<p><strong>ಚಿಂತಾಮಣಿ:</strong> ತಾಲ್ಲೂಕಿನಾದ್ಯಂತ ನಿರಂತರವಾಗಿ ನಡೆಯುತ್ತಿರುವ ಶ್ರೀಗಂಧದ ಮರಗಳ ಕಳ್ಳತನ ಪ್ರಕರಣಗಳನ್ನು ಭೇದಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶ್ರೀಗಂಧ ಬೆಳೆಗಾರರು ಭಾನುವಾರ ಗ್ರಾಮಾಂತರ ಠಾಣೆ ಮುಂದೆ ಧರಣಿ ನಡೆಸಿದರು.</p>.<p>ಶ್ರೀಗಂಧ ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ್ ಮಾತನಾಡಿ, ‘ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ 8–10 ದಿನಗಳಲ್ಲಿ ಆರು ತೋಟಗಳಿಂದ 150 ಮರಗಳು ಕಳ್ಳತನವಾಗಿವೆ. ಪೊಲೀಸ್ ಇಲಾಖೆ ಇದೆಯೇ ಅಥವಾ ಇಲ್ಲವೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. </p>.<p>ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ಮೂರು ರೈತರ ತೋಟಗಳಲ್ಲಿ ಕಳ್ಳತನವಾಗಿದ್ದು, ಈ ಸಂಬಂಧ ದೂರನ್ನೂ ನೀಡಲಾಗಿದೆ. ಆದರೆ ಪೊಲೀಸರು ಮೂರು ದೂರುಗಳನ್ನು ಸೇರಿಸಿ ಒಂದು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣಗಳನ್ನು ಪ್ರತ್ಯೇಕವಾಗಿ ದಾಖಲಿಸಿಕೊಂಡಿಲ್ಲ ಏಕೆ ಎಂದು ಪ್ರಶ್ನಿಸಿದರು. ಈ ಎಲ್ಲ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಳ್ಳರನ್ನು ಪತ್ತೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಮೂರು ಪ್ರಕರಣಗಳನ್ನು ದಾಖಲಿಸಲು ಕಾನೂನು ತೊಡಕಿದೆ. ಅದನ್ನು ವಿಚಾರಿಸಿ ನಾಳೆ ತಿಳಿಸುವುದಾಗಿ ಪ್ರತಿಭಟನಕಾರರಿಗೆ ಪೊಲೀಸರು ತಿಳಿಸಿದರು. ಮೂರು ಎಫ್ಐಆರ್ಗಳನ್ನು ದಾಖಲಿಸಿಕೊಳ್ಳಲಿದ್ದರೆ, ಜಿಲ್ಲಾ ಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಶ್ರೀಗಂಧ ಬೆಳೆಗಾರರು ಎಚ್ಚರಿಕೆ ನೀಡಿದರು. </p>.<p>ಸರ್ಕಾರ ಶ್ರೀಗಂಧದ ಮರ ಬೆಳೆಸಲು ಪ್ರೋತ್ಸಾಹ ನೀಡುತ್ತಿದೆ. ಅರಣ್ಯ ಇಲಾಖೆ ಮರಗಳನ್ನು ಬೆಳೆಸಲು ಅನುಮತಿ ನೀಡಿ, ಸಸಿಗಳನ್ನು ಒದಗಿಸುತ್ತಿದೆ. ರೈತರು 10–15 ವರ್ಷಗಳಿಂದ ಕಷ್ಟಪಟ್ಟು ಬೆಳೆದ ಮರಗಳು ರಾತ್ರೋರಾತ್ರಿ ಕಳ್ಳತನವಾಗುತ್ತಿವೆ. ಆದರೆ, ಈ ಸಂಬಂಧ ಪೊಲೀಸರು ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರೈತರು ದೂರಿದರು. </p>.<p>ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಎಸ್.ಶಿವರಾಜ್ ಬೆಳೆಗಾರರೊಂದಿಗೆ ಮಾತುಕತೆ ನಡೆಸಿ ಕಳ್ಳರ ಪತ್ತೆಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಎರಡು ದಿನಗಳ ಹಿಂದೆ ನಡೆದಿರುವ ಮೂರು ಪ್ರಕರಣಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. </p>.<p>ಈ ಧರಣಿಯಲ್ಲಿ ಶ್ರೀಗಂಧದ ಬೆಳೆಗಾರರ ಸಂಘದ ಪದಾಧಿಕಾರಿಗಳು ಹಾಗೂ ಬೆಳೆಗಾರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ತಾಲ್ಲೂಕಿನಾದ್ಯಂತ ನಿರಂತರವಾಗಿ ನಡೆಯುತ್ತಿರುವ ಶ್ರೀಗಂಧದ ಮರಗಳ ಕಳ್ಳತನ ಪ್ರಕರಣಗಳನ್ನು ಭೇದಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶ್ರೀಗಂಧ ಬೆಳೆಗಾರರು ಭಾನುವಾರ ಗ್ರಾಮಾಂತರ ಠಾಣೆ ಮುಂದೆ ಧರಣಿ ನಡೆಸಿದರು.</p>.<p>ಶ್ರೀಗಂಧ ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ್ ಮಾತನಾಡಿ, ‘ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ 8–10 ದಿನಗಳಲ್ಲಿ ಆರು ತೋಟಗಳಿಂದ 150 ಮರಗಳು ಕಳ್ಳತನವಾಗಿವೆ. ಪೊಲೀಸ್ ಇಲಾಖೆ ಇದೆಯೇ ಅಥವಾ ಇಲ್ಲವೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. </p>.<p>ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ಮೂರು ರೈತರ ತೋಟಗಳಲ್ಲಿ ಕಳ್ಳತನವಾಗಿದ್ದು, ಈ ಸಂಬಂಧ ದೂರನ್ನೂ ನೀಡಲಾಗಿದೆ. ಆದರೆ ಪೊಲೀಸರು ಮೂರು ದೂರುಗಳನ್ನು ಸೇರಿಸಿ ಒಂದು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣಗಳನ್ನು ಪ್ರತ್ಯೇಕವಾಗಿ ದಾಖಲಿಸಿಕೊಂಡಿಲ್ಲ ಏಕೆ ಎಂದು ಪ್ರಶ್ನಿಸಿದರು. ಈ ಎಲ್ಲ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಳ್ಳರನ್ನು ಪತ್ತೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಮೂರು ಪ್ರಕರಣಗಳನ್ನು ದಾಖಲಿಸಲು ಕಾನೂನು ತೊಡಕಿದೆ. ಅದನ್ನು ವಿಚಾರಿಸಿ ನಾಳೆ ತಿಳಿಸುವುದಾಗಿ ಪ್ರತಿಭಟನಕಾರರಿಗೆ ಪೊಲೀಸರು ತಿಳಿಸಿದರು. ಮೂರು ಎಫ್ಐಆರ್ಗಳನ್ನು ದಾಖಲಿಸಿಕೊಳ್ಳಲಿದ್ದರೆ, ಜಿಲ್ಲಾ ಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಶ್ರೀಗಂಧ ಬೆಳೆಗಾರರು ಎಚ್ಚರಿಕೆ ನೀಡಿದರು. </p>.<p>ಸರ್ಕಾರ ಶ್ರೀಗಂಧದ ಮರ ಬೆಳೆಸಲು ಪ್ರೋತ್ಸಾಹ ನೀಡುತ್ತಿದೆ. ಅರಣ್ಯ ಇಲಾಖೆ ಮರಗಳನ್ನು ಬೆಳೆಸಲು ಅನುಮತಿ ನೀಡಿ, ಸಸಿಗಳನ್ನು ಒದಗಿಸುತ್ತಿದೆ. ರೈತರು 10–15 ವರ್ಷಗಳಿಂದ ಕಷ್ಟಪಟ್ಟು ಬೆಳೆದ ಮರಗಳು ರಾತ್ರೋರಾತ್ರಿ ಕಳ್ಳತನವಾಗುತ್ತಿವೆ. ಆದರೆ, ಈ ಸಂಬಂಧ ಪೊಲೀಸರು ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರೈತರು ದೂರಿದರು. </p>.<p>ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಎಸ್.ಶಿವರಾಜ್ ಬೆಳೆಗಾರರೊಂದಿಗೆ ಮಾತುಕತೆ ನಡೆಸಿ ಕಳ್ಳರ ಪತ್ತೆಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಎರಡು ದಿನಗಳ ಹಿಂದೆ ನಡೆದಿರುವ ಮೂರು ಪ್ರಕರಣಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. </p>.<p>ಈ ಧರಣಿಯಲ್ಲಿ ಶ್ರೀಗಂಧದ ಬೆಳೆಗಾರರ ಸಂಘದ ಪದಾಧಿಕಾರಿಗಳು ಹಾಗೂ ಬೆಳೆಗಾರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>