ಸ್ಕಂದಗಿರಿಯ ಚಟುವಟಿಕೆಗಳು ಅಕ್ರಮಗಳ ತಡೆಗೆ ಕ್ರಮವಹಿಸುವಂತೆ ಅರಣ್ಯ ಇಲಾಖೆ ಉಪ ಸಂರಕ್ಷಣಾಧಿಕಾರಿಗೆ ತಿಳಿಸಲಾಗುವುದು. ಯಾವುದೇ ರೀತಿಯ ಅಕ್ರಮಗಳನ್ನು ಸಹಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು. ತನಿಖೆ ನಡೆಸಿ ವರದಿ ನೀಡುವಂತೆ ಐದು ಮಂದಿಯ ಸಮಿತಿ ರಚಿಸಲಾಗಿದೆ ಎಂದರು. ಸ್ಕಂದಗಿರಿಯಲ್ಲಿ ಚಟುವಟಿಕೆಗಳು ಪಾರದರ್ಶಕ ವಾಗಿ ನಡೆಯಬೇಕು ಆನ್ ಲೈನ್ವ್ಯವಸ್ಥೆ ಕಟ್ಟುನಿಟ್ಟಾಗಿ ನಡೆಯಬೇಕು. ಆಪ್ಲೈನ್ನಲ್ಲಿ ಹಣ ಪಡೆದು ಟಿಕೆಟ್ ನೀಡಬಾರದು. ಇದರ ಉಸ್ತುವಾರಿ ಅರಣ್ಯ ಇಲಾಖೆಯದ್ದಾಗಿದೆ. ಆದ್ದರಿಂದ ಇಲ್ಲಿನ ಚಟುವಟಿಕೆಗಳ ಮೇಲೆ ನಿಗಾವಹಿಸಲು ನಿರ್ದೇಶನ ನೀಡಿದ್ದೇನೆ. ಸ್ಕಂದಗಿರಿ ಅಷ್ಟೇ ಅಲ್ಲ ಜಿಲ್ಲೆಯ ಯಾವುದೇ ಪ್ರವಾಸಿ ತಾಣ ಮತ್ತು ಚಾಣರ ಸ್ಥಳಗಳಲ್ಲಿ ಅಕ್ರಮಗಳು ನಡೆದರೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.