<p><strong>ಶಿಡ್ಲಘಟ್ಟ</strong>: ತಾಲ್ಲೂಕಿನ ಕುದುಪಕುಂಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೊ ಸೆರೆ ಹಿಡಿದ ವ್ಯಕ್ತಿ ಮೇಲೆ ಪೋಷಕರು ಮಂಗಳವಾರ ಹಲ್ಲೆ ಮಾಡಿದ್ದಾರೆ. </p>.<p>ವಿಡಿಯೊ ಮಾಡಿದ್ದು ತಾನೇ ಎಂದು ಹೇಳಿಕೊಂಡಿದ್ದ ಬಯ್ಯಪ್ಪನಹಳ್ಳಿ ವಿಜಯ ಕುಮಾರ್ ಮೇಲೆ ಕುದುಪಕುಂಟೆ ಕೆಲವು ಪೋಷಕರು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ದಿಬ್ಬೂರಹಳ್ಳಿ ಪೊಲೀಸ್ ಠಾಣೆಗೆ ವಿಜಯ್ ಕುಮಾರ್ ದೂರು ನೀಡಿದ್ದಾರೆ.</p>.<p>ಬಿಇಒ ನರೇಂದ್ರಕುಮಾರ್ ಹಾಗೂ ಜಿಲ್ಲಾ ಸಫಾಯಿ ಕರ್ಮಚಾರಿಗಳ ಪುನರ್ವಸತಿ ಸಮಿತಿ ಸದಸ್ಯ ಲಕ್ಷ್ಮಣರಾಜು ಮಂಗಳವಾರ ಕುದುಪಕುಂಟೆ ಶಾಲೆಗೆ ಭೇಟಿ ನೀಡಿದ್ದರು. ಈ ವೇಳೆ ಶಾಲೆಗೆ ಬಂದಿದ್ದ ವಿಜಯ್ ಕುಮಾರ್ ಮತ್ತು ಅವರಣದಲ್ಲಿದ್ದ ಕೆಲ ಪೋಷಕರ ನಡುವೆ ಮಾತಿನ ಚಕಮಕಿ ನಡೆದಿದೆ.</p>.<p>‘ನಮ್ಮೂರ ಶಾಲೆಯಲ್ಲಿ ನಿಮಗೇನು ಕೆಲಸ. ನಮ್ಮೂರಿನ ಶಾಲೆಯ ಹೆಸರು ಕೆಡಿಸಲು ಬಂದಿದ್ದೀಯಾ, ಮಕ್ಕಳು ಶೌಚಾಲಯ ಸ್ವಚ್ಛ ಮಾಡುವಾಗ ನೀನೇಕೆ ವಿಡಿಯೊ ಮಾಡಿದೆ’ ಎಂದು ಪೋಷಕರು ಅವರನ್ನು ಪ್ರಶ್ನಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ತಾಲ್ಲೂಕಿನ ಕುದುಪಕುಂಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೊ ಸೆರೆ ಹಿಡಿದ ವ್ಯಕ್ತಿ ಮೇಲೆ ಪೋಷಕರು ಮಂಗಳವಾರ ಹಲ್ಲೆ ಮಾಡಿದ್ದಾರೆ. </p>.<p>ವಿಡಿಯೊ ಮಾಡಿದ್ದು ತಾನೇ ಎಂದು ಹೇಳಿಕೊಂಡಿದ್ದ ಬಯ್ಯಪ್ಪನಹಳ್ಳಿ ವಿಜಯ ಕುಮಾರ್ ಮೇಲೆ ಕುದುಪಕುಂಟೆ ಕೆಲವು ಪೋಷಕರು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ದಿಬ್ಬೂರಹಳ್ಳಿ ಪೊಲೀಸ್ ಠಾಣೆಗೆ ವಿಜಯ್ ಕುಮಾರ್ ದೂರು ನೀಡಿದ್ದಾರೆ.</p>.<p>ಬಿಇಒ ನರೇಂದ್ರಕುಮಾರ್ ಹಾಗೂ ಜಿಲ್ಲಾ ಸಫಾಯಿ ಕರ್ಮಚಾರಿಗಳ ಪುನರ್ವಸತಿ ಸಮಿತಿ ಸದಸ್ಯ ಲಕ್ಷ್ಮಣರಾಜು ಮಂಗಳವಾರ ಕುದುಪಕುಂಟೆ ಶಾಲೆಗೆ ಭೇಟಿ ನೀಡಿದ್ದರು. ಈ ವೇಳೆ ಶಾಲೆಗೆ ಬಂದಿದ್ದ ವಿಜಯ್ ಕುಮಾರ್ ಮತ್ತು ಅವರಣದಲ್ಲಿದ್ದ ಕೆಲ ಪೋಷಕರ ನಡುವೆ ಮಾತಿನ ಚಕಮಕಿ ನಡೆದಿದೆ.</p>.<p>‘ನಮ್ಮೂರ ಶಾಲೆಯಲ್ಲಿ ನಿಮಗೇನು ಕೆಲಸ. ನಮ್ಮೂರಿನ ಶಾಲೆಯ ಹೆಸರು ಕೆಡಿಸಲು ಬಂದಿದ್ದೀಯಾ, ಮಕ್ಕಳು ಶೌಚಾಲಯ ಸ್ವಚ್ಛ ಮಾಡುವಾಗ ನೀನೇಕೆ ವಿಡಿಯೊ ಮಾಡಿದೆ’ ಎಂದು ಪೋಷಕರು ಅವರನ್ನು ಪ್ರಶ್ನಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>