<p><strong>ಬಾಗೇಪಲ್ಲಿ:</strong> 15 ಕೆ.ಜಿ ಕೃಷ್ಣಮೃಗದ ಮಾಂಸವನ್ನು ಬೇಟೆ ಮಾಡಿದ 5 ಮಂದಿಯನ್ನು ಬಾಗೇಪಲ್ಲಿ ಪೊಲೀಸರು ಬುಧವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ತಾಲ್ಲೂಕಿನ ಸೋಲಮಾಕಲಪಲ್ಲಿ ಗ್ರಾಮದ ಸಂದೇಶ್, ವೆಂಕಟೇಶಪ್ಪ, ಕೃಷ್ಣಪ್ಪ, ಯಲ್ಲಂಪಲ್ಲಿ ಗ್ರಾಮದ ಎನ್.ಚಂದ್ರಶೇಖರ್, ಪುಟ್ಟಪರ್ತಿ ಗ್ರಾಮದ ನಾಗಪ್ಪ ಬಂಧಿತರು.</p>.<p>ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಮುಖ್ಯರಸ್ತೆಯಲ್ಲಿ ಗಲಾಟೆ ನಡೆಯುತ್ತಿದೆ ಎಂದು ಸಾರ್ವಜನಿಕರು ಪೊಲೀಸರಿಗೆ ಕರೆ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ 12 ಕೆ.ಜಿ ಕೃಷ್ಣಮೃಗದ ಮಾಂಸವನ್ನು ಹಾಗೂ ಸಂದೇಶ್, ವೆಂಕಟೇಶ್ ಹಾಗೂ ಕೃಷ್ಣಪ್ಪ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ಬೆಳಿಗ್ಗೆ ಕೃಷ್ಣಮೃಗದ ಮಾಂಸ ಹಾಗೂ ಮೂರು ಮಂದಿಯನ್ನು ಪೊಲೀಸರು ಪ್ರಾದೇಶಿಕ ಅರಣ್ಯ ವಲಯದ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.</p>.<p>ಪ್ರಾದೇಶಿಕ ವಲಯದ ಅರಣ್ಯ ಅಧಿಕಾರಿಗಳು ಗುರುವಾರ ಚಂದ್ರಶೇಖರ್ ಹಾಗೂ ನಾಗಪ್ಪ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರ ಕುಟುಂಬದವರು ಹಾಗೂ ಗ್ರಾಮಸ್ಥರು ವಲಯ ಅರಣ್ಯ ಅಧಿಕಾರಿ ಕಚೇರಿ ಮುಂದೆ ಸಂಜೆವರೆಗೂ ಜಮಾಯಿಸಿದ್ದರು. ಪ್ರಾದೇಶಿಕ ಅರಣ್ಯ ವಲಯದ ಕಚೇರಿಯಲ್ಲಿ 5 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳದಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿತ್ತು.</p>.<p>ಬಂಧಿತರಿಂದ ಕೃಷ್ಣಮೃಗದ ಮಾಂಸ, 2 ಚಾಕು, ಮಚ್ಚು, ಒಂದು ದ್ವಿಚಕ್ರ ವಾಹನ, 3 ಮೊಬೈಲ್ ಹಾಗೂ ₹5,710 ವಶಪಡಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ:</strong> 15 ಕೆ.ಜಿ ಕೃಷ್ಣಮೃಗದ ಮಾಂಸವನ್ನು ಬೇಟೆ ಮಾಡಿದ 5 ಮಂದಿಯನ್ನು ಬಾಗೇಪಲ್ಲಿ ಪೊಲೀಸರು ಬುಧವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ತಾಲ್ಲೂಕಿನ ಸೋಲಮಾಕಲಪಲ್ಲಿ ಗ್ರಾಮದ ಸಂದೇಶ್, ವೆಂಕಟೇಶಪ್ಪ, ಕೃಷ್ಣಪ್ಪ, ಯಲ್ಲಂಪಲ್ಲಿ ಗ್ರಾಮದ ಎನ್.ಚಂದ್ರಶೇಖರ್, ಪುಟ್ಟಪರ್ತಿ ಗ್ರಾಮದ ನಾಗಪ್ಪ ಬಂಧಿತರು.</p>.<p>ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಮುಖ್ಯರಸ್ತೆಯಲ್ಲಿ ಗಲಾಟೆ ನಡೆಯುತ್ತಿದೆ ಎಂದು ಸಾರ್ವಜನಿಕರು ಪೊಲೀಸರಿಗೆ ಕರೆ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ 12 ಕೆ.ಜಿ ಕೃಷ್ಣಮೃಗದ ಮಾಂಸವನ್ನು ಹಾಗೂ ಸಂದೇಶ್, ವೆಂಕಟೇಶ್ ಹಾಗೂ ಕೃಷ್ಣಪ್ಪ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ಬೆಳಿಗ್ಗೆ ಕೃಷ್ಣಮೃಗದ ಮಾಂಸ ಹಾಗೂ ಮೂರು ಮಂದಿಯನ್ನು ಪೊಲೀಸರು ಪ್ರಾದೇಶಿಕ ಅರಣ್ಯ ವಲಯದ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.</p>.<p>ಪ್ರಾದೇಶಿಕ ವಲಯದ ಅರಣ್ಯ ಅಧಿಕಾರಿಗಳು ಗುರುವಾರ ಚಂದ್ರಶೇಖರ್ ಹಾಗೂ ನಾಗಪ್ಪ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರ ಕುಟುಂಬದವರು ಹಾಗೂ ಗ್ರಾಮಸ್ಥರು ವಲಯ ಅರಣ್ಯ ಅಧಿಕಾರಿ ಕಚೇರಿ ಮುಂದೆ ಸಂಜೆವರೆಗೂ ಜಮಾಯಿಸಿದ್ದರು. ಪ್ರಾದೇಶಿಕ ಅರಣ್ಯ ವಲಯದ ಕಚೇರಿಯಲ್ಲಿ 5 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳದಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿತ್ತು.</p>.<p>ಬಂಧಿತರಿಂದ ಕೃಷ್ಣಮೃಗದ ಮಾಂಸ, 2 ಚಾಕು, ಮಚ್ಚು, ಒಂದು ದ್ವಿಚಕ್ರ ವಾಹನ, 3 ಮೊಬೈಲ್ ಹಾಗೂ ₹5,710 ವಶಪಡಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>