿರಿ ಪ್ರದಕ್ಷಿಣೆ ಕಾರ್ಯಕ್ರಮ ಇದಾಗಿದೆ. ಹೆಜ್ಜೆ ಹೆಜ್ಜೆಗೂ ಶಿವನಾಮ ಭಜಿಸುತ್ತ ಸುಮಾರು 15 ಕಿ.ಮೀ ದೂರದ ಪ್ರದಕ್ಷಿಣೆ ಪೂರೈಸಿದರು.</p>.<p>ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ದೇವನಹಳ್ಳಿ, ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಂದ ಭಕ್ತರು ಪ್ರದಕ್ಷಿಣೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಭಜನಾ ತಂಡಗಳು ದೇವರ ಹಾಡುಗಳನ್ನು ಹಾಡಿದರು.</p>.<p> ಪ್ರದಕ್ಷಿಣೆ ಅಂಗಟ್ಟ, ಕುಡುವತಿ, ಕಾರಹಳ್ಳಿ ಕ್ರಾಸ್, ಬೆಟ್ಟದ ಕ್ರಾಸ್, ಹೆಗ್ಗಡಿಹಳ್ಳಿ, ಕಣಿವೆ ಬಸವಣ್ಣ, ಸುಲ್ತಾನ್ ಪೇಟೆ ಮಾರ್ಗವಾಗಿ ಪುನಃ ದೇವಾಲಯದಲ್ಲಿ ಅಂತ್ಯಗೊಂಡಿತ್ತು. ಗಿರಿ ಪ್ರದಕ್ಷಿಣೆ ಮಾಡಿದರೆ ಒಳ್ಳೆಯದಾಗುತ್ತದೆ ಎನ್ನುವ ನಂಬಿ ಭಕ್ತರಲ್ಲಿ ಇದೆ. ಈ ಕಾರಣದಿಂದ ಪ್ರತಿ ವರ್ಷವೂ ಗಿರಿಪ್ರದಕ್ಷಿಣೆ ನಡೆಯುತ್ತಿದೆ.</p>.<p>ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಮತ್ತು ತಾಲ್ಲೂಕು ಘಟಕದ ಸದಸ್ಯರು, ಪಾದಯಾತ್ರಿಗಳಿಗೆ ಕಲ್ಲಂಗಡಿ ಹಣ್ಣು ವಿತರಿಸಿದರು. ದಾರಿಯಲ್ಲಿ ಪಾದಯಾತ್ರಿಗಳಿಗೆ ಭಕ್ತರು ಹಾಗೂ ವಿವಿಧ ಸಂಘ ಸಂಸ್ಥೆಗಳು ಊಟ, ಉಪಾಹಾರ ಮತ್ತು ನೀರಿನ ವ್ಯವಸ್ಥೆ ಮಾಡಿದ್ದರು.</p>.<p>‘ಗಿರಿಪ್ರದಕ್ಷಿಣೆಯಲ್ಲಿ ಇದೇ ಮೊದಲ ಬಾರಿ ಭಾಗವಹಿಸಿದ್ದೇನೆ. ಇಷ್ಟಾರ್ಥಗಳು ಈಡೇರುತ್ತವೆ ಎನ್ನುವ ನಂಬಿಕೆ ಇದೆ. ನಮ್ಮ ಜೊತೆಗೆ ಚಿಕ್ಕಬಳ್ಳಾಪುರದ ನಮ್ಮ ಸ್ನೇಹಿತೆಯರೂ ಸಹ ಪ್ರದಕ್ಷಿಣೆಯಲ್ಲಿ ಭಾಗಿಯಾಗಿದ್ದಾರೆ’ ಎಂದು ಚಿಕ್ಕಬಳ್ಳಾಪುರದ ಸುಧಾ ತಿಳಿಸಿದರು.</p>.<p>‘ಬೆಳಿಗ್ಗೆ 6ಕ್ಕೆ ಗಿರಿಪ್ರದಕ್ಷಿಣೆ ಆರಂಭವಾಯಿತು. 10.30ರ ವೇಳೆಗೆ ಪ್ರದಕ್ಷಿಣೆ ಪೂರ್ಣಗೊಂಡಿತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>