<p><strong>ಚಿಕ್ಕಬಳ್ಳಾಪುರ</strong>: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಹಾಗೂ ಪಕ್ಕದ ಕೋಲಾರ, ತುಮಕೂರು ಜಿಲ್ಲೆಗಳು 2023ರಲ್ಲಿ ತೀವ್ರ ಬರಗಾಲ ಎದುರಿಸಿವೆ. ಈ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.</p>.<p>ಸಂಸತ್ ಅಧಿವೇಶನದಲ್ಲಿ ಗಮನ ಸೆಳೆಯುವ ಸೂಚನೆಯಡಿ ವಿಷಯ ಪ್ರಸ್ತಾಪಿಸಿದ ಅವರು, ಕುಡಿಯುವ ನೀರು ಹಾಗೂ ಕೃಷಿಗಾಗಿ ಕೈಗೊಳ್ಳಬೇಕಿರುವ ಶಾಶ್ವತ ಪರಿಹಾರ ಯೋಜನೆ ಹಾಗೂ ಕ್ರಮಗಳ ಬಗ್ಗೆ ವಿವರಿಸಿದರು.</p>.<p>ಕರ್ನಾಟಕ 2023ರಲ್ಲಿ ತೀವ್ರ ಬರಗಾಲ ಎದುರಿಸಿದೆ. ರಾಜ್ಯದ ಬಹುತೇಕ ಎಲ್ಲ </p>.<p>ಈ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುವ ಬದಲು, ರಾಜ್ಯ ಸರ್ಕಾರ ಸಂಸ್ಕರಿತ ನೀರನ್ನು (ಎಸ್ಟಿಪಿ) ಈ ಜಿಲ್ಲೆಗಳ ಕೆರೆಗಳಿಗೆ ಹರಿಸುತ್ತಿದೆ. ಇದರಿಂದ ಯಾವೆಲ್ಲ ಪರಿಣಾಮವಾಗಲಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಏಕೆಂದರೆ 80 ಲಕ್ಷ ಜನರು ಈ ನೀರನ್ನು ಕುಡಿಯುವ ಉದ್ದೇಶಕ್ಕೆ ಹಾಗೂ ಕೃಷಿಗೆ ಬಳಸುತ್ತಿದ್ದಾರೆ. ಹೀಗೆ ಎಸ್ಟಿಪಿ ನೀರನ್ನು ಕೆರೆ ತುಂಬಿಸಲು, ಕುಡಿಯಲು ಹಾಗೂ ಕೃಷಿಗೆ ಬಳಸುತ್ತಿರುವುದು ಇಡೀ ದೇಶದಲ್ಲೇ ಮೊದಲು ಎಂದು ಹೇಳಿದರು.</p>.<p>ಕೃಷ್ಣಾ ನದಿಯಿಂದ ಕನಿಷ್ಠ 5 ಟಿಎಂಸಿ ಅಡಿ ನೀರನ್ನು ಈ ಭಾಗಕ್ಕೆ ಸರಬರಾಜು ಮಾಡಬಹುದು. ಇದಕ್ಕಾಗಿ ಕಾಲುವೆಗಳನ್ನು ನಿರ್ಮಾಣ ಮಾಡಬಹುದು. ಹಾಗೆಯೇ ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವುದು ಕೂಡ ಪರಿಹಾರವಾಗಲಿದೆ. ಜೊತೆಗೆ, ಪಾಲಾರ್, ಪೆನ್ನಾರ್ ಮತ್ತು ಚಿತ್ರಾವತಿ ನದಿಗಳಲ್ಲಿ ವಿಶೇಷ ಜಲಾನಯನ ಯೋಜನೆ ರೂಪಿಸುವುದು ಕೂಡ ಉತ್ತಮ ಪರಿಹಾರ. ಈ ನದಿಗಳ ಜಲಾನಯನ ಪ್ರದೇಶ, ಅಚ್ಚಕಟ್ಟು ಪ್ರದೇಶವನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಆದ್ಯತೆ ಮೇರೆಗೆ ಹೂಳೆತ್ತುವ ಕಾಮಗಾರಿ ಕೈಗೊಳ್ಳಬೇಕು. ಗ್ರಾಮಗಳ ಕೆರೆಗಳು ಸೇರಿದಂತೆ ಎಲ್ಲ ಜಲಮೂಲಗಳನ್ನು ಪುನಶ್ಚೇತನ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಈ ಪ್ರದೇಶದ ಜನರು ಮಾತ್ರವಲ್ಲದೆ, ಜಾನುವಾರು ಹಾಗೂ ಪರಿಸರ ಉಳಿಸಲು ಶಾಶ್ವತ ಪರಿಹಾರ ನೀಡಬೇಕು. ಈ ಬಗ್ಗೆ ನನ್ನ ಮನವಿ ಪರಿಗಣಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೋರುತ್ತೇನೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಹಾಗೂ ಪಕ್ಕದ ಕೋಲಾರ, ತುಮಕೂರು ಜಿಲ್ಲೆಗಳು 2023ರಲ್ಲಿ ತೀವ್ರ ಬರಗಾಲ ಎದುರಿಸಿವೆ. ಈ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.</p>.<p>ಸಂಸತ್ ಅಧಿವೇಶನದಲ್ಲಿ ಗಮನ ಸೆಳೆಯುವ ಸೂಚನೆಯಡಿ ವಿಷಯ ಪ್ರಸ್ತಾಪಿಸಿದ ಅವರು, ಕುಡಿಯುವ ನೀರು ಹಾಗೂ ಕೃಷಿಗಾಗಿ ಕೈಗೊಳ್ಳಬೇಕಿರುವ ಶಾಶ್ವತ ಪರಿಹಾರ ಯೋಜನೆ ಹಾಗೂ ಕ್ರಮಗಳ ಬಗ್ಗೆ ವಿವರಿಸಿದರು.</p>.<p>ಕರ್ನಾಟಕ 2023ರಲ್ಲಿ ತೀವ್ರ ಬರಗಾಲ ಎದುರಿಸಿದೆ. ರಾಜ್ಯದ ಬಹುತೇಕ ಎಲ್ಲ </p>.<p>ಈ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುವ ಬದಲು, ರಾಜ್ಯ ಸರ್ಕಾರ ಸಂಸ್ಕರಿತ ನೀರನ್ನು (ಎಸ್ಟಿಪಿ) ಈ ಜಿಲ್ಲೆಗಳ ಕೆರೆಗಳಿಗೆ ಹರಿಸುತ್ತಿದೆ. ಇದರಿಂದ ಯಾವೆಲ್ಲ ಪರಿಣಾಮವಾಗಲಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಏಕೆಂದರೆ 80 ಲಕ್ಷ ಜನರು ಈ ನೀರನ್ನು ಕುಡಿಯುವ ಉದ್ದೇಶಕ್ಕೆ ಹಾಗೂ ಕೃಷಿಗೆ ಬಳಸುತ್ತಿದ್ದಾರೆ. ಹೀಗೆ ಎಸ್ಟಿಪಿ ನೀರನ್ನು ಕೆರೆ ತುಂಬಿಸಲು, ಕುಡಿಯಲು ಹಾಗೂ ಕೃಷಿಗೆ ಬಳಸುತ್ತಿರುವುದು ಇಡೀ ದೇಶದಲ್ಲೇ ಮೊದಲು ಎಂದು ಹೇಳಿದರು.</p>.<p>ಕೃಷ್ಣಾ ನದಿಯಿಂದ ಕನಿಷ್ಠ 5 ಟಿಎಂಸಿ ಅಡಿ ನೀರನ್ನು ಈ ಭಾಗಕ್ಕೆ ಸರಬರಾಜು ಮಾಡಬಹುದು. ಇದಕ್ಕಾಗಿ ಕಾಲುವೆಗಳನ್ನು ನಿರ್ಮಾಣ ಮಾಡಬಹುದು. ಹಾಗೆಯೇ ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವುದು ಕೂಡ ಪರಿಹಾರವಾಗಲಿದೆ. ಜೊತೆಗೆ, ಪಾಲಾರ್, ಪೆನ್ನಾರ್ ಮತ್ತು ಚಿತ್ರಾವತಿ ನದಿಗಳಲ್ಲಿ ವಿಶೇಷ ಜಲಾನಯನ ಯೋಜನೆ ರೂಪಿಸುವುದು ಕೂಡ ಉತ್ತಮ ಪರಿಹಾರ. ಈ ನದಿಗಳ ಜಲಾನಯನ ಪ್ರದೇಶ, ಅಚ್ಚಕಟ್ಟು ಪ್ರದೇಶವನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಆದ್ಯತೆ ಮೇರೆಗೆ ಹೂಳೆತ್ತುವ ಕಾಮಗಾರಿ ಕೈಗೊಳ್ಳಬೇಕು. ಗ್ರಾಮಗಳ ಕೆರೆಗಳು ಸೇರಿದಂತೆ ಎಲ್ಲ ಜಲಮೂಲಗಳನ್ನು ಪುನಶ್ಚೇತನ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಈ ಪ್ರದೇಶದ ಜನರು ಮಾತ್ರವಲ್ಲದೆ, ಜಾನುವಾರು ಹಾಗೂ ಪರಿಸರ ಉಳಿಸಲು ಶಾಶ್ವತ ಪರಿಹಾರ ನೀಡಬೇಕು. ಈ ಬಗ್ಗೆ ನನ್ನ ಮನವಿ ಪರಿಗಣಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೋರುತ್ತೇನೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>