<p><strong>ಅಜ್ಜಂಪುರ:</strong> ‘ವೈದ್ಯರ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಖಾಲಿ ಹುದ್ದೆಗಳಿಗೆ ವೈದ್ಯರು ನಿಯೋಜನೆಗೊಳ್ಳಲಿದ್ದಾರೆ. ಆರೋಗ್ಯ ಕೇಂದ್ರದಲ್ಲಿ ಶೀಘ್ರ 6 ಹಾಸಿಗೆಯ ಐಸಿಯು ಘಟಕ ತೆರೆಯಲಾಗುವುದು’ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು. <strong><br></strong></p>.<p> ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ ನೂತನ ಡಯಾಲಿಸಿಸ್ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p> ಈವರೆಗೆ ತಾಲ್ಲೂಕಿನ ರೋಗಿಗಳು, ಡಯಾಲಿಸಿಸ್ಗಾಗಿ ತರೀಕೆರೆ, ಕಡೂರು, ಚಿಕ್ಕಮಗಳೂರಿನ ಸಾರ್ವಜನಿಕ ಆಸ್ಪತ್ರೆಗೆ ತೆರಳಬೇಕಿತ್ತು. ಈಗ ಇಲ್ಲೇ ಡಯಾಲಿಸಿಸ್ ಘಟಕ ಆರಂಭಿಸಲಾಗಿದೆ. ಇದಕ್ಕಾಗಿ ಸರ್ಕಾರ ಪ್ರತಿ ತಿಂಗಳು ₹2 ಲಕ್ಷ ಮೀಸಲಿರಿಸಿದೆ’ ಎಂದರು. <br></p>.<p> ‘ಜನಸಂಖ್ಯೆ ಕಡಿಮೆ ಇರುವ ಕಾರಣ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ವಿಳಂಬವಾಗುತ್ತಿದೆ’ ಎಂದರು. </p>.<p> ತಾಲ್ಲೂಕು ಆರೋಗ್ಯಾಧಿಕಾರಿ ಬಿ.ಜಿ. ಚಂದ್ರಶೇಖರ್ ಮಾತನಾಡಿ, ‘ನೂತನ ಘಟಕದಲ್ಲಿ 2 ಡಯಾಲಿಸಿಸ್ ಯಂತ್ರ ಅಳವಡಿಸಲಾಗಿದೆ. ನಿತ್ಯ 6 ಮಂದಿಗೆ ಚಿಕಿತ್ಸೆ ದೊರೆಯುತ್ತಿದ್ದು, ತಿಂಗಳಲ್ಲಿ 20 ರಿಂದ 30 ರೋಗಿಗಳಿಗೆ ಡಯಾಲಿಸಿಸ್ ಸೌಲಭ್ಯ ಸಿಗಲಿದೆ’ ಎಂದರು. <br></p>.<p> ಕೆಪಿಸಿಸಿ ಸದಸ್ಯ ಜಿ. ನಟರಾಜ್ ಮಾತನಾಡಿ, ‘ಡಯಾಲಿಸಿಸ್ ಘಟಕ ಸ್ಥಾಪನೆ ಶ್ಲಾಘನೀಯ. ‘ಮಕ್ಕಳ ವೈದ್ಯರು, ಸ್ತ್ರೀರೋಗ ತಜ್ಞರು, ಎಲುಬು – ಕೀಲು ತಜ್ಞರ ಹುದ್ದೆಗಳು ಖಾಳಿ ಇದ್ದು, ಭರ್ತಿಗೂ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p> ತಹಶೀಲ್ದಾರ್ ಶಿವಶರಣಪ್ಪ ಕಟ್ಟೋಳಿ, ಆರೋಗ್ಯಾಧಿಕಾರಿ ಡಾ. ನಟರಾಜ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ್, ಮುಖಂಡ ಜೋಗಿ ಪ್ರಕಾಶ್, ಮಸೂದ್ ಅಹಮದ್, ರಿಯಾಜ್, ಷಡಕ್ಷರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಯಾನಂದ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ತಿಪ್ಪೇಶ್ ಮಡಿವಾಳ್, ಗ್ಯಾರೆಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಕುಮಾರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಜ್ಜಂಪುರ:</strong> ‘ವೈದ್ಯರ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಖಾಲಿ ಹುದ್ದೆಗಳಿಗೆ ವೈದ್ಯರು ನಿಯೋಜನೆಗೊಳ್ಳಲಿದ್ದಾರೆ. ಆರೋಗ್ಯ ಕೇಂದ್ರದಲ್ಲಿ ಶೀಘ್ರ 6 ಹಾಸಿಗೆಯ ಐಸಿಯು ಘಟಕ ತೆರೆಯಲಾಗುವುದು’ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು. <strong><br></strong></p>.<p> ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ ನೂತನ ಡಯಾಲಿಸಿಸ್ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p> ಈವರೆಗೆ ತಾಲ್ಲೂಕಿನ ರೋಗಿಗಳು, ಡಯಾಲಿಸಿಸ್ಗಾಗಿ ತರೀಕೆರೆ, ಕಡೂರು, ಚಿಕ್ಕಮಗಳೂರಿನ ಸಾರ್ವಜನಿಕ ಆಸ್ಪತ್ರೆಗೆ ತೆರಳಬೇಕಿತ್ತು. ಈಗ ಇಲ್ಲೇ ಡಯಾಲಿಸಿಸ್ ಘಟಕ ಆರಂಭಿಸಲಾಗಿದೆ. ಇದಕ್ಕಾಗಿ ಸರ್ಕಾರ ಪ್ರತಿ ತಿಂಗಳು ₹2 ಲಕ್ಷ ಮೀಸಲಿರಿಸಿದೆ’ ಎಂದರು. <br></p>.<p> ‘ಜನಸಂಖ್ಯೆ ಕಡಿಮೆ ಇರುವ ಕಾರಣ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ವಿಳಂಬವಾಗುತ್ತಿದೆ’ ಎಂದರು. </p>.<p> ತಾಲ್ಲೂಕು ಆರೋಗ್ಯಾಧಿಕಾರಿ ಬಿ.ಜಿ. ಚಂದ್ರಶೇಖರ್ ಮಾತನಾಡಿ, ‘ನೂತನ ಘಟಕದಲ್ಲಿ 2 ಡಯಾಲಿಸಿಸ್ ಯಂತ್ರ ಅಳವಡಿಸಲಾಗಿದೆ. ನಿತ್ಯ 6 ಮಂದಿಗೆ ಚಿಕಿತ್ಸೆ ದೊರೆಯುತ್ತಿದ್ದು, ತಿಂಗಳಲ್ಲಿ 20 ರಿಂದ 30 ರೋಗಿಗಳಿಗೆ ಡಯಾಲಿಸಿಸ್ ಸೌಲಭ್ಯ ಸಿಗಲಿದೆ’ ಎಂದರು. <br></p>.<p> ಕೆಪಿಸಿಸಿ ಸದಸ್ಯ ಜಿ. ನಟರಾಜ್ ಮಾತನಾಡಿ, ‘ಡಯಾಲಿಸಿಸ್ ಘಟಕ ಸ್ಥಾಪನೆ ಶ್ಲಾಘನೀಯ. ‘ಮಕ್ಕಳ ವೈದ್ಯರು, ಸ್ತ್ರೀರೋಗ ತಜ್ಞರು, ಎಲುಬು – ಕೀಲು ತಜ್ಞರ ಹುದ್ದೆಗಳು ಖಾಳಿ ಇದ್ದು, ಭರ್ತಿಗೂ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p> ತಹಶೀಲ್ದಾರ್ ಶಿವಶರಣಪ್ಪ ಕಟ್ಟೋಳಿ, ಆರೋಗ್ಯಾಧಿಕಾರಿ ಡಾ. ನಟರಾಜ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ್, ಮುಖಂಡ ಜೋಗಿ ಪ್ರಕಾಶ್, ಮಸೂದ್ ಅಹಮದ್, ರಿಯಾಜ್, ಷಡಕ್ಷರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಯಾನಂದ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ತಿಪ್ಪೇಶ್ ಮಡಿವಾಳ್, ಗ್ಯಾರೆಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಕುಮಾರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>